ಸುರೇಂದ್ರ ನಾಡ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿಯಾಗಿ ಆಯ್ಕೆ
ಕುಂದಾಪುರ:ಶಾಲೆಯಿಂದ ಹೊರಗುಳಿದ ಮತ್ತು ಶಾಲೆ ಬಿಟ್ಟು ದುಡಿಯುತ್ತಿರುವ ಮಕ್ಕಳನ್ನು ಸಮೀಕ್ಷೆ ನಡೆಸಿ ಅವರನ್ನು ಸರಕಾರಿ ಶಾಲೆಗೆ ದಾಖಲಾತಿ ಮಾಡುವುದರ ಮುಖೇನ ಉತ್ತಮ ಸೇವೆಯನ್ನು ಸಲ್ಲಿಸುತ್ತಿರುವ.ರಾಷ್ಟ್ರ ಮತ್ತು ರಾಜ್ಯ ಮಟ್ಟದ ಶೈಕ್ಷಣಿಕ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿರುವ ಕುಂದಾಪುರ ತಾಲೂಕಿನ ಸೇನಾಪುರ ಗ್ರಾಮದ ನಿವಾಸಿ ಸುರೇಂದ್ರ ನಾಡ ಗುಡ್ಡೆಹೋಟೆಲ್ ಅವರು ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿಯಾಗಿ ಆಯ್ಕೆಯಾಗಿದ್ದಾರೆ.ಅವರು ಪ್ರಸ್ತುತ ಶ್ರೀ ಸಿದ್ದಲಿಂಗೇಶ್ವರ ಕನ್ನಡ ಪ್ರೌಢ ಶಾಲೆ ಮಾಗಡಿ ರಸ್ತೆ ಬೆಂಗಳೂರು (ದಕ್ಷಿಣ ವಲಯ-02 ರಲ್ಲಿ) ಅಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ