ಕುಂದಾಪುರ:ಕನ್ನಡ ಚಿತ್ರರಂಗದ ಖ್ಯಾತ ನಟ ನಿರ್ದೇಶಕ ರಿಷಬ್ ಶೆಟ್ಟಿ ಅವರು ತಾನು ಓದಿರುವ ಹೂಟ್ಟುರು ಶಾಲೆಯನ್ನು ಐದು ವರ್ಷಗಳ ಅವಧಿ ವರೆಗೆ ದತ್ತು ತೆಗೆದುಕೊಳ್ಳುವುದರ ಮುಖೇನ ಸಾಮಾಜಿಕ ಕಳಕಳಿ ಮೆರೆದಿದ್ದಾರೆ.
ಕನ್ನಡ ಸಿನೆಮಾ ರಂಗದಲ್ಲಿ ತನ್ನದೇ ಛಾಪು ಮೂಡಿಸಿ ಮನೆ ಮಾತಾಗಿರುವ ರಿಷಬ್ ಶೆಟ್ಟಿ ಅವರು ತನ್ನ ತವರಿನಲ್ಲಿರುವ ಕೆರಾಡಿ ಹಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ತೆಗೆದುಕೊಳ್ಳುವ ಮೂಲಕ ಹೊಸ ಭಾಷ್ಯ ಬರೆದಿದ್ದಾರೆ. ಸಮೃದ್ಧ ಬೈಂದೂರು ಅಭಿವೃದ್ಧಿಗೆ ಕೈ ಜೋಡಿಸುಡಿಸುತ್ತಿರುವ ರಿಷಬ್ ಶೆಟ್ಟಿ ಅವರು ತಾನು ಕಲಿತ ಶಾಲೆಯನ್ನು ದತ್ತು ಪಡೆದುಕೊಂಡು ಗ್ರಾಮೀಣ ಪ್ರದೇಶದ ಮಕ್ಕಳ ಶಿಕ್ಷಣಕ್ಕೆ ಒತ್ತನ್ನು ನೀಡುವುದರ ಮೂಲಕ ತಮ್ಮದೆ ಕೊಡುಗೆಯನ್ನು ನೀಡಿದ್ದಾರೆ.
ಶಾಲಾ ದತ್ತು ಪಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ರಿಷಬ್ ಶೆಟ್ಟಿ ಅವರು ಇವೊಂದು ಕಾರ್ಯಕ್ರಮದಲ್ಲಿ ಭಾಗವಹಿಸಿ ತನ್ನ ಅಭಿಪ್ರಾಯವನ್ನು ಹಂಚಿಕೊಳ್ಳಲು ಸಿಕ್ಕಿದ ಅವಕಾಶಕ್ಕೆ ಧನ್ಯವಾದವನ್ನು ಅರ್ಪಿಸಿದರು.
ಈ ಸಂದರ್ಭದಲ್ಲಿ ಬಿ.ಎಸ್ ಸುರೇಶ ಶೆಟ್ಟಿ,ವಕೀಲರಾದ ಪ್ರಸನ್ನ ಕುಮಾರ್ ಶೆಟ್ಟಿ,ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್,ಕೆರಾಡಿ ಪಂಚಾಯತ್ ಅಧ್ಯಕ್ಷ ಸುದರ್ಶನ ಶೆಟ್ಟಿ,ಎಸ್ಡಿಎಂಸಿ ಅಧ್ಯಕ್ಷರು,ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.
ಕುಂದಾಪುರ:ಆರ್ಭಟಿಸಿದ ಗಾಳಿ ರಭಸಕ್ಕೆ ಬೈಂದೂರು ತಾಲೂಕಿನ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿನ ಪ್ರಾಂಗಾಣದ ಸೀಟ್ ಮಾಡು ತುಂಡು ತುಂಡಾಗಿ…
ಕುಂದಾಪುರ:ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬಿಸಿದ ಗಾಳಿ ಅಬ್ಬರಕ್ಕೆ ಅಕ್ಷರಹ ಸಹ ಕುಂದಾಪ್ರ ಮತ್ತು ಬೈಂದೂರು ತಾಲೂಕಿನ ಪ್ರದೇಶಗಳು…
ಕುಂದಾಪುರ:ಏಕಏಕಿ ಶನಿವಾರ ಸಂಜೆ ಬೀಸಿದ ಭಾರಿ ಗಾಳಿಗೆ ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗೆ ಒಳಪಟ್ಟಿರುವ ತಲ್ಲೂರು ಉಪವಿಭಾಗದ ವ್ಯಾಪ್ತಿಯಲ್ಲಿನ ಹೆಮ್ಮಾಡಿ,ದೇವಲ್ಕುಂದ,ಆಲೂರು,ಬಡಾಕೆರೆ,ಗಂಗೊಳ್ಳಿ…
ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚುಗೋಡು ಸನ್ಯಾಸಿಬಲ್ಲೆ ಸ್ಮಶಾನ ಹಾಗೂ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಅನಾದಿ ಕಾಲದ ರಸ್ತೆಯನ್ನು…
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…