ಕುಂದಾಪುರ

ಡ್ಯಾಂಗಳ ಸ್ಥಿತಿ ಸುಧಾರಣೆ ಆಗಬೇಕು-ಶಾಸಕ ಗಂಟಿಹೊಳೆ

Share

Advertisement
Advertisement
Advertisement

ಕುಂದಾಪುರ:ವೆಂಟೆಡ್ ಡ್ಯಾಂಗಳ ಸ್ಥಿತಿ ಸುಧಾರಣೆ ಆಗಬೇಕು ಎನ್ನುವ ದೃಷ್ಟಿಯಿಂದ ಗ್ರಾಮಸ್ಥರ ಜತೆಗೂಡಿ ಪ್ರತಿಭಟನೆಯನ್ನು ಕೈಗೆತ್ತಿಗೊಳ್ಳಲಾಗಿದೆ.ಸಂಬಂದಪಟ್ಟ ಅಧಿಕಾರಿಗಳು ಸೂಕ್ತವಾದ ಉತ್ತರವನ್ನು ನೀಡದೆ ಪ್ರತಿಭಟನೆಯನ್ನು ಕೈಬೀಡುವ ಪ್ರಶ್ನೆ ಇಲ್ಲಾ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.ಕುಂದಾಪುರ ತಾಲೂಕಿನ ಬೈಂದೂರು ವಿಧಾನ ಸಭಾ ಕ್ಷೇತ್ರದ ಹಕ್ಲಾಡಿ ಗ್ರಾಮದ ತೋಪ್ಲು ಕಿಂಡಿ ಅಣೆಕಟ್ಟಿನ ಅವ್ಯವಸ್ಥೆ ವಿರುದ್ಧ ಬುಧವಾರ ನಡೆದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ,ಅವರು ಮಾತನಾಡಿದರು.
ಸ್ಥಳೀಯರ ಬೇಡಿಕೆಗೆ ಅಧಿಕಾರಿಗಳು ಸ್ಪಂದನೆ ಮಾಡಬೇಕು,ಪ್ರತಿ ಊರಿನ ವ್ಯವಸ್ಥೆಗೂ ಅಧಿಕಾರಿಗಳು ಕಿವಿ ಗೊಡಬೇಕು.ಜನರ ಉಪಯೋಗಕ್ಕೆ ಅನುಕೂಲವಾಗುವಂತೆ ಡ್ಯಾಂಗಳ ನಿರ್ವಹಣೆಯನ್ನು ಮಾಡಬೇಕು.ಎಲ್ಲೆಲ್ಲಿ ಅವ್ಯವಸ್ಥೆ ಇದೆ ಅದರ ಬಗ್ಗೆ ತನಿಖೆ ಮಾಡಿ ಯೋಜನೆಯ ಲಾಭ ಜನರಿಗೆ ದೊರಕುವಂತೆ ಆಗಬೇಕು.ಅಣೆಕಟ್ಟಿಗೆ ಅಗತ್ಯವಾಗಿರುವ ಹಲಗೆಗಳನ್ನು ಒದಗಿಸಿಕೊಳ್ಳಲು ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಹೇಳಿದರು.

Advertisement


ಸಣ್ಣ ನೀರಾವರಿ ಇಲಾಖೆ ಅಧಿನಕ್ಕೆ ಒಳಪಟ್ಟಿದ್ದ ಡ್ಯಾಂಗಳು ಜನರ ಉಪಯೋಗಕ್ಕೆ ಬಾರದ ರೀತಿಯಲ್ಲಿ ಕೆಲಸವನ್ನು ನಿರ್ವಹಿಸುತ್ತಿವೆ.ಜನರ ಅನುಕೂಲಕ್ಕೆ ತಕ್ಕಂತೆ ಯಾವುದೆ ರೀತಿ ವ್ಯವಸ್ಥೆಯನ್ನು ಅಧಿಕಾರಿಗಳು ಕಲ್ಪಿಸುತ್ತಿಲ್ಲ.ಬದಲಾದ ರಾಜಕೀಯ ವ್ಯವಸ್ಥೆಯಲ್ಲಿ ಅಧಿಕಾರಿಗಳ ಕಾರ್ಯ ವೈಖರಿಯೇ ಬದಲಾದಂತೆ ಇದೆ ಎಂದು ಶಾಸಕರು ತಮ್ಮ ಅಸಾಮಾಧಾನವನ್ನು ಹೊರ ಹಾಕಿದರು.ಜನರಿಗೆ ತೊಂದರೆ ಆದರೆ ಕ್ಷಮಿಸುವ ಪ್ರಶ್ನೆಯೇ ಇಲ್ಲಾ ಸದಾ ಕ್ಷೇತ್ರದ ಜನರ ಜತೆ ನಿಂತು ನ್ಯಾಯ ದೊರಕಿಸಿ ಕೊಡುವಂತ ಕೆಲಸವನ್ನು ಮಾಡಲಾಗುವುದು ಎಂದರು.
ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ಸುರೇಶ್ ಶೆಟ್ಟಿ ,ಕೃಷ್ಣ ಪ್ರಸಾದ್ ಅಡ್ಯಂತಾಯ,ಹಕ್ಲಾಡಿ ಪಂಚಾಯಿತಿ ಉಪಾಧ್ಯಕ್ಷ ಸುಭಾಷ್ ಶೆಟ್ಟಿ ಹೊಳ್ಮಗೆ,ಮಾಜಿ ಅಧ್ಯಕ್ಷ ಚೇತನ್ ಮೊಗವೀರ,ಸದಸ್ಯರಾದ ಚೇತನ ಹೆಗ್ಡೆ,ಮಂಜು ಮಡಿವಾಳ,ಜ್ಯೋತಿ ಮೊಗವೀರ,ಬಸವ.ಪಿ ನಾಯ್ಕ್,ಭಾಸ್ಕರ ಪೂಜಾರಿ,ಸ್ಥಳೀಯರಾದ ಸುರೇಂದ್ರ ಪೂಜಾರಿ,ಮಹೇಶ್ ಮೊಗವೀರ,ಗ್ರಾಮಸ್ಥರು ಉಪಸ್ಥಿತರಿದ್ದರು.ಕುಂದಾಪುರ ತಹಶೀಲ್ದಾರ್ ಶೋಭಾಲಕ್ಷ್ಮೀ,ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಪುನೀತ್ ಮತ್ತು ನಾಗಲಿಂಗಯ್ಯ.ಆರ್.ಐ ರಾಘವೇಂದ್ರ ದೇವಾಡಿಗ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.ಗಂಗೊಳ್ಳಿ ಠಾಣೆ ಪಿಎಸ್‍ಐ ಬಸವರಾಜ ಕನಶೆಟ್ಟಿ (ತನಿಖೆ) ಮತ್ತು ಸಿಬ್ಬಂದಿಗಳು ಹಾಜರಿದ್ದರು.

(ಕಿಂಡಿ ಅಣೆಕಟ್ಟಿನ ಅವ್ಯವಸ್ಥೆ ವಿರುದ್ಧ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಗ್ರಾಮಸ್ಥರ ಜತೆಗೂಡಿ ಬುಧವಾರ ಪ್ರತಿಭಟನೆಯನ್ನು ನಡೆಸಿದರು)

Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

2 days ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

3 days ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

6 days ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

7 days ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

7 days ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

2 weeks ago