ಕುಂದಾಪುರ

ಬೃಹತ್ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

Share

(ಬೃಹತ್ ಆರೋಗ್ಯ ತಪಾಸಣಾ ಶಿಬಿರವನ್ನು ಸಹಾಯಕ ಕಮಿಷನರ್ ರಶ್ಮೀ ಎಸ್.ಆರ್ ಉದ್ಘಾಟಿಸಿದರು)

ಕುಂದಾಪುರ:ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು,ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಮತ್ತು ಆದರ್ಶ ಆಸ್ಪತ್ರೆ ಉಡುಪಿ ಅವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಸರಕಾರಿ ಹಿರಿಯ ಪ್ರಾಥಮಿಕ ನಾವುಂದ ಶಾಲೆಯಲ್ಲಿ ಭಾನುವಾರ ನಡೆಯಿತು.ಸವಿರಾರು ಜನರು ಆರೋಗ್ಯ ತಪಾಸಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ವೈದ್ಯಕೀಯ ತಪಾಸಣೆಯನ್ನು ಮಾಡಿಸಿಕೊಂಡರು.25ಕ್ಕೂ ಅಧಿಕ ನುರಿತ ವೈದ್ಯರು ಆರೋಗ್ಯ ತಪಾಸಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸಹಾಯಕ ಕಮಿಷನರ್ ರಶ್ಮೀ ಎಸ್.ಆರ್ ವೈದ್ಯಕೀಯ ತಪಾಸಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ನಮ್ಮ ಜೀವನ ಶೈಲಿಯಲ್ಲಿ ಆಗಿರುವ ಬದಲಾವಣೆಯಿಂದ ನಾವುಗಳು ಇಂದು ಆರೋಗ್ಯ ದಾಸರಾಗಿ ಪರಿವರ್ತನೆ ಗೊಳ್ಳುತ್ತಿದ್ದೇವೆ.ಚಿನ್ನಾಭರಣ,ಆಸ್ತಿ ಸಂಪಾದನೆಗಿಂತಲೂ ಆಧುನಿಕ ಪ್ರಪಂಚದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅತಿ ಮುಖ್ಯವಾಗಿದೆ.ಗ್ರಾಮೀಣ ಪ್ರದೇಶದ ಜನರಿಗೆ ಉಪಯೋಗಕರವಾಗಿರುವ ಇಂತಹ ಆರೋಗ್ಯ ಶಿಬಿರಗಳು ಹಳ್ಳಿ ಹಳ್ಳಿಗಳಲ್ಲಿ ಹೆಚ್ಚು ಹೆಚ್ಚು ನಡೆಯಬೇಕು ಎಂದು ಹೇಳಿದರು.

ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಅಧ್ಯಕ್ಷ ಎಸ್.ರಾಜು ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ,ಇತ್ತಿಚೀನ ದಿನಗಳಲ್ಲಿ ಯುವಜನತೆ ನಾನಾ ಕಾಯಿಲೆಗಳಿಗೆ ತುತ್ತಾಗಿ ಸಾವನ್ನಪ್ಪುತ್ತಿರುವ ಸಂಗತಿಯನ್ನು ನಾವು ಗಮನಿಸಬಹುದಾಗಿದೆ.ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿಯನ್ನು ವಹಿಸಬೇಕಾದ ಅವಶ್ಯಕತೆ ಇದ್ದು ನಿಯಮಿತವಾಗಿ ಆರೋಗ್ಯ ತಪಾಸಣೆಯನ್ನು ಮಾಡಿಕೊಳ್ಳುವುದರಿಂದ ಪ್ರಾಥಮಿಕ ಹಂತದಲ್ಲೇ ಕಾಯಿಲೆಗಳನ್ನು ಗುರುತಿಸಲು ಸಹಕಾರಿ ಆಗುತ್ತದೆ ಎಂದರು.ಉತ್ತಮ ಆರೋಗ್ಯವನ್ನು ಪಡೆಯದೆ ಇದ್ದರೆ ಜೀವನದಲ್ಲಿ ಒಳ್ಳೆ ಅನುಭವಗಳನ್ನು ಅನುಭವಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಜನರ ಆರೋಗ್ಯದ ಬಗ್ಗೆ ಸರಕಾರ,ಅಧಿಕಾರಿಗಳು,ಸಂಘ ಸಂಸ್ಥೆಗಳು ವಿಶೇಷವಾದ ಕಾಳಜಿ ವಹಿಸಬೇಕಾದ ಅಗತ್ಯತೆ ಇದೆ ಎಂದು ಅಭಿಪ್ರಾಯಪಟ್ಟರು.ಸಾರ್ವಜನಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಇವೊಂದು ಆರೋಗ್ಯ ಶಿಬಿರವನ್ನು ಆಯೋಜನೆ ಮಾಡಲಾಗಿದೆ ಎಂದರು.

ಆದರ್ಶ ಆಸ್ಪತ್ರೆ ಎಂ.ಡಿ ಹಿರಿಯ ವೈದ್ಯರಾದ ಡಾ.ಜಿ.ಎಸ್ ಚಂದ್ರಶೇಖರ ಮಾತನಾಡಿ,ಬೊಜ್ಜಿನ ಸಮಸ್ಯೆ ಯಿಂದಲೆ ಇಂದು ನಾವು ಕಾಯಿಲೆಗಳಿಗೆ ತುತ್ತಾಗುತ್ತಿದ್ದೇವೆ,ಬೇಕರಿಗೆ ತಿಂಡಿ ತಿನಿಸುಗಳಿಗೆ ಹೆಚ್ಚಿನ ಆದ್ಯತೆ ನೀಡದೆ ಮನೆಯಲ್ಲಿ ತಯಾರಿಸಿದ ಆಹಾರ ಸೇವನೆ ಮಾಡುವುದು ಮುಖ್ಯವಾಗಿದೆ ಎಂದರು.ಆದರ್ಶನ ಜೀವನ ನಡೆಸುವುದರಿಂದ ಕಾಯಿಲೆಗಳಿಂದ ದೂರ ಉಳಿಯಬಹುದಾಗಿದೆ ಎಂದು ಹೇಳಿದರು.
ಹಿರಿಯ ನರರೋಗ ತಜ್ಞ ಎ.ರಾಜಾ,ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಸಿ.ಇ.ಒ ಪೂರ್ಣಿಮಾ,ಬೈಂದೂರು ತಹಶೀಲ್ದಾರ್ ಪ್ರದೀಪ,ನಾವುಂದ ಪಂಚಾಯಿತಿ ಅಧ್ಯಕ್ಷ ನರಸಿಂಹ ದೇವಾಡಿಗ,ನಾವುಂದ ಶಾಲೆ ಎಸ್‍ಡಿಎಂಸಿ ಅಧ್ಯಕ್ಷ ಚಂದ್ರ ಖಾರ್ವಿ ಮತ್ತು ಮುಖ್ಯೋಪಾಧ್ಯಾಯರಾದ ಶಂಕರ,ಜಿಲ್ಲಾ ಬ್ಯಾಂಕ್ ಪ್ರತಿನಿಧಿ.ಎಂ ವಿನಾಯಕ ರಾವ್ ಮರವಂತೆ,ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಚಂದ್ರಶೀಲ ಶೆಟ್ಟಿ ಮತ್ತು ನಿರ್ದೇಶಕರಾದ ಜಗದೀಶ ಪಿ ಪೂಜಾರಿ,ವಾಸು ಪೂಜಾರಿ,ಭೋಜ ನಾಯ್ಕ್,ರಾಮಕೃಷ್ಣ ಖಾರ್ವಿ,ಪ್ರಕಾಶ ದೇವಾಡಿಗ,ಅಣ್ಣಪ್ಪ ಬಿಲ್ಲವ,ನಾರಾಯಣ ಶೆಟ್ಟಿ,ರಾಮ,ನಾಗಮ್ಮ,ಸರೋಜ.ಆರ್ ಗಾಣಿಗ,ಸಿ.ಇ.ಒ ಸುರೇಶ ಅಳ್ವೆಗದ್ದೆ ಹಾಗೂ ಸಿಬ್ಬಂದಿ ವರ್ಗದವರು,ನಾವೋದಯ ಪ್ರೇರಕರು,ಸದಸ್ಯರು ಉಪಸ್ಥಿತರಿದ್ದರು.ಎಸ್.ರಜು ಪೂಜಾರಿ ಸ್ವಾಗತಿಸಿದರು.ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ನಿರೂಪಿಸಿದರು.ನಾವೋದಯ ಟ್ರಸ್ಟ್ ಮೇಲ್ವಿಚಾರಕ ಹರಿನಾಥ್ ವಂದಿಸಿದರು.

Advertisement

Share
Team Kundapur Times

Recent Posts

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

6 hours ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

1 week ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago