ಹೆಮ್ಮಾಡಿ ಜನತಾ ಕಾಲೇಜಿನ ವಿದ್ಯಾರ್ಥಿನಿ ಛಾಯಾ ಸಿ ಪೂಜಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆ
ಕುಂದಾಪುರ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿ ಪೂರ್ವ ಶಿಕ್ಷಣ ವಿಭಾಗ) ಚಾಮರಾಜನಗರ ದಲ್ಲಿ ಆಯೋಜಿಸಿದ ರಾಜ್ಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದು ವಿಜೇತರಾದ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಛಾಯಾ ಸಿ. ಪೂಜಾರಿ ತಮಿಳುನಾಡಿ ನಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಪ್ರಿನ್ಸಿಪಾಲ್,ಬೋಧಕ, ಬೋಧಕೇತರ ಸಿಬ್ಬಂದಿಗಳು ಶುಭಹಾರೈಸಿದ್ದಾರೆ.