ಬೈಂದೂರು:ಅಯೋಧ್ಯೆ ರಾಮ ಮಂದಿರದಲ್ಲಿ ಪೂಜೆಗೊಂಡು ನಮ್ಮೂರಿಗೆ ಭವ್ಯ ಶೋಭಾ ಯಾತ್ರೆಯಲ್ಲಿ ಆಗಮಿಸಿದ ಮಂತ್ರಾಕ್ಷತೆಯನ್ನು ಮನೆ ಮನೆಗೆ ತಲುಪಿಸಿಸುವ ಕಾರ್ಯ ಮಾಡಬೇಕಾಗಿದೆ ಎಂದು ಅಯೋಧ್ಯೆ ಶ್ರೀರಾಮ ಮಂದಿರ ಅಭಿಯಾನದ ಉಡುಪಿ ಜಿಲ್ಲಾ ಸಂಚಾಲಕ ಸುರೇಂದ್ರ ಕೋಟೇಶ್ವರ ಹೇಳಿದರು.
ಅಯೋಧ್ಯ ಶ್ರೀರಾಮ ಮಂದಿರ ಮಂತ್ರಾಕ್ಷತಾ ಅಭಿಯಾನ ಉಡುಪಿ ಜಿಲ್ಲೆ,ಶ್ರೀರಾಮ ಮಂದಿರ ಲೋಕಾರ್ಪಣೆ ಮತ್ತು ಮೂರ್ತಿ ಪ್ರತಿಷ್ಠಾನ ಪ್ರಯುಕ್ತ ಮನೆ ಸಂಪರ್ಕ ಹಾಗೂ ಮಂತ್ರಾಕ್ಷತಾ ಅಭಿಯಾನ ಸಮಿತಿ ವತಿಯಿಂದ ಶ್ರೀಮಹಾಗಣಪತಿ ಮಾಂಗಲ್ಯ ಮಂಟಪ ನಾವುಂದದಲ್ಲಿ ಭಾನುವಾರ ನಡೆದ ಬೈಂದೂರು ತಾಲೂಕು ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರದ ಕಾಮಗಾರಿಯ ಮೊದಲನೇ ಹಂತ ಮುಕ್ತಾಯದ ಹತ್ತಿರದಲ್ಲಿದ್ದು ಮುಂದಿನ 42 ದಿನಗಳಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯ ನಡೆಯಲಿದೆ ಎಂದು ಹೇಳಿದರು.
ಶ್ರೀ ಸತ್ಯ ಸ್ವರೂಪಾನಂದ ಸ್ವಾಮೀಜಿ ಶ್ರೀ ರಾಮಕೃಷ್ಣಾಶ್ರಮ ಏಳಜಿತ್ ಅವರು ಆಶೀರ್ವಚನ ನೀಡಿದರು.ಉಡುಪಿ ಜಿಲ್ಲಾ ಸಂಘ ಚಾಲಕರಾದ ಸತೀಶ್ ಕಾಳವಾರ್ಕರ್,ಅಯೋಧ್ಯೆ ಶ್ರೀರಾಮ ಮಂದಿರ ಪ್ರತಿಷ್ಠಾನ ಜಿಲ್ಲಾ ಸಹ ಸಂಯೋಜಕ ಮುರಳಿ ಕೃಷ್ಣ,ಮರವಂತೆ ಶ್ರೀರಾಮ ಭಜನಾ ಮಂದಿರ ಅಧ್ಯಕ್ಷ ವಾಸು ಖಾರ್ವಿ ಉಪಸ್ಥಿತರಿದ್ದರು.ಬೈಂದೂರು ತಾಲೂಕು ಸಂಯೋಜಕ ಪ್ರಸನ್ನ ಉಪ್ಪÅಂದ ಸ್ವಾಗತಿಸಿದರು.ತುಳಸಿ ದಾಸ್ ಶಿರೂರು ನಿರೂಪಿಸಿದರು.ತಾಲೂಕು ಸಂಚಾಲಕ ಜಗದೀಶ್ ಕೊಲ್ಲೂರು ವಂದಿಸಿದರು.ಅಯೋಧ್ಯೆಯಿಂದ ಆಗಮಿಸಿದ ಶ್ರೀರಾಮ ಮಂತ್ರಾಕ್ಷತೆಯನ್ನು ಮರವಂತೆ ಶ್ರೀರಾಮ ಮಂದಿರದಲ್ಲಿ ಪೂಜಿಸಲಾಯಿತು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…