ಕುಂದಾಪುರ

ಕೃಷಿ -ತೋಟಗಾರಿಕೆ,ಅರಣ್ಯ ಕಾನೂನು ಮಾಹಿತಿ ಶಿಬಿರ ಉದ್ಘಾಟನೆ

Share

ಕುಂದಾಪುರ:ಕುಂದಬಾರಂದಾಡಿ ತೆಂಗು ಉತ್ಪಾದಕರ ಸೌಹಾರ್ದ ಸೊಸೈಟಿ,ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಅವರ ಸಂಯುಕ್ತ ಆಶ್ರಯದಲ್ಲಿ ಕೃಷಿ ತೋಟಗಾರಿಕೆ ಮಾಹಿತಿ ಶಿಬಿರ ಹಾಗೂ ಅರಣ್ಯ ಕಾನೂನು ಮಾಹಿತಿ ಕಾರ್ಯಕ್ರಮ ಕುಂದಬಾರಂದಾಡಿ ಮೂಡಾರೆ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ಶನಿವಾರ ನಡೆಯಿತು.

ಉಡುಪಿ ಜಿಲ್ಲೆಯ ಭಾರತೀಯ ಕಿಸಾನ್ ಸಂಘದ ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಉಡುಪ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಗ್ರಾಮೀಣ ಭಾಗದಲ್ಲಿ ನಡೆಯುವ ಇಂತಹ ಕಾರ್ಯಕ್ರಮಗಳು ರೈತರಿಗೆ ಬಹಳಷ್ಟು ಉಪಯೋಗವಾಗಲಿದೆ.ರೈತರು ಒಂದೇ ಬೆಳೆಗೆ ಮಾರು ಹೋಗದೆ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ಉತ್ತಮ ಆದಾಯ ಗಳಿಸಲು ಮುಂದಾಗಬೇಕು ಎಂದರು.

ಹಿರಿಯ ವಿಜ್ಞಾನಿ ಧನಂಜಯ ಬಿ ಅವರು ಕೃಷಿ ಮತ್ತು ತೋಟಗಾರಿಕೆ ಮಾಹಿತಿ ನೀಡಿ ಮಾತನಾಡಿ,
ಮಿಶ್ರ ಬೆಳೆಗೆ ಹೆಚ್ಚಿನ ಒತ್ತನ್ನು ನೀಡಿದಾಗ ಮಾತ್ರ ಉತ್ತಮ ಆದಾಯ ಗಳಿಸ ಬಹುದಾಗಿದೆ ಎಂದರು.ತೆಂಗು, ಅಡಿಕೆ ಕೃಷಿ ಜತೆಗೆ ಮಿಶ್ರ ಬೆಳೆಗಳಾದ ಕಾಳುಮೆಣಸು,ಬಾಳೆ,ಸುವರ್ಣ ಗಡ್ಡೆ, ಜಾಯಿಕಾಯಿ ಸೇರಿದಂತೆ ಇನ್ನಿತರ ಬೆಳೆಗಳನ್ನು ಬೆಳೆಯಲು ಮುಂದಾಗಬೇಕು ಎಂದು ಹೇಳಿದರು.

ಕುಂದಬಾರಂದಾಡಿ ತೆಂಗು ಉತ್ಪಾದಕರ ಸೌಹಾರ್ದ ಸೊಸೈಟಿ ಅಧ್ಯಕ್ಷ ಅನಂತಪದ್ಮನಾಭ ಉಡುಪ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ,ಕೃಷಿ ಮತ್ತು ತೋಟಗಾರಿಕೆ ಮಾಹಿತಿ ಶಿಬಿರದಿಂದ ನೂರಾರು ರೈತರಿಗೆ ಉಪಯುಕ್ತವಾದ ಮಾಹಿತಿ ದೊರೆತಿದೆ.ಮುಂದಿನ ದಿನಗಳಲ್ಲಿ ನಮ್ಮ ಸೊಸೈಟಿ ಯಿಂದ ತೆಂಗಿನ ಚಿಪ್ಸ್ ಮಾಡುವ ಯೋಜನೆ ರೂಪಿಸಲಾಗಿದ್ದು,ಸೊಸೈಟಿ ಸದಸ್ಯರೆಲ್ಲರೂ ಸಹಕಾರ ನೀಡಬೇಕೆಂದು ಕೇಳಿಕೊಂಡರು.

ಕೀಟಶಾಸ್ತ್ರ ತಜ್ಞರಾದ ಡಾ.ರೇವಣ್ಣ ರೇವಣ್ಣವರ್ ಅವರು ಕೀಟನಾಶಕ ಮತ್ತು ಮಂಗನ ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭ ಹಕ್ಲಾಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಗಣಪಯ್ಯ ಶೆಟ್ಟಿ,ಉ‌.ಕಾ.ಸ ಅಧ್ಯಕ್ಷರಾದ ಸತ್ಯನಾರಾಯಣ ಉಡುಪ, ಭಾರತೀಯ ಕಿಸಾನ್ ಸಂಘ ಕುಂದಾಪುರ ಅಧ್ಯಕ್ಷ ಸೀತಾರಾಮ ಗಾಣಿಗ,ತೆಂಗು ಉತ್ಪಾದಕರ ಫೆಡರೇಶನ್ ಕುಂದಾಪುರ ನಾರಾಯಣ ಶೆಟ್ಟಿ, ಹಕ್ಲಾಡಿ ಪಂಚಾಯತ್ ಅಧ್ಯಕ್ಷೆ ಪ್ರೇಮಾ ದೇವಾಡಿಗ ಉಪಸ್ಥಿತರಿದ್ದರು.ಅನಂತಪದ್ಮನಾಭ ಉಡುಪ ಸ್ವಾಗತಿಸಿದರು,ಲ.ರಾಜೀವ ಶೆಟ್ಟಿ ಪ್ರಾರ್ಥಿಸಿದರು,ಕಿಶೋರ್ ಕುಮಾರ್ ಶೆಟ್ಟಿ ನಿರೂಪಿಸಿದರು.ಸಂಜೀವ ಬಿಲ್ಲವ ವಂದಿಸಿದರು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 months ago