ಬೈಂದೂರು:ಮೀನುಗಾರಿಕೆಗೆ ತೆರಳಿ ವಾಪಾಸ್ಸು ಮರಳಿ ಬರುವ ವೇಳೆ ದೋಣಿ ಮಗುಚಿ ಇಬ್ಬರು ಮೀನುಗಾರರು ಸಾವನ್ನಪ್ಪಿದ ಘಟನೆ ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ.
ಭಾನುವಾರ ರಾತ್ರಿ 10-00 ಗಂಟೆಗೆ ಸುಮಾರಿಗೆ ಶಿರೂರು ಕಳುಹಿತ್ಲುನಿಂದ ನುಮೈರಾ ಅಂಜುಮ್ ಎಂಬ ಹೆಸರಿನ ದೋಣಿಯಲ್ಲಿ 3 ಜನ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು.ಮೀನುಗಾರಿಕೆ ನಡೆಸಿ ವಾಪಾಸ್ಸು ಬರುವಾಗ ವೇಳೆ ಸೋಮವಾರ ಮುಂಜಾವು 01.30 ರ ಗಂಟೆ ಸುಮಾರಿಗೆ ಶಿರೂರು ಕಳುಹಿತ್ಲು ಅಳಿವೆ ಸಮೀಪ ದೋಣಿ ಮಗುಚಿ ಬಿದ್ದಿದೆ ಪರಿಣಾಮ ದೋಣಿಯಲ್ಲಿದ್ದ ಅಬ್ಸುಲ್ ಸತ್ತರ್ (45 ) ಹಡವಿನಕೋಣೆ ಶಿರೂರು ಮಿಸ್ಬಾ ಯೂಸುಫ್ (48) ಕುದ್ವಾಯಿ ರೋಡ್ ಭಟ್ಕಳ ಅವರು ಮೃತಪಟ್ಟಿದ್ದಾರೆ.ದೋಣಿಯಲ್ಲಿದ್ದ ಮತ್ತೋರ್ವ ಬುಡ್ಡು ಮುಖ್ತಾರ್ ( 37) ಹಡವಿನಕೋಣೆ ಇವರನ್ನು ಇನ್ನೊಂದು ದೋಣಿಯಲ್ಲಿದ್ದ ಮಾಮ್ಸು ಯಾಕೂಬ್ ರವರು ರಕ್ಷಣೆ ಮಾಡಿದ್ದಾರೆ.ಈ ಭಾಗದಲ್ಲಿ ಕೆಲವೆ ತಿಂಗಳುಗಳ ಹಿಂದೆ ಇಬ್ಬರು ಮೀನುಗಾರರ ಸಮುದ್ರ ಪಾಲಾಗಿದ್ದು ಈ ವರ್ಷ ಬೈಂದೂರು ಭಾಗದಲ್ಲಿ ಅತ್ಯಧಿಕ ಮೀನುಗಾರಿಕಾ ದುರಂತಗಳು ನಡೆದಿದೆ.ಕರಾವಳಿ ಕಾವಲು ಪಡೆ ಹಾಗೂ ಆರಕ್ಷಕ ಸಿಬಂಧಿಗಳು ಆಗಮಿಸಿದ್ದು ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…