ಕುಂದಾಪುರ

ವಿವೇಕ ಕೊಠಡಿ ಉದ್ಘಾಟನೆ,ಚಿಣ್ಣರ ಕಲರವ ಕಾರ್ಯಕ್ರಮ

Share

ಕುಂದಾಪುರ:ಮುಗ್ಧ ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಹೊರ ಹೊಮ್ಮಿಸಿ,ಮಕ್ಕಳು ಸರ್ವತೋಮುಖವಾಗಿ ಬೆಳವಣಿಗೆ ಹೊಂದಲು ಪಾಲಕರು,ಶಿಕ್ಷಕರು,ಸಮುದಾಯದ ಪಾತ್ರ ಹಿರಿದಾಗಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.
ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಕೊಡಪಾಡಿ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ವಿವೇಕ ಕೊಠಡಿಯನ್ನು ಉದ್ಘಾಟಿಸಿದ ಅವರು ಚಿಣ್ಣರ ಕಲರವ ಕಾರ್ಯಕ್ರಮದಲ್ಲಿ ಭಾಗವವಹಿಸಿ ಮಾತನಾಡಿದರು.
ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ತಮ್ಮಯ್ಯ ದೇವಾಡಿಗ ಅಧ್ಯಕ್ಷತೆಯನ್ನು ವಹಿಸಿದ್ದರು.ತ್ರಾಸಿ ಗ್ರಾ.ಪಂ ಅಧ್ಯಕ್ಷ ಮಿಥುನ್ ದೇವಾಡಿಗ,ಗುಜ್ಜಾಡಿ ಪಂಚಾಯಿತಿ ಉಪಾಧ್ಯಕ್ಷೆ ನಾಗರತ್ನ ಮತ್ತು ಸದಸ್ಯರಾದ ಹರೀಶ್ ಮೇಸ್ತ ಗುಜ್ಜಾಡಿ,ಬೈಂದೂರು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ,ಸವ್ಯಸಾಚಿ ಯುವಕ ಮಂಡಲದ ಅಧ್ಯಕ್ಷ ಗುರುಪ್ರಸಾದ ಗಾಣಿಗ,ಕಾರ್ಯದರ್ಶಿ ರಾಜು ಗಾಣಿಗ,ಮಾರಿಕಾಂಬಾ ಮಹಿಳಾ ಅಧ್ಯಕ್ಷೆ ಶಾರದಾ ದೇವಾಡಿಗ,ಅಂಗನವಾಡಿ ಮೇಲ್ವಿಚಾರಕಿ ರೇಖಾ,ಎಸ್‍ಡಿಎಂಸಿ ಅಧ್ಯಕ್ಷೆ ಅನಿತಾ ಖಾರ್ವಿ,ಶಾಲಾ ನಾಯಕಿ ವೈಭವ ಉಪಸ್ಥಿತರಿದ್ದರು.ಶಿಕ್ಷಕಿ ನಯನ ಸ್ವಾಗತಿಸಿದರು.ಶಾಲಾ ಮುಖ್ಯೋಪಾಧ್ಯಾಯಿನಿ ವೀಣಾ ವರದಿ ವಾಚಿಸಿದರು,ಭಾಸ್ಕರ ಗಾಣಿಗ ನಿರೂಪಿಸಿದರು.ಶಿಕ್ಷಕಿ ಸುಶೀಲಾ ವಂದಿಸಿದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

13 hours ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

1 month ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

1 month ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago