ಕುಂದಾಪುರ

ಖಂಬದಕೋಣೆ:ರಾಷ್ಟ್ರೀಯ ರೈತ ದಿನಾಚರಣೆ,ಸಾಧಕ ರೈತರಿಗೆ ಸನ್ಮಾನ

Share

ಕುಂದಾಪುರ:ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ರೈತರಿಗೆ ಮಾದರಿ ಸಂಸ್ಥೆಯಾಗಿ ಸೇವೆ ನೀಡುತ್ತಿರುವುದು ಅತ್ಯಂತ ಮಹತ್ವದ ಸಂಗತಿಯಾಗಿದೆ.ಇದಕ್ಕೆ ಸಂಘದ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಯವರ ಅನನ್ಯ ಕೊಡುಗೆ ಕಾರಣವಾಗಿದೆ.ರೈತರಿಗೆ ಹೆಚ್ಚು ಸೇವೆ ನೀಡಿದಷ್ಟು ಕೃಷಿ ಸೇರಿದಂತೆ ಹೈನುಗಾರಿಕೆ ಕ್ಷೇತ್ರ ಬಲಪಡಿಸಲು ಸಾಧ್ಯವಾಗುತ್ತದೆ.ಈ ನಿಟ್ಟಿನಲ್ಲಿ ಖ.ರೈ.ಸೇ.ಸಂಘದ ರೈತರ ಕಾರ್ಯಕ್ರಮಗಳು ಮಾದರಿಯಾಗಿ ಗುರುತಿಸಿಕೊಂಡಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.

ನಾಗೂರು ಶ್ರೀ ಕೃಷ್ಣ ಲಲಿತ ಕಲಾಮಂದಿರದಲ್ಲಿ ನಡೆದ ರೈತರ ಸೇವಾ ಸಹಕಾರಿ ಸಂಘ ನಿ.,ಉಪ್ಪುಂದ ಹಾಗೂ ರೈತ ಸಿರಿ,ರೈತ ಸೇವಾ ಒಕ್ಕೂಟ ಉಪ್ಪುಂದ ಅವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ರೈತರ ದಿನಾಚರಣೆ ಹಾಗೂ ಹಿರಿಯ ರೈತರ ಸಮ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ. ಅಧ್ಯಕ್ಷ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ,ಸರಕಾರ ಕೃಷಿ ಇಲಾಖೆಯನ್ನು ಬಲಪಡಿಸಿ ರೈತರ ಜೊತೆಗೆ ನಿಲ್ಲುವ ಅಗತ್ಯವಿದೆ.ರೈತರ ದಿನಾಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗಿರದೆ ರೈತರಿಗೆ ಆತ್ಮಸ್ತರ್ಯ ತುಂಬುವ ನಿಟ್ಟಿನಲ್ಲಿ ಇನ್ನಷ್ಟು ಆದ್ಯತೆಗಳು ಸರಕಾರದ ಮಟ್ಟದಲ್ಲಿ ದೊರಕುವಂತಾದಾಗ ಕೃಷಿ ಕ್ಷೇತ್ರದ ಉಳಿವಿಗೆ ಸಹಕಾರಿಯಾಗಲಿದೆ ಎಂದರು.

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಅಧ್ಯಕ್ಷ  ಕೆ.ಪಿ ಸುಚರಿತ ಶೆಟ್ಟಿ ಮಾತನಾಡಿ,ಸಹಕಾರಿ ಕ್ಷೇತ್ರಕ್ಕೆ ಧರ್ಮ ಜಾತಿ ಇಲ್ಲ ಎಲ್ಲರೂ ಒಂದೇ ಎನ್ನುವ ಭಾವನೆ ಆಗಿದೆ.ಕೃಷಿ ಮತ್ತು ಹೈನುಗಾರಿಕೆಗೆ ಜಗತ್ತಿನ ಹಸಿವನ್ನು ನೀಗಿಸುವ ಶಕ್ತಿ ಇದೆ ಎಂದು ಹೇಳಿದರು.ಸಶಕ್ತ ಸದೃಢ ಭಾರತ ನಿರ್ಮಾಣಕ್ಕೆ ಯುವಜನತೆ ಮುಂದಾಗಬೇಕಿದೆ ಎಂದರು.

ಕಿರಿಮಂಜೇಶ್ವರ ಗ್ರಾ.ಪಂ ಅಧ್ಯಕ್ಷ ಶೇಖರ ಖಾರ್ವಿ,ಕುಂದಾಪುರ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಕೆ.ಜೆ. ನಿಽಶ್ ಹೊಳ್ಳ,ರೂಪಾ ಜೆ. ಮಾಡ ಸಹಾಯಕ ಕೃಷಿ ನಿರ್ದೇಶಕರು ಕೃಷಿ ಇಲಾಖೆ ಕುಂದಾವುರ,ಡಾ. ಬಿ. ಧನಂಜಯ ಹಿರಿಯ ವಿಜ್ಞಾನಿಗಳು, ಮುಖ್ಯಸ್ಥರು ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ,ನಿರ್ದೇಶಕರಾದ ಬಿ.ರಘುರಾಮ ಶೆಟ್ಟಿ,ಕೆ.ಮೋಹನ ಪೂಜಾರಿ,ಬಿ.ಎಸ್.ಸುರೇಶ ಶೆಟ್ಟಿ,ಗುರುರಾಜ ಹೆಬ್ಬಾರ್,ವೀರೇಂದ್ರ ಶೆಟ್ಟಿ,ಮಂಜು ದೇವಾಡಿಗ,ನಾಗರಾಜ ಖಾರ್ವಿ,ಭರತ್ ದೇವಾಡಿಗ,ಹೂವ ನಾಯ್ಕ,ದಿನೀತಾ ಶೆಟ್ಟಿ,ಜಲಜಾಕ್ಷಿ ಪೂಜಾರಿ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಹಿರಿಯ ಪ್ರಗತಿಪರ ಕೃಷಿಕರಾದ ವೆಂಕಟ ಪೂಜಾರಿ ಉಬ್ಜೇರಿ ಯವರನ್ನು ಸಮ್ಮಾನಿಸಲಾಯಿತು ಹಾಗೂ ಅತೀ ಹೆಚ್ಚು ಹಾಲು ಮಾರಾಟ ಮಾಡಿದ ಹಾಲು ಉತ್ಪಾದಕರನ್ನು ಗೌರವಿಸಲಾಯಿತು.ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿಷ್ಣು ಆರ್. ಪೈ ಸ್ವಾಗತಿಸಿದರು.ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿದರು.ಉಪಾಧ್ಯಕ್ಷ ಈಶ್ವರ ಹಕ್ಷತೋಡ್ ವಂದಿಸಿದರು.

Advertisement

Share
Team Kundapur Times

Recent Posts

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

3 hours ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

1 week ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago