ಕುಂದಾಪುರ:ಹಕ್ಲಾಡಿ ಗ್ರಾಮದ ತೋಪ್ಲು ಎಂಬಲ್ಲಿ ಚಕ್ರ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಿಂಡಿ ಅಣೆಕಟ್ಟಿಗೆ ಶಿಥಿಲಾವಸ್ಥೆಯಲ್ಲಿರುವ ಹಲಗೆಗಳನ್ನು ಅಳವಡಿಸುತ್ತಿರುವ ಗುತ್ತಿಗೆದಾರರ ವಿರುದ್ಧ ಗ್ರಾಮಸ್ಥರು ಪ್ರತಿಭಟಿಸಿದ ಘಟನೆ ಬುಧವಾರ ನಡೆದಿದೆ.
ಚಕ್ರ ನದಿ ತೀರದ ಗ್ರಾಮಗಳಾದ ಹಕ್ಲಾಡಿ,ಬಾರಂದಾಡಿ,ಬಗ್ವಾಡಿ,
ಕಟ್ ಬೇಲ್ತೂರು,ತುಳಸಿ,ತೋಪ್ಲು,ವಂಡ್ಸೆ ಗ್ರಾಮದ ಜನರಿಗೆ ಕೃಷಿಗೆ ಹಾಗೂ ಕುಡಿಯುವ ನೀರಿಗೆ ಅನುಕೂಲವಾಗುವ ದೃಷ್ಟಿಯಿಂದ ಸುಮಾರು 17 ವರ್ಷಗಳ ಹಿಂದೆ ಸಣ್ಣ ನೀರಾವರಿ ಇಲಾಖೆಯಡಿ 13ಕೋಟಿ.ರೂ ವೆಚ್ಚದಲ್ಲಿ ಹಕ್ಲಾಡಿ ಗ್ರಾಮದ ತೋಪ್ಲು ಎಂಬಲ್ಲಿ ಚಕ್ರ ನದಿಗೆ ಅಡ್ಡಲಾಗಿ ಕಿಂಡಿ ಅಣೆಕಟ್ಟನ್ನು ನಿರ್ಮಿಸಲಾಗಿದೆ.ಅಣೆಕಟ್ಟಿನ ನಿರ್ವಹಣೆಗೆಂದೇ ವರ್ಷಕ್ಕೆ ಸರಿ ಸುಮಾರು 7.ಲಕ್ಷ.ಕ್ಕೂ ಅಧಿಕ ಹಣವನ್ನು ಖರ್ಚು ಮಾಡಲಾಗುತ್ತಿದೆ.ಅಣೆಕಟ್ಟಿನ ನಿರ್ವಹಣೆಯನ್ನು ಹಲವಾರು ವರ್ಷಗಳಿಂದಲೂ ಸರಿಯಾಗಿ ನಿರ್ವಹಿಸದೆ ಇದ್ದಿದ್ದರಿಂದ ಕಿಂಡಿ ಅಣೆಕಟ್ಟಿಗೆ ಅಳವಡಿಸುವ ಹಲಗೆಗಳು ದುಸ್ಥಿತಿಗೆ ತಲುಪಿದೆ.ಅಣೆಕಟ್ಟಿನ ಒಡಲಲ್ಲಿ ಹೂಳು ಮಣ್ಣು ತುಂಬಿಕೊಂಡಿದೆ.ಮಣ್ಣಿನ ರಾಶಿಗಳು ಅಲಲ್ಲಿ ಗುಡ್ಡೆಯಾಗಿ ಕೃತಕ ದ್ವೀಪ ಸೃಷ್ಟಿಯಾಗಿದೆ.ಸಣ್ಣ ನೀರಾವರಿ ಇಲಾಖೆ ಬೇಜಾವಾಬ್ದಾರಿ ತನದಿಂದ ಬಹುಪಯೋಗಿ ಯಾಗಿರುವ ಅಣೆಕಟ್ಟಿನ ಉಪಯೋಗ ಜನರಿಗೆ ತಲುಪದಂತಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಉಪ್ಪು ನೀರಿನ ತಡೆಗೆಂದೆ ಕಿಂಡಿಗಳಿಗೆ ಹಲಗೆಗಳನ್ನು ಅಳವಡಿಸಬೇಕಾಗಿರುವುದ
ರಿಂದ.ಹದಗೆಟ್ಟು ಹೋಗಿದ್ದ ಶಿಥಿಲಾವಸ್ಥೆಯಲ್ಲಿರುವ ಹಲಗೆಗಳನ್ನು ಅಳವಡಿಕೆ ಮಾಡಬಾರದೇನ್ನುವುದು ಗ್ರಾಮಸ್ಥರ ಆಗ್ರಹ.ದುಸ್ಥಿತಿಯಲ್ಲಿದ್ದ ಹಲಗೆಗಳನ್ನು ಅಳವಡಿಸುವುದರಿಂದ ಉಪ್ಪು ನೀರು ಒಳ ನುಗ್ಗಿ ಬರುವುದರಿಂದ ಯಾವುದೇ ರೀತಿಯ ಪ್ರಯೋಜನವಿಲ್ಲ ಎನ್ನುವುದು ಗ್ರಾಮಸ್ಥರ ವಾದವಾಗಿದೆ.ತೋಪ್ಲು ಕಿಂಡಿ ಅಣೆಕಟ್ಟಿಗೆ ವೈಜ್ಞಾನಿಕ ರೀತಿಯಲ್ಲಿ ಕೂಡಿದ ಹಲಗೆಗಳನ್ನು ಅಳವಡಿಸಬೇಕ್ಕುನ್ನುವುದು ಗ್ರಾಮಸ್ಥರ ಬೇಡಿಕೆ.ಅವಧಿಗೆ ಮುನ್ನವೆ ಅಣೆಕಟ್ಟಿನ ಕಿಂಡಿಗಳಿಗೆ ಹಲಗೆಗಳನ್ನು ಹಾಕದೆ ಇದ್ದಿದ್ದರಿಂದ ಇಳಿತ,ಭರತದ ಮುಖೇನ ಈಗಾಗಲೇ ಹಿನ್ನಿರಿನ ಪ್ರದೇಶಕ್ಕೆ ಉಪ್ಪು ನೀರು ನುಗ್ಗಿದೆ.ಅಣೆಕಟ್ಟಿಗೆ ಹಲಗೆಗಳನ್ನು ಹಾಕಿ ನೀರನ್ನು ತಡೆ ಹಿಡಿಯುವುದರಿಂದ ಉಪ್ಪು ನೀರು ತುಂಬಿಕೊಂಡು ಬಾವಿ ನೀರು ಉಪ್ಪಾಗಲಿದೆ ಎನ್ನುವುದು ಸ್ಥಳೀಯರ ಆತಂಕವಾಗಿದೆ.
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…