ಬೈಂದೂರು:ಮೀನುಗಾರಿಕೆಗೆ ತೆರಳಿ ವಾಪಾಸ್ಸು ಮರಳಿ ಬರುವ ವೇಳೆ ದೋಣಿ ಮಗುಚಿ ಇಬ್ಬರು ಮೀನುಗಾರರು ಸಾವನ್ನಪ್ಪಿದ ಘಟನೆ ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ.
ಭಾನುವಾರ ರಾತ್ರಿ 10-00 ಗಂಟೆಗೆ ಸುಮಾರಿಗೆ ಶಿರೂರು ಕಳುಹಿತ್ಲುನಿಂದ ನುಮೈರಾ ಅಂಜುಮ್ ಎಂಬ ಹೆಸರಿನ ದೋಣಿಯಲ್ಲಿ 3 ಜನ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು.ಮೀನುಗಾರಿಕೆ ನಡೆಸಿ ವಾಪಾಸ್ಸು ಬರುವಾಗ ವೇಳೆ ಸೋಮವಾರ ಮುಂಜಾವು 01.30 ರ ಗಂಟೆ ಸುಮಾರಿಗೆ ಶಿರೂರು ಕಳುಹಿತ್ಲು ಅಳಿವೆ ಸಮೀಪ ದೋಣಿ ಮಗುಚಿ ಬಿದ್ದಿದೆ ಪರಿಣಾಮ ದೋಣಿಯಲ್ಲಿದ್ದ ಅಬ್ಸುಲ್ ಸತ್ತರ್ (45 ) ಹಡವಿನಕೋಣೆ ಶಿರೂರು ಮಿಸ್ಬಾ ಯೂಸುಫ್ (48) ಕುದ್ವಾಯಿ ರೋಡ್ ಭಟ್ಕಳ ಅವರು ಮೃತಪಟ್ಟಿದ್ದಾರೆ.ದೋಣಿಯಲ್ಲಿದ್ದ ಮತ್ತೋರ್ವ ಬುಡ್ಡು ಮುಖ್ತಾರ್ ( 37) ಹಡವಿನಕೋಣೆ ಇವರನ್ನು ಇನ್ನೊಂದು ದೋಣಿಯಲ್ಲಿದ್ದ ಮಾಮ್ಸು ಯಾಕೂಬ್ ರವರು ರಕ್ಷಣೆ ಮಾಡಿದ್ದಾರೆ.ಈ ಭಾಗದಲ್ಲಿ ಕೆಲವೆ ತಿಂಗಳುಗಳ ಹಿಂದೆ ಇಬ್ಬರು ಮೀನುಗಾರರ ಸಮುದ್ರ ಪಾಲಾಗಿದ್ದು ಈ ವರ್ಷ ಬೈಂದೂರು ಭಾಗದಲ್ಲಿ ಅತ್ಯಧಿಕ ಮೀನುಗಾರಿಕಾ ದುರಂತಗಳು ನಡೆದಿದೆ.ಕರಾವಳಿ ಕಾವಲು ಪಡೆ ಹಾಗೂ ಆರಕ್ಷಕ ಸಿಬಂಧಿಗಳು ಆಗಮಿಸಿದ್ದು ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…