ಕುಂದಾಪುರ

ಶಿರೂರು ದೋಣಿ ದುರಂತ,ಇಬ್ಬರು ಮೀನುಗಾರರು ಸಾವು

Share

ಬೈಂದೂರು:ಮೀನುಗಾರಿಕೆಗೆ ತೆರಳಿ ವಾಪಾಸ್ಸು ಮರಳಿ ಬರುವ ವೇಳೆ ದೋಣಿ ಮಗುಚಿ ಇಬ್ಬರು ಮೀನುಗಾರರು ಸಾವನ್ನಪ್ಪಿದ ಘಟನೆ ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ.
ಭಾನುವಾರ ರಾತ್ರಿ 10-00 ಗಂಟೆಗೆ ಸುಮಾರಿಗೆ ಶಿರೂರು ಕಳುಹಿತ್ಲುನಿಂದ ನುಮೈರಾ ಅಂಜುಮ್ ಎಂಬ ಹೆಸರಿನ ದೋಣಿಯಲ್ಲಿ 3 ಜನ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು.ಮೀನುಗಾರಿಕೆ ನಡೆಸಿ ವಾಪಾಸ್ಸು ಬರುವಾಗ ವೇಳೆ ಸೋಮವಾರ ಮುಂಜಾವು 01.30 ರ ಗಂಟೆ ಸುಮಾರಿಗೆ ಶಿರೂರು ಕಳುಹಿತ್ಲು ಅಳಿವೆ ಸಮೀಪ ದೋಣಿ ಮಗುಚಿ ಬಿದ್ದಿದೆ ಪರಿಣಾಮ ದೋಣಿಯಲ್ಲಿದ್ದ ಅಬ್ಸುಲ್ ಸತ್ತರ್ (45 ) ಹಡವಿನಕೋಣೆ ಶಿರೂರು ಮಿಸ್ಬಾ ಯೂಸುಫ್ (48) ಕುದ್ವಾಯಿ ರೋಡ್ ಭಟ್ಕಳ ಅವರು ಮೃತಪಟ್ಟಿದ್ದಾರೆ.ದೋಣಿಯಲ್ಲಿದ್ದ ಮತ್ತೋರ್ವ ಬುಡ್ಡು ಮುಖ್ತಾರ್ ( 37) ಹಡವಿನಕೋಣೆ ಇವರನ್ನು ಇನ್ನೊಂದು ದೋಣಿಯಲ್ಲಿದ್ದ ಮಾಮ್ಸು ಯಾಕೂಬ್ ರವರು ರಕ್ಷಣೆ ಮಾಡಿದ್ದಾರೆ.ಈ ಭಾಗದಲ್ಲಿ ಕೆಲವೆ ತಿಂಗಳುಗಳ ಹಿಂದೆ ಇಬ್ಬರು ಮೀನುಗಾರರ ಸಮುದ್ರ ಪಾಲಾಗಿದ್ದು ಈ ವರ್ಷ ಬೈಂದೂರು ಭಾಗದಲ್ಲಿ ಅತ್ಯಧಿಕ ಮೀನುಗಾರಿಕಾ ದುರಂತಗಳು ನಡೆದಿದೆ.ಕರಾವಳಿ ಕಾವಲು ಪಡೆ ಹಾಗೂ ಆರಕ್ಷಕ ಸಿಬಂಧಿಗಳು ಆಗಮಿಸಿದ್ದು ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Share
Team Kundapur Times

Recent Posts

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

7 days ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago