ಕುಂದಾಪುರ:ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮತ್ತು ಲಿಟ್ಲ್ ಸ್ಟಾರ್ ಅಂಗ್ಲ ಮಾಧ್ಯಮ ಶಾಲೆ ಸುಣ್ಣಾರಿ ಕುಂದಾಪುರ ಅದರ ಜಂಟಿ ವಾರ್ಷಿಕ,ಕ್ರೀಡಾಕೂಟ ಕಾರ್ಯಕ್ರಮ ಎಕ್ಸಲೆಂಟ್ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆಯಿತು.
ಕುಂದಾಪುರ ಆರಕ್ಷಕ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪ್ರಸಾದ್ ಕೆ ಅವರು ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ,ಕ್ರೀಡೆ ವಿದ್ಯಾರ್ಥಿಗಳಲ್ಲಿ ಆತ್ಮ ಸ್ಥೈರ್ಯವನ್ನು ತುಂಬುತ್ತದೆ. ಜೀವನದಲ್ಲಿ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಲು, ಸೋಲು-ಗೆಲುವುಗಳನ್ನು ಸಮನಾಗಿ ಸ್ವೀಕರಿಸಲು ಇಂತಹ ಕ್ರೀಡಾಕೂಟಗಳು ಸಹಕಾರಿಯಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಂ.ಎಂ ಹೆಗ್ಡೆ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಎಮ್ .ಮಹೇಶ್ ಹೆಗ್ಡೆ ಅವರು ಮಾತನಾಡಿ,ಗ್ರಾಮೀಣ ಭಾಗದಲ್ಲಿ ಸೃಷ್ಟಿಸಿದ ವಿದ್ಯಾಸಂಸ್ಥೆ ಬೆಳೆಯುತ್ತಿರುವ ರೀತಿ ನೋಡಿದರೆ ಬಹಳ ಸಂತೋಷವಾಗುತ್ತದೆ.ಮಿನಿ ಒಲಂಪಿಕ್ ರೀತಿಯಲ್ಲಿ ಆಯೋಜನೆಗೊಂಡಿರುವ ಈ ಕ್ರೀಡಾಕೂಟ ಎಲ್ಲರಿಗೂ ಮಾದರಿಯಾಗಲಿ ಎಂದು ಶುಭಾ ಹಾರೈಸಿದರು.ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ.ರಮೇಶ ಶೆಟ್ಟಿ, ಲಿಟ್ಲ್ ಸ್ಟಾರ್ ಅಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ಅಗಸ್ಟಿನ್ ಕೆ.ಎ ಉಪಸ್ಥಿತರಿದ್ದರು.
ಎಕ್ಸಲೆಂಟ್,ಪದವಿ ಪೂರ್ವ ಕಾಲೇಜು ಮತ್ತು ಲಿಟ್ಲ್ ಸ್ಟಾರ್ ಅಂಗ್ಲ ಮಾಧ್ಯಮ ಶಾಲೆಗಳು 1400ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ಮೂಡಿ ಬಂತು.ಕ್ರೀಡಾಭಿಮಾನಿಗಳು ಧ್ವಜ ವಂದನೆಯನ್ನು ಸ್ವೀಕರಿಸಿದರು.ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳು ಪಥ ಸಂಚಲನದಲ್ಲಿ ಭಾಗವಹಿಸಿದ್ದರು.
ಎಕ್ಸಲೆಂಟ್ ಕಾಲೇಜಿನ ರಾಷ್ಟ್ರಮಟ್ಟದ ಕ್ರೀಡಾಪಟು ಮಾನಸ ಕ್ರೀಡಾ ಜ್ಯೋತಿ ಹೊತ್ತು ಸಾಗಿದರು ,ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳು ಪಥ ಸಂಚಲನದಲ್ಲಿ ಭಾಗವಹಿಸಿದ್ದರು.
ಖಜಾಂಚಿ ಭರತ್ ಶೆಟ್ಟಿ ಸ್ವಾಗತಿಸಿ ವಾಸ್ತವಿಕ ಮಾತನಾಡಿದರು.ಅಮೃತ ಭಾರತಿ ಎಜುಕೇಶನಲ್ ಟ್ರಸ್ಟ್ನ ಪಿ.ಆರ್.ಒ ವಿಜಯ್ ಕುಮಾರ್ ಶೆಟ್ಟಿ, ಕಾರ್ಯಕ್ರಮ ನಿರ್ವಹಿಸಿದರು. ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಸತೀಶ್ ವಂದಿಸಿದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…