ಪ್ರಮುಖ

ನಾಗೂರು:ಸನ್ ರೈಸ್ ಸ್ಪೋರ್ಟ್ಸ್ ಗ್ಯಾಲರಿ ನೂತನ ಮಳಿಗೆ ಉದ್ಘಾಟನೆ

Share

( ವಿಶ್ವ ಕ್ರಿಕೆಟಿಗಪ್ರಥ್ವಿರಾಜ್ ಶೆಟ್ಟಿ ಹುಂಚನಿ ಉದ್ಘಾಟಿಸಿದರು)

ಬೈಂದೂರು:ನಾಗೂರು ಬಸ್ ಸ್ಟ್ಯಾಂಡ್ ಬಳಿ ಕೃಷ್ಣ ಕಾಂಪ್ಲೆಕ್ಸ್ ನ ಮೊದಲ ಮಹಡಿಯಲ್ಲಿ
ಸನ್ ರೈಸ್ ಸ್ಪೋರ್ಟ್ಸ್ ಗ್ಯಾಲರಿ ನೂತನ ಮಳಿಗೆಯ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ಅದ್ದೂರಿಯಾಗಿ ನಡೆಯಿತು.ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಗಣಹೋಮವನ್ನು ನೆರವೇರಿಸಲಾಯಿತು.

ವಿಶ್ವ ಕ್ರಿಕೆಟಿಗಪ್ರಥ್ವಿರಾಜ್ ಶೆಟ್ಟಿ ಹುಂಚನಿ ಉದ್ಘಾಟಿಸಿ ಶುಭಹಾರೈಸಿದರು.

ಜಯಪ್ರಕಾಶ್ ಶೆಟ್ಟಿ ಮಾತನಾಡಿ,ಗ್ರಾಮೀಣ ಪ್ರದೇಶದ ಯುವಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಸನ್ ರೈಸ್ ಸ್ಪೋರ್ಟ್ಸ್ ಗ್ಯಾಲರಿ ಅನ್ನು ಸ್ಥಾಪನೆ ಮಾಡಲಾಗಿದೆ.ಕ್ರೀಡೆಗೆ ಪೂರಕವಾಗಿರುವಂತಹ ಎಲ್ಲಾ ರೀತಿಯ ವಸ್ತುಗಳು ಇಲ್ಲಿ ದೊರೆಯುತ್ತದೆ ಇದರ ಪ್ರಯೋಜನವನ್ನು ಸಂಘ, ಸಂಸ್ಥೆಗಳು,ಕ್ರಿಕೆಟ್ ತಂಡದ ಸದಸ್ಯರು,ಕಾರ್ಯಕ್ರಮದ ಆಯೋಜಕರು ಪಡೆದು ಕೊಳ್ಳಬೇಕು ಎಂದು ಕೇಳಿಕೊಂಡರು.
ಕಂಬದಕೋಣೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸುಕೇಶ್ ಶೆಟ್ಟಿ ಮಾತನಾಡಿ,ಹತ್ತು ವರ್ಷಗಳ ಹಿಂದೆ ಸನ್ ರೈಸ್ ಸ್ಪೋರ್ಟ್ ಕ್ರಿಕೆಟ್ ತಂಡವನ್ನು ಕಟ್ಟಿಕೊಂಡು ಆ ನೆಲೆಯಲ್ಲಿ ಉತ್ಸಾಹಿ ಯುವಕರು ಸನ್ ರೈಸ್ ಸ್ಪೋರ್ಟ್ಸ್ ಗ್ಯಾಲರಿ ಎನ್ನುವ ನೂತನ ಸಂಸ್ಥೆಯನ್ನು ನಾಗೂರಿನಲ್ಲಿ ಸ್ಥಾಪನೆಮಾಡಿದ್ದಾರೆ.ಈ ಸಂಸ್ಥೆಯಲ್ಲಿ ಸ್ಪೋರ್ಟ್ಸ್ ಗೆ ಸಂಬಂಧಿಸಿದ ಎಲ್ಲಾ ಬಗೆಯ ಕ್ರೀಡಾ ಪರಿಕರಗಳು ದೊರೆಯುತ್ತದೆ ಇದರ ಪ್ರಯೋಜನವನ್ನು ಪಡೆಯಬೇಕು ಎಂದು ಹೇಳಿದರು.

ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ಶೇಖರ ಖಾರ್ವಿ ಮಾತನಾಡಿ,ಗ್ರಾಮೀಣ ಭಾಗದಲ್ಲಿ ಸ್ಪೋರ್ಟ್ಸ್ ಗ್ಯಾಲರಿ ಆರಂಭಿಸಿದ್ದರಿಂದ ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರಯೋಜನೆ ಆಗಲಿದೆ ಎಂದರು.
ಸನ್ ರೈಸ್ ಸ್ಪೋರ್ಟ್ ಗ್ಯಾಲರಿ ಸಂಸ್ಥೆಯ ಮಾಲೀಕರಾದ ಪ್ರತಾಪ್ ಶೆಟ್ಟಿ ಹಳಗೇರಿ ಮಾತನಾಡಿ,ಕ್ರಿಕೆಟ್ ಗೆ ಸಂಬಂಧಿಸಿದ ಸಾಮಾಗ್ರಿಗಳು,ಶಟಲ್ ಬ್ಯಾಟ್, ವಾಲಿಬಾಲ್, ಸ್ಪೋರ್ಟ್ಸ್ ಗೆ ಸಂಬಂಧಿಸಿದ ಜರ್ಸಿ, ಸನ್ಮಾನ ಮತ್ತು ಮೊಮೇಂಟ್ ಗಳು ದೊರೆಯುತ್ತದೆ ನಮ್ಮ ನವ ಉದ್ಯಮಕ್ಕೆ ಎಲ್ಲಾ ಸಹಕರಿಸಬೇಕು ಎಂದು ಕ್ರೀಡಾಭಿಮಾನಿಗಳಲ್ಲಿ ವಿನಂತಿಸಿ ಕೊಂಡರು.ಈ ಸಂದರ್ಭ ಸನ್ ರೈಸ್ ಸ್ಪೋರ್ಟ್ಸ್ ಗ್ಯಾಲರಿ ಸಹ ಮಾಲೀಕರಾದ ಪ್ರತಾಪ್ ಸುಧಾಕರ ಶೆಟ್ಟಿ,ನೂರಿ ಅಶ್ರಫ್, ಸನ್ ರೈಸ್ ಸ್ಪೋರ್ಟ್ಸ್ ತಂಡದ ಸದಸ್ಯರು, ಕ್ರೀಡಾಭಿಮಾನಿಗಳು, ಸ್ಥಳೀಯರು,ಆಟೋ ಚಾಲಕ ಮತ್ತು ಮಾಲೀಕರ ಸಂಘದವರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 weeks ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 weeks ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 month ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

1 month ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago