ಕುಂದಾಪುರ

ಬೃಹತ್ ರಕ್ತದಾನ ಶಿಬಿರ,ಉಚಿತ ನೇತ್ರ ತಪಾಸಣೆ ಕಾರ್ಯಕ್ರಮ

Share

ಕುಂದಾಪುರ:ಲಯನ್ಸ್ ಕ್ಲಬ್ ಹಕ್ಲಾಡಿ,ರೋಟರಿ ಕ್ಲಬ್ ಗಂಗೊಳ್ಳಿ,ಇಂಡಿಯನ್ ರೆಡ್‍ಕ್ರಾಸ್ ಕುಂದಾಪುರ,ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಉಡುಪಿ ಜಿಲ್ಲೆ,ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ,ಪಂಚಂಗಂಗಾ ರೈತರ ಸೇವಾ ಸಹಕಾರಿ ಸಂಘ ಹೆಮ್ಮಾಡಿ,ಗ್ರಾಮ ಪಂಚಾಯತ್ ಹೊಸಾಡು ಹಾಗೂ ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು ಮುದ್ದುಮನೆ ಸಂಯುಕ್ತ ಆಶ್ರಯದಲ್ಲಿ ಹೊಸಾಡು ಶಾಲೆಯಲ್ಲಿ ಬೃಹತ್ ರಕ್ತದಾನ ಶಿಬಿರ,ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸೆ ಶಿಬಿರ ಭಾನುವಾರ ನಡೆಯಿತು.


ಹೆಮ್ಮಾಡಿ ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ ಕುಮಾರ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಇತ್ತೀಚಿನ ದಿನಗಳಲ್ಲಿ ರಕ್ತಕ್ಕೆ ಹೆಚ್ಚಿನ ಬೇಡಿಕೆ ವ್ಯಕ್ತವಾಗುತ್ತಿರುವುದರಿಂದ ರೋಗಿಗಳಿಗೆ ಸೂಕ್ತವಾದ ಸಮಯದಲ್ಲಿ ರಕ್ತವನ್ನು ಪೂರೈಕೆ ಮಾಡಲು ಬಹಳಷ್ಟು ಅನಾನುಕೂಲತೆಗಳು ಎದುರಾಗುತ್ತಿರುವ ಸಂದರ್ಭವನ್ನು ನಾವು ನೋಡ ಬಹುದಾಗಿದೆ.ರಕ್ತದ ಅಭಾವವನ್ನು ತಗ್ಗಿಸಲು ಪೇಟೆ,ಪಟ್ಟಣಗಳು ಸೇರಿದಂತೆ ಗ್ರಾಮೀಣ ಭಾಗದಲ್ಲಿಯೂ ರಕ್ತದಾನದಂತಹ ಶಿಬಿರಗಳನ್ನು ಆಂದೋಲನದ ರೀತಿಯಲ್ಲಿ ಆಯೋಜನೆ ಮಾಡಬೇಕಾದ ಅವಶ್ಯಕತೆ ಇದೆ ಎಂದು ಹೇಳಿದರು.

ಝೋನ್ ಚೆರ್ ಪರ್ಸನ್ ಜಗದೀಶ್ ಶೆಟ್ಟಿ ಕುದ್ರುಕೋಡು ಮಾತನಾಡಿ,ಹಳ್ಳಿ ಹಳ್ಳಿಗಳಲ್ಲಿ ಇಂತಹ ಶಿಬಿರಗಳನ್ನು ಆಯೋಜನೆ ಮಾಡುವುದರಿಂದ ಗ್ರಾಮೀಣ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.
ರೋಟರಿ ಕ್ಲಬ್ ಗಂಗೊಳ್ಳಿ ಅಧ್ಯಕ್ಷ ನಾಗೇಂದ್ರ ಪೈ ಮಾತನಾಡಿ,30 ಕ್ಕೂ ಅಧಿಕ ವರ್ಷಗಳಿಂದ ಗಂಗೊಳ್ಳಿ ರೋಟರಿ ಕ್ಲಬ್ ಸಾಮಾಜಿಕ ಚಟುವಟಿಕೆ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದೆ.ಮುಂದಿನ ದಿನಗಳಲ್ಲಿಯೂ ಹೆಚ್ಚಿನ ಕೆಲಸಗಳನ್ನು ಮಾಡಲಾಗುವುದು ಎಂದರು.
ಅಧ್ಯಕ್ಷತೆ ವಹಿಸಿದ್ದ ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಅಧ್ಯಕ್ಷ ಗಣಪಯ್ಯ ಶೆಟ್ಟಿ ಬಾಳೆಮನೆ ಮಾತನಾಡಿ,ಜನರಿಗೆ ಉಪಯೋಗವಾಗುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಾಗ ಮಾತ್ರ ಸಂಘಟನೆಗಳ ಉದ್ದೇಶ ಈಡೇರಿಕೆ ಆಗುತ್ತದೆ ಎಂದು ಹೇಳಿದರು.
ಹಕ್ಲಾಡಿ ಪಂಚಾಯಿತಿ ಉಪಾಧ್ಯಕ್ಷ ಸುಭಾಶ ಶೆಟ್ಟಿ ಹೊಳ್ಮಗೆ,ರೆಡ್ ಕ್ರಾಸ್ ಸಂಸ್ಥೆಯ ಎಸ್.ಜಯಕರ ಶೆಟ್ಟಿ,ಪಾರ್ವತಿ ಮಹಾಬಲ ಟ್ರಸ್ಟ್ ಮುದ್ದುಮನೆ ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ,ಮರವಂತೆ ಆಸ್ಪತೆ ವೈದ್ಯಾಧಿಕಾರಿ ಗಣೇಶ್ ಭಟ್,ಹೊಸಾಡು ಶಾಲೆ ಎಸ್‍ಡಿಎಂಸಿ ಅಧ್ಯಕ್ಷೇ ರೇಖಾ,ಹೊಸಾಡು ಪಿಡಿಒ ಪಾರ್ವತಿ,ಹೊಸಾಡು ಶಾಲೆ ಮುಖ್ಯ ಶಿಕ್ಷಕ ರಾಜೇಶ್ ಹಾಗೂ ರೋಟರಿ ಮತ್ತು ಲಯನ್ಸ್ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು.ನಾಗೇಂದ್ರ ಪೈ ಸ್ವಾಗತಿಸಿದರು.ರಾಮನಾಥ್ ನಾಯಕ್ ನಿರೂಪಿಸಿದರು.ಸಂಜೀವ ಬಿಲ್ಲವ ವಂದಿಸಿದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago