ಕುಂದಾಪುರ

ಡ್ಯಾಂಗಳ ಸ್ಥಿತಿ ಸುಧಾರಣೆ ಆಗಬೇಕು-ಶಾಸಕ ಗಂಟಿಹೊಳೆ

Share

ಕುಂದಾಪುರ:ವೆಂಟೆಡ್ ಡ್ಯಾಂಗಳ ಸ್ಥಿತಿ ಸುಧಾರಣೆ ಆಗಬೇಕು ಎನ್ನುವ ದೃಷ್ಟಿಯಿಂದ ಗ್ರಾಮಸ್ಥರ ಜತೆಗೂಡಿ ಪ್ರತಿಭಟನೆಯನ್ನು ಕೈಗೆತ್ತಿಗೊಳ್ಳಲಾಗಿದೆ.ಸಂಬಂದಪಟ್ಟ ಅಧಿಕಾರಿಗಳು ಸೂಕ್ತವಾದ ಉತ್ತರವನ್ನು ನೀಡದೆ ಪ್ರತಿಭಟನೆಯನ್ನು ಕೈಬೀಡುವ ಪ್ರಶ್ನೆ ಇಲ್ಲಾ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.ಕುಂದಾಪುರ ತಾಲೂಕಿನ ಬೈಂದೂರು ವಿಧಾನ ಸಭಾ ಕ್ಷೇತ್ರದ ಹಕ್ಲಾಡಿ ಗ್ರಾಮದ ತೋಪ್ಲು ಕಿಂಡಿ ಅಣೆಕಟ್ಟಿನ ಅವ್ಯವಸ್ಥೆ ವಿರುದ್ಧ ಬುಧವಾರ ನಡೆದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ,ಅವರು ಮಾತನಾಡಿದರು.
ಸ್ಥಳೀಯರ ಬೇಡಿಕೆಗೆ ಅಧಿಕಾರಿಗಳು ಸ್ಪಂದನೆ ಮಾಡಬೇಕು,ಪ್ರತಿ ಊರಿನ ವ್ಯವಸ್ಥೆಗೂ ಅಧಿಕಾರಿಗಳು ಕಿವಿ ಗೊಡಬೇಕು.ಜನರ ಉಪಯೋಗಕ್ಕೆ ಅನುಕೂಲವಾಗುವಂತೆ ಡ್ಯಾಂಗಳ ನಿರ್ವಹಣೆಯನ್ನು ಮಾಡಬೇಕು.ಎಲ್ಲೆಲ್ಲಿ ಅವ್ಯವಸ್ಥೆ ಇದೆ ಅದರ ಬಗ್ಗೆ ತನಿಖೆ ಮಾಡಿ ಯೋಜನೆಯ ಲಾಭ ಜನರಿಗೆ ದೊರಕುವಂತೆ ಆಗಬೇಕು.ಅಣೆಕಟ್ಟಿಗೆ ಅಗತ್ಯವಾಗಿರುವ ಹಲಗೆಗಳನ್ನು ಒದಗಿಸಿಕೊಳ್ಳಲು ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಹೇಳಿದರು.


ಸಣ್ಣ ನೀರಾವರಿ ಇಲಾಖೆ ಅಧಿನಕ್ಕೆ ಒಳಪಟ್ಟಿದ್ದ ಡ್ಯಾಂಗಳು ಜನರ ಉಪಯೋಗಕ್ಕೆ ಬಾರದ ರೀತಿಯಲ್ಲಿ ಕೆಲಸವನ್ನು ನಿರ್ವಹಿಸುತ್ತಿವೆ.ಜನರ ಅನುಕೂಲಕ್ಕೆ ತಕ್ಕಂತೆ ಯಾವುದೆ ರೀತಿ ವ್ಯವಸ್ಥೆಯನ್ನು ಅಧಿಕಾರಿಗಳು ಕಲ್ಪಿಸುತ್ತಿಲ್ಲ.ಬದಲಾದ ರಾಜಕೀಯ ವ್ಯವಸ್ಥೆಯಲ್ಲಿ ಅಧಿಕಾರಿಗಳ ಕಾರ್ಯ ವೈಖರಿಯೇ ಬದಲಾದಂತೆ ಇದೆ ಎಂದು ಶಾಸಕರು ತಮ್ಮ ಅಸಾಮಾಧಾನವನ್ನು ಹೊರ ಹಾಕಿದರು.ಜನರಿಗೆ ತೊಂದರೆ ಆದರೆ ಕ್ಷಮಿಸುವ ಪ್ರಶ್ನೆಯೇ ಇಲ್ಲಾ ಸದಾ ಕ್ಷೇತ್ರದ ಜನರ ಜತೆ ನಿಂತು ನ್ಯಾಯ ದೊರಕಿಸಿ ಕೊಡುವಂತ ಕೆಲಸವನ್ನು ಮಾಡಲಾಗುವುದು ಎಂದರು.
ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ಸುರೇಶ್ ಶೆಟ್ಟಿ ,ಕೃಷ್ಣ ಪ್ರಸಾದ್ ಅಡ್ಯಂತಾಯ,ಹಕ್ಲಾಡಿ ಪಂಚಾಯಿತಿ ಉಪಾಧ್ಯಕ್ಷ ಸುಭಾಷ್ ಶೆಟ್ಟಿ ಹೊಳ್ಮಗೆ,ಮಾಜಿ ಅಧ್ಯಕ್ಷ ಚೇತನ್ ಮೊಗವೀರ,ಸದಸ್ಯರಾದ ಚೇತನ ಹೆಗ್ಡೆ,ಮಂಜು ಮಡಿವಾಳ,ಜ್ಯೋತಿ ಮೊಗವೀರ,ಬಸವ.ಪಿ ನಾಯ್ಕ್,ಭಾಸ್ಕರ ಪೂಜಾರಿ,ಸ್ಥಳೀಯರಾದ ಸುರೇಂದ್ರ ಪೂಜಾರಿ,ಮಹೇಶ್ ಮೊಗವೀರ,ಗ್ರಾಮಸ್ಥರು ಉಪಸ್ಥಿತರಿದ್ದರು.ಕುಂದಾಪುರ ತಹಶೀಲ್ದಾರ್ ಶೋಭಾಲಕ್ಷ್ಮೀ,ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಪುನೀತ್ ಮತ್ತು ನಾಗಲಿಂಗಯ್ಯ.ಆರ್.ಐ ರಾಘವೇಂದ್ರ ದೇವಾಡಿಗ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.ಗಂಗೊಳ್ಳಿ ಠಾಣೆ ಪಿಎಸ್‍ಐ ಬಸವರಾಜ ಕನಶೆಟ್ಟಿ (ತನಿಖೆ) ಮತ್ತು ಸಿಬ್ಬಂದಿಗಳು ಹಾಜರಿದ್ದರು.

(ಕಿಂಡಿ ಅಣೆಕಟ್ಟಿನ ಅವ್ಯವಸ್ಥೆ ವಿರುದ್ಧ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಗ್ರಾಮಸ್ಥರ ಜತೆಗೂಡಿ ಬುಧವಾರ ಪ್ರತಿಭಟನೆಯನ್ನು ನಡೆಸಿದರು)

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

2 months ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago