ಕುಂದಾಪುರ

ತ್ರಾಸಿ:ಸ್ವಚ್ಛ ಕರಾವಳಿ ಮಿಷನ್ ಯೋಜನೆ ಉದ್ಘಾಟನೆ

Share

ಕುಂದಾಪುರ:ಪರಿಸರದ ಮೇಲಿನ ಅಸಮತೋಲನದಿಂದಾಗಿ ಜಾಗತಿಕ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದೆ ತಾಪಮಾನದ ಏರಿಕೆಯ ಬಿಸಿಯನ್ನು ತಪ್ಪಿಸಬೇಕಾದರೆ ಸ್ವಚ್ಛಾ ಪರಿಸರವನ್ನು ನಿರ್ಮಿಸುವುದು ಎಲ್ಲರ ಜವಾಬ್ದಾರಿ ಆಗಿದೆ ಎಂದು ತ್ರಾಸಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಿಥುನ್ ದೇವಾಡಿಗ ಹೇಳಿದರು.
ಕ್ಸಿಯಾವೋ ಮಿ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಿಎಸ್‍ಆರ್ ಮತ್ತು ಸಾಹಸ್ ಸಂಸ್ಥೆ ಸಹಯೋಗದೊಂದಿಗೆ ಹಾಗೂ ತ್ರಾಸಿ ಗ್ರಾಮ ಪಂಚಾಯತಿ ಸಹಕಾರದೊಂದಿಗೆ ತ್ರಾಸಿ ಬೀಚ್‍ನಲ್ಲಿ ನಡೆದ ಸ್ವಚ್ಛಾ ಕರಾವಳಿ ಮಿಷನ್ ಯೋಜನೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕುಂದಾಪುರ ತಾ.ಪಂ ಇ.ಒ ಶಶಿಧರ್ ಅವರು ಕರಪತ್ರವನ್ನು ಉದ್ಘಾಟಿಸಿ ಮಾತನಾಡಿ,ಮನೆಯಲ್ಲಿ ಉತ್ಪತ್ತಿ ಆಗುವ ತ್ಯಾಜ್ಯವನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡುವುದರಿಂದ ಪರಿಸರವನ್ನು ಇನ್ನಷ್ಟು ಸ್ವಚ್ಚಾವಾಗಿ ಇಟ್ಟುಕೊಳ್ಳಬಹುದಾಗಿದೆ ಎಂದು ಅಭಿಪ್ರಾಯಪಟ್ಟರು.
ಸಾಹಸ ಎನ್.ಜಿ.ಒ ಸಂಸ್ಥೆಯ ಪ್ರೋಗ್ರಾಂ ಮ್ಯಾನೇಜರ್ ಪ್ರೀತಾ ಆರ್.ಕೆ ಮಾತನಾಡಿ,ಸಮುದ್ರಕ್ಕೆ ತ್ಯಾಜ್ಯಗಳು ಸೇರಬಾರದು ಎನ್ನುವ ಉದ್ದೇಶದಿಂದ ವಿಶೇಷವಾದ ರೀತಿಯಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಮುಂದಿನ ಮೂರು ವರ್ಷಗಳ ಅವಧಿ ವರೆಗೆ ಬೈಂದೂರು ಹಾಗೂ ಕುಂದಾಪುರ ತಾಲೂಕಿನ ಆಯ್ದ 12 ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೆಲಸ ಮಾಡಲಿದೆ ಎಂದು ಹೇಳಿದರು.
ಬೈಂದೂರು ತಾ.ಪಂ ಇ.ಒ ಭಾರತಿ,ಕ್ಸಿಯಾವೋ ಮಿ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮನೀಶ್ ಜೈನ್ ಮತ್ತು ಜಯಂತ ಕೆ.ಆರ್,ಹೊಸಾಡು ಪಿಡಿಒ ಪಾರ್ವತಿ,ತ್ರಾಸಿ ಪಿಡಿಒ ಶೋಭಾ.ಎಸ್,ಗುಜ್ಜಾಡಿ ಪಿಡಿಒ ನಾಗವೇಣಿ,ಹೊಸಾಡು ಮಿನಿ ಎಂಆರ್‍ಎಫ್ ಘಟಕದ ಮೇಲ್ವಿಚಾರಕಿ ಸುನೀತಾ ಮರವಂತೆ,ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು,ಸಾಹಸ್ ಸಂಸ್ಥೆಯ ಪ್ರತಿನಿಧಿಗಳು,ವಿದ್ಯಾರ್ಥಿಗಳು,ಸಂಜೀವಿ ಸಂಘದ ಸದಸ್ಯರು,ಶಿಕ್ಷಕರು ಉಪಸ್ಥಿತರಿದ್ದರು.ಶಶಿಕಲಾ ಸ್ವಾಗತಿಸಿದರು.ಶಿಕ್ಷಕ ರಾಜೇಶ ನಿರೂಪಿಸಿ,ವಂದಿಸಿದರು.
ತ್ರಾಸಿ ಗ್ರಾಮ ಪಂಚಾಯತಿ ಮತ್ತು ಸಾಹಸ ಸಂಸ್ಥೆ ಹಾಗೂ ಕ್ಸಿಯಾವೋ ಮಿ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಿಎಸ್‍ಆರ್,ಕರಾವಳಿ ಕಾವಲು ಪಡೆ ಗಂಗೊಳ್ಳಿ,ಸರಕಾರಿ ಹಿರಿಯ ಪ್ರಾಥಮಿಕ ಕಂಚುಗೋಡು ಶಾಲಾ ವಿದ್ಯಾರ್ಥಿಗಳ ವತಿಯಿಂದ ಕುಂದಾಪುರ ತಾಲೂಕಿನ ತ್ರಾಸಿ ಬೀಚ್‍ನಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಸಮುದ್ರ ಕಿನಾರೆಯಲ್ಲಿ ಬಿದ್ದ ಕಸವನ್ನು ಹೆಕ್ಕಿ ಸ್ವಚ್ಛಗೊಳಿಸಲಾಯಿತು.ಈ ಸಂದರ್ಭದಲ್ಲಿ ನಾನಾ ಸಂಸ್ಥೆಯ ಪ್ರತಿನಿಗಳು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 days ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 days ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 weeks ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

4 weeks ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago