ಮುಳ್ಳಿಕಟ್ಟೆ ಸರ್ಕಲ್ ನಲ್ಲಿ ಅಪಘಾತ:ಕಾರ್ ಜಖಂ
ಕುಂದಾಪುರ:ಮುಳ್ಳಿಕಟ್ಟೆ ಯಿಂದ ಮರವಂತೆ ಕಡೆಗೆ ಸಾಗುತ್ತಿದ್ದ ಕಾರ್ಗೆ ಬೈಕ್ ಅಡ್ಡ ಬಂದ ಪರಿಣಾಮ ನಿಯಂತ್ರಣ ತಪ್ಪಿದ ಕಾರ್ ವಿದ್ಯುತ್ ಕಂಬಕ್ಕೆ ಗುದ್ದಿ,ಡಿವೈಡರ್ ದಾಟಿ ಪಕ್ಕದ ರೋಡಿನಲ್ಲಿ ಬೈಂದೂರು ಕಡೆಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಇನೋವಾ ಕಾರಿಗೆ ಡಿಕ್ಕಿ ಹೊಡೆದಿದೆ.ಎರಡು ಕಾರಿನ ಮುಂಭಾಗ ಜಖಂ ಗೊಂಡಿದ್ದು ಚಾಲಕ ಮತ್ತು ಪ್ರಯಾಣಿಕರಿಬ್ಬರೂ ಪಾರಾದ ಘಟನೆ ಮಂಗಳವಾರ ನಡೆದಿದೆ.ಗಂಗೊಳ್ಳಿ ಠಾಣೆಯ ಸಿಬ್ಬಂದಿಗಳು ಘಟನೆಯ ಸ್ಥಳಕ್ಕೆ ಆಗಮಿಸಿ ಸ್ಥಳ ಮಹಜರು ನಡೆಸಿದರು.ಅವೈಜ್ಞಾನಿಕತೆಯಿಂದ ಕೂಡಿದ ಮುಳ್ಳಿಕಟ್ಟೆ ಸರ್ಕಲ್ನಲ್ಲಿ ಆಗಿಂದಾಗೆ ಅಪಘಾತಗಳು ಸಂಭವಿಸುತ್ತಲೇ ಇದೆ,ಪ್ರಯಾಣಿಕರ ಹಿತ ದೃಷ್ಟಿಯಿಂದ ವೈಜ್ಞಾನಿಕ ರೀತಿಯಲ್ಲಿ ಸರ್ಕಲ್ ನಿರ್ಮಿಸಬೇಕ್ಕುನ್ನುವುದು ಸಾರ್ವಜನಿಕರ ಬೇಡಿಕೆ ಆಗಿದೆ.