ಕುಂದಾಪುರ

ಬೈಂದೂರು ತಾಲೂಕು ಸಮಾವೇಶ,ಮನೆ ಮನೆ ಮಂತ್ರಾಕ್ಷತಾ ಅಭಿಯಾನ

Share

ಬೈಂದೂರು:ಅಯೋಧ್ಯೆ ರಾಮ ಮಂದಿರದಲ್ಲಿ ಪೂಜೆಗೊಂಡು ನಮ್ಮೂರಿಗೆ ಭವ್ಯ ಶೋಭಾ ಯಾತ್ರೆಯಲ್ಲಿ ಆಗಮಿಸಿದ ಮಂತ್ರಾಕ್ಷತೆಯನ್ನು ಮನೆ ಮನೆಗೆ ತಲುಪಿಸಿಸುವ ಕಾರ್ಯ ಮಾಡಬೇಕಾಗಿದೆ ಎಂದು ಅಯೋಧ್ಯೆ ಶ್ರೀರಾಮ ಮಂದಿರ ಅಭಿಯಾನದ ಉಡುಪಿ ಜಿಲ್ಲಾ ಸಂಚಾಲಕ ಸುರೇಂದ್ರ ಕೋಟೇಶ್ವರ ಹೇಳಿದರು.
ಅಯೋಧ್ಯ ಶ್ರೀರಾಮ ಮಂದಿರ ಮಂತ್ರಾಕ್ಷತಾ ಅಭಿಯಾನ ಉಡುಪಿ ಜಿಲ್ಲೆ,ಶ್ರೀರಾಮ ಮಂದಿರ ಲೋಕಾರ್ಪಣೆ ಮತ್ತು ಮೂರ್ತಿ ಪ್ರತಿಷ್ಠಾನ ಪ್ರಯುಕ್ತ ಮನೆ ಸಂಪರ್ಕ ಹಾಗೂ ಮಂತ್ರಾಕ್ಷತಾ ಅಭಿಯಾನ ಸಮಿತಿ ವತಿಯಿಂದ ಶ್ರೀಮಹಾಗಣಪತಿ ಮಾಂಗಲ್ಯ ಮಂಟಪ ನಾವುಂದದಲ್ಲಿ ಭಾನುವಾರ ನಡೆದ ಬೈಂದೂರು ತಾಲೂಕು ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರದ ಕಾಮಗಾರಿಯ ಮೊದಲನೇ ಹಂತ ಮುಕ್ತಾಯದ ಹತ್ತಿರದಲ್ಲಿದ್ದು ಮುಂದಿನ 42 ದಿನಗಳಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯ ನಡೆಯಲಿದೆ ಎಂದು ಹೇಳಿದರು.
ಶ್ರೀ ಸತ್ಯ ಸ್ವರೂಪಾನಂದ ಸ್ವಾಮೀಜಿ ಶ್ರೀ ರಾಮಕೃಷ್ಣಾಶ್ರಮ ಏಳಜಿತ್ ಅವರು ಆಶೀರ್ವಚನ ನೀಡಿದರು.ಉಡುಪಿ ಜಿಲ್ಲಾ ಸಂಘ ಚಾಲಕರಾದ ಸತೀಶ್ ಕಾಳವಾರ್ಕರ್,ಅಯೋಧ್ಯೆ ಶ್ರೀರಾಮ ಮಂದಿರ ಪ್ರತಿಷ್ಠಾನ ಜಿಲ್ಲಾ ಸಹ ಸಂಯೋಜಕ ಮುರಳಿ ಕೃಷ್ಣ,ಮರವಂತೆ ಶ್ರೀರಾಮ ಭಜನಾ ಮಂದಿರ ಅಧ್ಯಕ್ಷ ವಾಸು ಖಾರ್ವಿ ಉಪಸ್ಥಿತರಿದ್ದರು.ಬೈಂದೂರು ತಾಲೂಕು ಸಂಯೋಜಕ ಪ್ರಸನ್ನ ಉಪ್ಪÅಂದ ಸ್ವಾಗತಿಸಿದರು.ತುಳಸಿ ದಾಸ್ ಶಿರೂರು ನಿರೂಪಿಸಿದರು.ತಾಲೂಕು ಸಂಚಾಲಕ ಜಗದೀಶ್ ಕೊಲ್ಲೂರು ವಂದಿಸಿದರು.ಅಯೋಧ್ಯೆಯಿಂದ ಆಗಮಿಸಿದ ಶ್ರೀರಾಮ ಮಂತ್ರಾಕ್ಷತೆಯನ್ನು ಮರವಂತೆ ಶ್ರೀರಾಮ ಮಂದಿರದಲ್ಲಿ ಪೂಜಿಸಲಾಯಿತು.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

3 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago