ಕುಂದಾಪುರ

ಉಪ್ಪುಂದ:ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ರಥೋತ್ಸವ

Share

Advertisement
Advertisement
Advertisement

ಕುಂದಾಪುರ:ಬೈಂದೂರು ತಾಲೂಕಿನ ಉಪ್ಪುಂದದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ಮಂಗಳವಾರ ನಡೆಯಿತು.ಸಾವಿರಾರು ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಪ್ರಸಾದ ಸ್ವೀಕರಿಸಿದರು.

Advertisement

ಕೋಟೇಶ್ವರದ ’ಕೊಡಿ’ ಹಬ್ಬದ ಮಾರನೇಯ ದಿನದಂದು ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಕೊಡಿ ಹಬ್ಬ ನಡೆಯುತ್ತದೆ.ಬೈಂದೂರು ಹಾಗೂ ಉಪ್ಪುಂದ ಭಾಗದ ಜನರು ’ಉಪ್ಪುಂದದ ಕೊಡಿ ಹಬ್ಬ’ ಎಂದು ಕರೆಯುವ ಸಂಪ್ರದಾಯವಿದೆ.ಹೊಸ ಮದುಮಕ್ಕಳು ಹಾಗೂ ಸಂತಾನ ಭಾಗ್ಯಕ್ಕಾಗಿ ಹರಕೆ ಹೊತ್ತುಕೊಳ್ಳುವವರು ಹಬ್ಬದ ದಿನದಂದು ಶ್ರೀ ದೇವಿಯ ದರ್ಶನ ಮಾಡಿ ಕಬ್ಬಿನ ಜಲ್ಲೆ (ಕೊಡಿ)ಯನ್ನು ಮನೆಗೆ ಒಯ್ಯುವುದು ಇಲ್ಲಿನ ಕಟ್ಟ ಕಟ್ಟಳೆ ಆಗಿದೆ.ವೃಶ್ಚಿಕ ಮಾಸದಲ್ಲಿ ನಡೆಯುವ ಬ್ರಹ್ಮ ರಥೋತ್ಸವದ ಸಂಪ್ರದಾಯದಂತೆ ಮಂಗಳವಾರ ಅದ್ದೂರಿಯಾಗಿ ನಡೆಯಿತು.ಬೆಳಿಗ್ಗೆ ಬ್ರಹ್ಮರಥದಲ್ಲಿ ಶ್ರೀ ದೇವಿಯ ಉತ್ಸವ ಮೂರ್ತಿಯನ್ನು ಕುಳ್ಳಿರಿಸಿ ರಥಬೀದಿಯಲ್ಲಿ ರಥವನ್ನು ಎಳೆಯುವ ಮೂಲಕ ಸಾಂಪ್ರದಾಯಿಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.ಸಂಜೆ ರಥೋತ್ಸವ ಅವರೋಹಣಾ ವಿಧಿಯನ್ನು ಪೂರೈಸಲಾಯಿತು.

ಶ್ರೀ ದೇವಿಗೆ ಹರಕೆ ರೂಪದಲ್ಲಿ ಬಂದ ಸೀರೆಗಳನ್ನು ವಾರ್ಷಿಕ ಜಾತ್ರೆಯಂದು ಹರಾಜು ಹಾಕುವ ಸಂಪ್ರದಾಯದಂತೆ ಇಂದು ನಡೆದ ಸೀರೆ ಹರಾಜಿನಲ್ಲಿ ಭಾಗವಹಿಸಿದ ನೂರಾರು ಮಂದಿ ಶ್ರೀ ದೇವಿಯ ಪ್ರಸಾದ ರೂಪ ಎಂಬಂತೆ ಸೀರೆಗಳನ್ನು ಹರಾಜಿನಲ್ಲಿ ಪಡೆದುಕೊಂಡರು.ಮೀನುಗಾರರ ಆರಾಧ್ಯ ದೇವತೆ
ಕರಾವಳಿ ತೀರ ಪ್ರದೇಶದ ತಟದಲ್ಲಿ ಇರುವ ಈ ದೇವಸ್ಥಾನಕ್ಕೆ ಮೀನುಗಾರರು ಹೆಚ್ಚು ನಡೆದುಕೊಳ್ಳುತ್ತಾರೆ. ಜೀವವನ್ನು ಕೈಯಲ್ಲಿ ಹಿಡಿದುಕೊಂಡು ವೃತ್ತಿ ಬದುಕಿಗೆ ತೆರಳುವ ನಮ್ಮನ್ನು ಕಾಯುವವಳು ಅವಳೇ ಎನ್ನುವ ನಂಬಿಕೆ ಈ ಭಾಗದಲ್ಲಿ ಜನ ಜನಿತ. ಹಾಗಾಗಿ ಇಲ್ಲಿನ ಮೀನುಗಾರರ ಬಂಧುಗಳು ಎಲ್ಲಿಯೇ ನೆಲೆಸಿದ್ದರೂ ವಾರ್ಷಿಕ ಜಾತ್ರೆಗೆ ಬಂದು ದೇವಿಯ ದರ್ಶನ ಮಾಡುವ ಸಂಪ್ರದಾಯವನ್ನು ಹೆಚ್ಚಿನವರು ರೂಢಿಸಿಕೊಂಡಿದ್ದಾರೆ.

ಕೊಲ್ಲೂರಿನ ವೇ| ಮೂ| ಮಂಜುನಾಥ ಅಡಿಗ ಮಾರ್ಗದರ್ಶನದಲ್ಲಿ ಗೋಕರ್ಣದ ತಂತ್ರಿ ಗಣಪತಿ ಭಟ್‌ ಹೀರೆ ನೇತೃತ್ವದಲ್ಲಿ ಧಾರ್ಮಿಕ ವಿಧಿಗಳು ನೆರವೇರಿತು.
ಈ ಸಂದರ್ಭದಲ್ಲಿಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ,
ಪ್ರಧಾನ ಅರ್ಚಕ ವೇ| ಮೂ| ಪ್ರಕಾಶ ಉಡುಪ, ಶಂಕರನಾರಾಯಣ ಪುರಾಣಿಕ,ದೇವಸ್ಥಾನದ ಆಡಳಿತಾಧಿಕಾರಿ, ಬೈಂದೂರು ತಹಶೀಲ್ದಾರ್‌ ಪ್ರದೀಪ್‌ ಆರ್‌., ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಭೀಮಪ್ಪ ಎಚ್‌. ಬಿಲ್ದಾರ, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಜಯರಾಮ ಶೆಟ್ಟಿ ಬಿಜೂರು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಬಿ.ಎಸ್‌. ಸುರೇಶ್‌ ಶೆಟ್ಟಿ, ದೇವಸ್ಥಾನದ ಅರ್ಚಕ ಯು. ಸಂದೇಶ ಭಟ್‌, ಸಿಬಂದಿಯಾದ ಸುರೇಶ ಭಟ್‌, ಗಣೇಶ ದೇವಾಡಿಗ ಮತ್ತಿತರರು ಹಾಗೂ ಭಕ್ತರು ಉಪಸ್ಥಿತರಿದ್ದರು.ಸವಿತೃತೇಜ ಪಿ.ಡಿ ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕರು ಮತ್ತು ಮಹೇಶ್ ಕಂಬಿ ಬೈಂದೂರು ಪೊಲೀಸ್ ಉಪನಿರೀಕ್ಷಕರು ಮತ್ತು ಸಿಬ್ಬಂದಿ ವರ್ಗದವರಿಂದ ಬಿಗಿ ಬಂದೋಬಸ್ತ್‌ ಏರ್ಪಡಿಸ ಲಾಗಿತ್ತು.

Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

2 days ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

3 days ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

6 days ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

7 days ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

7 days ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

2 weeks ago