ಕುಂದಾಪುರ

ಬೈಂದೂರು ತಾಲೂಕು ಸಮಾವೇಶ,ಮನೆ ಮನೆ ಮಂತ್ರಾಕ್ಷತಾ ಅಭಿಯಾನ

Share

Advertisement
Advertisement
Advertisement

ಬೈಂದೂರು:ಅಯೋಧ್ಯೆ ರಾಮ ಮಂದಿರದಲ್ಲಿ ಪೂಜೆಗೊಂಡು ನಮ್ಮೂರಿಗೆ ಭವ್ಯ ಶೋಭಾ ಯಾತ್ರೆಯಲ್ಲಿ ಆಗಮಿಸಿದ ಮಂತ್ರಾಕ್ಷತೆಯನ್ನು ಮನೆ ಮನೆಗೆ ತಲುಪಿಸಿಸುವ ಕಾರ್ಯ ಮಾಡಬೇಕಾಗಿದೆ ಎಂದು ಅಯೋಧ್ಯೆ ಶ್ರೀರಾಮ ಮಂದಿರ ಅಭಿಯಾನದ ಉಡುಪಿ ಜಿಲ್ಲಾ ಸಂಚಾಲಕ ಸುರೇಂದ್ರ ಕೋಟೇಶ್ವರ ಹೇಳಿದರು.
ಅಯೋಧ್ಯ ಶ್ರೀರಾಮ ಮಂದಿರ ಮಂತ್ರಾಕ್ಷತಾ ಅಭಿಯಾನ ಉಡುಪಿ ಜಿಲ್ಲೆ,ಶ್ರೀರಾಮ ಮಂದಿರ ಲೋಕಾರ್ಪಣೆ ಮತ್ತು ಮೂರ್ತಿ ಪ್ರತಿಷ್ಠಾನ ಪ್ರಯುಕ್ತ ಮನೆ ಸಂಪರ್ಕ ಹಾಗೂ ಮಂತ್ರಾಕ್ಷತಾ ಅಭಿಯಾನ ಸಮಿತಿ ವತಿಯಿಂದ ಶ್ರೀಮಹಾಗಣಪತಿ ಮಾಂಗಲ್ಯ ಮಂಟಪ ನಾವುಂದದಲ್ಲಿ ಭಾನುವಾರ ನಡೆದ ಬೈಂದೂರು ತಾಲೂಕು ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರದ ಕಾಮಗಾರಿಯ ಮೊದಲನೇ ಹಂತ ಮುಕ್ತಾಯದ ಹತ್ತಿರದಲ್ಲಿದ್ದು ಮುಂದಿನ 42 ದಿನಗಳಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯ ನಡೆಯಲಿದೆ ಎಂದು ಹೇಳಿದರು.
ಶ್ರೀ ಸತ್ಯ ಸ್ವರೂಪಾನಂದ ಸ್ವಾಮೀಜಿ ಶ್ರೀ ರಾಮಕೃಷ್ಣಾಶ್ರಮ ಏಳಜಿತ್ ಅವರು ಆಶೀರ್ವಚನ ನೀಡಿದರು.ಉಡುಪಿ ಜಿಲ್ಲಾ ಸಂಘ ಚಾಲಕರಾದ ಸತೀಶ್ ಕಾಳವಾರ್ಕರ್,ಅಯೋಧ್ಯೆ ಶ್ರೀರಾಮ ಮಂದಿರ ಪ್ರತಿಷ್ಠಾನ ಜಿಲ್ಲಾ ಸಹ ಸಂಯೋಜಕ ಮುರಳಿ ಕೃಷ್ಣ,ಮರವಂತೆ ಶ್ರೀರಾಮ ಭಜನಾ ಮಂದಿರ ಅಧ್ಯಕ್ಷ ವಾಸು ಖಾರ್ವಿ ಉಪಸ್ಥಿತರಿದ್ದರು.ಬೈಂದೂರು ತಾಲೂಕು ಸಂಯೋಜಕ ಪ್ರಸನ್ನ ಉಪ್ಪÅಂದ ಸ್ವಾಗತಿಸಿದರು.ತುಳಸಿ ದಾಸ್ ಶಿರೂರು ನಿರೂಪಿಸಿದರು.ತಾಲೂಕು ಸಂಚಾಲಕ ಜಗದೀಶ್ ಕೊಲ್ಲೂರು ವಂದಿಸಿದರು.ಅಯೋಧ್ಯೆಯಿಂದ ಆಗಮಿಸಿದ ಶ್ರೀರಾಮ ಮಂತ್ರಾಕ್ಷತೆಯನ್ನು ಮರವಂತೆ ಶ್ರೀರಾಮ ಮಂದಿರದಲ್ಲಿ ಪೂಜಿಸಲಾಯಿತು.

Advertisement
Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

2 days ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

3 days ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

6 days ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

7 days ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

7 days ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

2 weeks ago