ಕುಂದಾಪುರ

ಪತ್ನಿ ಛಾಯಾ ಪ್ರತಿಕೃತಿ ಜತೆ ಪತಿ 25ರ ಮದುವೆ ಸಂಭ್ರಮಾಚರಣೆ

Share

ಕುಂದಾಪುರ:ಒಂದು ತಿಂಗಳ ಹಿಂದೆ ಅಕಾಲಿಕವಾಗಿ ನಿಧನರಾಗಿದ್ದ ಪತ್ನಿ ಸವಿ ನೆನಪಿನೊಂದಿಗೆ ಪತಿ 25 ರ ಸಂಭ್ರಮವನ್ನು ಆಚರಿಸಿಕೊಂಡು ಮಧುರ ದಾಂಪತ್ಯದ ಪ್ರೇಮದ ಪರಿಯನ್ನು ಜಗತ್ತಿಗೆ ಸಾರಿದ್ದಾರೆ.
ಕುಂದಾಪುರ ಸಪ್ತಗಿರಿ ಕೋ-ಅಪರೇಟಿವ್ ಸೊಸೈಟಿ ಸಂಸ್ಥಾಪಕ ಸದ್ಗುರು ಚಂದ್ರಶೇಖರ್ ಅವರು ಇಂತಹದ್ದೊಂದು ಸವಿನಯ ಸಂಪ್ರದಾಯಕ್ಕೆ ಮುನ್ನುಡಿ ಬರೆದವರು.ವಿವಾಹ ಮಹೋತ್ಸವದ ಬೆಳ್ಳಿಹಬ್ಬ ಆಚರಣೆ ಹೀಗೆ ಇರಬೇಕು ಎನ್ನುವ ಪತ್ನಿ ಸುಮಾ ಅವರ ಅಭಿಲಾಷೆಯನ್ನು ಅವರ ಅನುಪಸ್ಥಿತಿಯಲ್ಲಿ ಪತಿ ಈಡೇರಿಕೆಮಾಡಿದ್ದಾರೆ.ಪತ್ನಿ ಸುಮಾ ಕಳೆದ ತಿಂಗಳು ಅನಾರೋಗ್ಯದಿಂದ ಮೃತಪಟ್ಟಿದ್ದರು.
ಬಡಾಕೆರೆ ಲಕ್ಷ್ಮೀಜನಾರ್ದನ ಸಭಾಭವನದಲ್ಲಿ ಚಂದ್ರಶೇಖರ್ ಅವರು ಅಗಲಿದ ಪತ್ನಿ ಭಾವ ಚಿತ್ರದೊಂದಿಗೆ ತಮ್ಮ ದಾಂಪತ್ಯ ಜೀವನದ 25ರ ಸಂಭ್ರಮವನ್ನು ಆಚರಿಸಿಕೊಂಡಿದ್ದರು.ಮಕ್ಕಳಾದ ಅಭಿನೇಹಾ,ಅನಿಲೇಖಾ ತಂದೆಗೆ ಸಾಥ್ ನೀಡಿದ್ದರು.ಆದರ್ಶ ದಂಪತಿಗಳ ಆದರ್ಶ ಪ್ರೇಮ ಕಥೆ ಜಗತ್ತಿಗೆ ಮಾದರಿ ಆಗಿದೆ.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 weeks ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 weeks ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 month ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

1 month ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

2 months ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

2 months ago