ಕುಂದಾಪುರ

ಬೃಹತ್ ರಕ್ತದಾನ ಶಿಬಿರ,ಉಚಿತ ನೇತ್ರ ತಪಾಸಣೆ ಕಾರ್ಯಕ್ರಮ

Share

ಕುಂದಾಪುರ:ಲಯನ್ಸ್ ಕ್ಲಬ್ ಹಕ್ಲಾಡಿ,ರೋಟರಿ ಕ್ಲಬ್ ಗಂಗೊಳ್ಳಿ,ಇಂಡಿಯನ್ ರೆಡ್‍ಕ್ರಾಸ್ ಕುಂದಾಪುರ,ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಉಡುಪಿ ಜಿಲ್ಲೆ,ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ,ಪಂಚಂಗಂಗಾ ರೈತರ ಸೇವಾ ಸಹಕಾರಿ ಸಂಘ ಹೆಮ್ಮಾಡಿ,ಗ್ರಾಮ ಪಂಚಾಯತ್ ಹೊಸಾಡು ಹಾಗೂ ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು ಮುದ್ದುಮನೆ ಸಂಯುಕ್ತ ಆಶ್ರಯದಲ್ಲಿ ಹೊಸಾಡು ಶಾಲೆಯಲ್ಲಿ ಬೃಹತ್ ರಕ್ತದಾನ ಶಿಬಿರ,ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸೆ ಶಿಬಿರ ಭಾನುವಾರ ನಡೆಯಿತು.


ಹೆಮ್ಮಾಡಿ ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ ಕುಮಾರ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಇತ್ತೀಚಿನ ದಿನಗಳಲ್ಲಿ ರಕ್ತಕ್ಕೆ ಹೆಚ್ಚಿನ ಬೇಡಿಕೆ ವ್ಯಕ್ತವಾಗುತ್ತಿರುವುದರಿಂದ ರೋಗಿಗಳಿಗೆ ಸೂಕ್ತವಾದ ಸಮಯದಲ್ಲಿ ರಕ್ತವನ್ನು ಪೂರೈಕೆ ಮಾಡಲು ಬಹಳಷ್ಟು ಅನಾನುಕೂಲತೆಗಳು ಎದುರಾಗುತ್ತಿರುವ ಸಂದರ್ಭವನ್ನು ನಾವು ನೋಡ ಬಹುದಾಗಿದೆ.ರಕ್ತದ ಅಭಾವವನ್ನು ತಗ್ಗಿಸಲು ಪೇಟೆ,ಪಟ್ಟಣಗಳು ಸೇರಿದಂತೆ ಗ್ರಾಮೀಣ ಭಾಗದಲ್ಲಿಯೂ ರಕ್ತದಾನದಂತಹ ಶಿಬಿರಗಳನ್ನು ಆಂದೋಲನದ ರೀತಿಯಲ್ಲಿ ಆಯೋಜನೆ ಮಾಡಬೇಕಾದ ಅವಶ್ಯಕತೆ ಇದೆ ಎಂದು ಹೇಳಿದರು.

ಝೋನ್ ಚೆರ್ ಪರ್ಸನ್ ಜಗದೀಶ್ ಶೆಟ್ಟಿ ಕುದ್ರುಕೋಡು ಮಾತನಾಡಿ,ಹಳ್ಳಿ ಹಳ್ಳಿಗಳಲ್ಲಿ ಇಂತಹ ಶಿಬಿರಗಳನ್ನು ಆಯೋಜನೆ ಮಾಡುವುದರಿಂದ ಗ್ರಾಮೀಣ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.
ರೋಟರಿ ಕ್ಲಬ್ ಗಂಗೊಳ್ಳಿ ಅಧ್ಯಕ್ಷ ನಾಗೇಂದ್ರ ಪೈ ಮಾತನಾಡಿ,30 ಕ್ಕೂ ಅಧಿಕ ವರ್ಷಗಳಿಂದ ಗಂಗೊಳ್ಳಿ ರೋಟರಿ ಕ್ಲಬ್ ಸಾಮಾಜಿಕ ಚಟುವಟಿಕೆ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದೆ.ಮುಂದಿನ ದಿನಗಳಲ್ಲಿಯೂ ಹೆಚ್ಚಿನ ಕೆಲಸಗಳನ್ನು ಮಾಡಲಾಗುವುದು ಎಂದರು.
ಅಧ್ಯಕ್ಷತೆ ವಹಿಸಿದ್ದ ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಅಧ್ಯಕ್ಷ ಗಣಪಯ್ಯ ಶೆಟ್ಟಿ ಬಾಳೆಮನೆ ಮಾತನಾಡಿ,ಜನರಿಗೆ ಉಪಯೋಗವಾಗುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಾಗ ಮಾತ್ರ ಸಂಘಟನೆಗಳ ಉದ್ದೇಶ ಈಡೇರಿಕೆ ಆಗುತ್ತದೆ ಎಂದು ಹೇಳಿದರು.
ಹಕ್ಲಾಡಿ ಪಂಚಾಯಿತಿ ಉಪಾಧ್ಯಕ್ಷ ಸುಭಾಶ ಶೆಟ್ಟಿ ಹೊಳ್ಮಗೆ,ರೆಡ್ ಕ್ರಾಸ್ ಸಂಸ್ಥೆಯ ಎಸ್.ಜಯಕರ ಶೆಟ್ಟಿ,ಪಾರ್ವತಿ ಮಹಾಬಲ ಟ್ರಸ್ಟ್ ಮುದ್ದುಮನೆ ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ,ಮರವಂತೆ ಆಸ್ಪತೆ ವೈದ್ಯಾಧಿಕಾರಿ ಗಣೇಶ್ ಭಟ್,ಹೊಸಾಡು ಶಾಲೆ ಎಸ್‍ಡಿಎಂಸಿ ಅಧ್ಯಕ್ಷೇ ರೇಖಾ,ಹೊಸಾಡು ಪಿಡಿಒ ಪಾರ್ವತಿ,ಹೊಸಾಡು ಶಾಲೆ ಮುಖ್ಯ ಶಿಕ್ಷಕ ರಾಜೇಶ್ ಹಾಗೂ ರೋಟರಿ ಮತ್ತು ಲಯನ್ಸ್ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು.ನಾಗೇಂದ್ರ ಪೈ ಸ್ವಾಗತಿಸಿದರು.ರಾಮನಾಥ್ ನಾಯಕ್ ನಿರೂಪಿಸಿದರು.ಸಂಜೀವ ಬಿಲ್ಲವ ವಂದಿಸಿದರು.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

3 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago