ಪ್ರಮುಖ

ನಾಗೂರು:ಸನ್ ರೈಸ್ ಸ್ಪೋರ್ಟ್ಸ್ ಗ್ಯಾಲರಿ ನೂತನ ಮಳಿಗೆ ಉದ್ಘಾಟನೆ

Share

( ವಿಶ್ವ ಕ್ರಿಕೆಟಿಗಪ್ರಥ್ವಿರಾಜ್ ಶೆಟ್ಟಿ ಹುಂಚನಿ ಉದ್ಘಾಟಿಸಿದರು)

ಬೈಂದೂರು:ನಾಗೂರು ಬಸ್ ಸ್ಟ್ಯಾಂಡ್ ಬಳಿ ಕೃಷ್ಣ ಕಾಂಪ್ಲೆಕ್ಸ್ ನ ಮೊದಲ ಮಹಡಿಯಲ್ಲಿ
ಸನ್ ರೈಸ್ ಸ್ಪೋರ್ಟ್ಸ್ ಗ್ಯಾಲರಿ ನೂತನ ಮಳಿಗೆಯ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ಅದ್ದೂರಿಯಾಗಿ ನಡೆಯಿತು.ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಗಣಹೋಮವನ್ನು ನೆರವೇರಿಸಲಾಯಿತು.

ವಿಶ್ವ ಕ್ರಿಕೆಟಿಗಪ್ರಥ್ವಿರಾಜ್ ಶೆಟ್ಟಿ ಹುಂಚನಿ ಉದ್ಘಾಟಿಸಿ ಶುಭಹಾರೈಸಿದರು.

ಜಯಪ್ರಕಾಶ್ ಶೆಟ್ಟಿ ಮಾತನಾಡಿ,ಗ್ರಾಮೀಣ ಪ್ರದೇಶದ ಯುವಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಸನ್ ರೈಸ್ ಸ್ಪೋರ್ಟ್ಸ್ ಗ್ಯಾಲರಿ ಅನ್ನು ಸ್ಥಾಪನೆ ಮಾಡಲಾಗಿದೆ.ಕ್ರೀಡೆಗೆ ಪೂರಕವಾಗಿರುವಂತಹ ಎಲ್ಲಾ ರೀತಿಯ ವಸ್ತುಗಳು ಇಲ್ಲಿ ದೊರೆಯುತ್ತದೆ ಇದರ ಪ್ರಯೋಜನವನ್ನು ಸಂಘ, ಸಂಸ್ಥೆಗಳು,ಕ್ರಿಕೆಟ್ ತಂಡದ ಸದಸ್ಯರು,ಕಾರ್ಯಕ್ರಮದ ಆಯೋಜಕರು ಪಡೆದು ಕೊಳ್ಳಬೇಕು ಎಂದು ಕೇಳಿಕೊಂಡರು.
ಕಂಬದಕೋಣೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸುಕೇಶ್ ಶೆಟ್ಟಿ ಮಾತನಾಡಿ,ಹತ್ತು ವರ್ಷಗಳ ಹಿಂದೆ ಸನ್ ರೈಸ್ ಸ್ಪೋರ್ಟ್ ಕ್ರಿಕೆಟ್ ತಂಡವನ್ನು ಕಟ್ಟಿಕೊಂಡು ಆ ನೆಲೆಯಲ್ಲಿ ಉತ್ಸಾಹಿ ಯುವಕರು ಸನ್ ರೈಸ್ ಸ್ಪೋರ್ಟ್ಸ್ ಗ್ಯಾಲರಿ ಎನ್ನುವ ನೂತನ ಸಂಸ್ಥೆಯನ್ನು ನಾಗೂರಿನಲ್ಲಿ ಸ್ಥಾಪನೆಮಾಡಿದ್ದಾರೆ.ಈ ಸಂಸ್ಥೆಯಲ್ಲಿ ಸ್ಪೋರ್ಟ್ಸ್ ಗೆ ಸಂಬಂಧಿಸಿದ ಎಲ್ಲಾ ಬಗೆಯ ಕ್ರೀಡಾ ಪರಿಕರಗಳು ದೊರೆಯುತ್ತದೆ ಇದರ ಪ್ರಯೋಜನವನ್ನು ಪಡೆಯಬೇಕು ಎಂದು ಹೇಳಿದರು.

ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ಶೇಖರ ಖಾರ್ವಿ ಮಾತನಾಡಿ,ಗ್ರಾಮೀಣ ಭಾಗದಲ್ಲಿ ಸ್ಪೋರ್ಟ್ಸ್ ಗ್ಯಾಲರಿ ಆರಂಭಿಸಿದ್ದರಿಂದ ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರಯೋಜನೆ ಆಗಲಿದೆ ಎಂದರು.
ಸನ್ ರೈಸ್ ಸ್ಪೋರ್ಟ್ ಗ್ಯಾಲರಿ ಸಂಸ್ಥೆಯ ಮಾಲೀಕರಾದ ಪ್ರತಾಪ್ ಶೆಟ್ಟಿ ಹಳಗೇರಿ ಮಾತನಾಡಿ,ಕ್ರಿಕೆಟ್ ಗೆ ಸಂಬಂಧಿಸಿದ ಸಾಮಾಗ್ರಿಗಳು,ಶಟಲ್ ಬ್ಯಾಟ್, ವಾಲಿಬಾಲ್, ಸ್ಪೋರ್ಟ್ಸ್ ಗೆ ಸಂಬಂಧಿಸಿದ ಜರ್ಸಿ, ಸನ್ಮಾನ ಮತ್ತು ಮೊಮೇಂಟ್ ಗಳು ದೊರೆಯುತ್ತದೆ ನಮ್ಮ ನವ ಉದ್ಯಮಕ್ಕೆ ಎಲ್ಲಾ ಸಹಕರಿಸಬೇಕು ಎಂದು ಕ್ರೀಡಾಭಿಮಾನಿಗಳಲ್ಲಿ ವಿನಂತಿಸಿ ಕೊಂಡರು.ಈ ಸಂದರ್ಭ ಸನ್ ರೈಸ್ ಸ್ಪೋರ್ಟ್ಸ್ ಗ್ಯಾಲರಿ ಸಹ ಮಾಲೀಕರಾದ ಪ್ರತಾಪ್ ಸುಧಾಕರ ಶೆಟ್ಟಿ,ನೂರಿ ಅಶ್ರಫ್, ಸನ್ ರೈಸ್ ಸ್ಪೋರ್ಟ್ಸ್ ತಂಡದ ಸದಸ್ಯರು, ಕ್ರೀಡಾಭಿಮಾನಿಗಳು, ಸ್ಥಳೀಯರು,ಆಟೋ ಚಾಲಕ ಮತ್ತು ಮಾಲೀಕರ ಸಂಘದವರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

7 days ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago