ಕುಂದಾಪುರ

ಖಂಬದಕೋಣೆ:ರಾಷ್ಟ್ರೀಯ ರೈತ ದಿನಾಚರಣೆ,ಸಾಧಕ ರೈತರಿಗೆ ಸನ್ಮಾನ

Share

ಕುಂದಾಪುರ:ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ರೈತರಿಗೆ ಮಾದರಿ ಸಂಸ್ಥೆಯಾಗಿ ಸೇವೆ ನೀಡುತ್ತಿರುವುದು ಅತ್ಯಂತ ಮಹತ್ವದ ಸಂಗತಿಯಾಗಿದೆ.ಇದಕ್ಕೆ ಸಂಘದ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಯವರ ಅನನ್ಯ ಕೊಡುಗೆ ಕಾರಣವಾಗಿದೆ.ರೈತರಿಗೆ ಹೆಚ್ಚು ಸೇವೆ ನೀಡಿದಷ್ಟು ಕೃಷಿ ಸೇರಿದಂತೆ ಹೈನುಗಾರಿಕೆ ಕ್ಷೇತ್ರ ಬಲಪಡಿಸಲು ಸಾಧ್ಯವಾಗುತ್ತದೆ.ಈ ನಿಟ್ಟಿನಲ್ಲಿ ಖ.ರೈ.ಸೇ.ಸಂಘದ ರೈತರ ಕಾರ್ಯಕ್ರಮಗಳು ಮಾದರಿಯಾಗಿ ಗುರುತಿಸಿಕೊಂಡಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.

ನಾಗೂರು ಶ್ರೀ ಕೃಷ್ಣ ಲಲಿತ ಕಲಾಮಂದಿರದಲ್ಲಿ ನಡೆದ ರೈತರ ಸೇವಾ ಸಹಕಾರಿ ಸಂಘ ನಿ.,ಉಪ್ಪುಂದ ಹಾಗೂ ರೈತ ಸಿರಿ,ರೈತ ಸೇವಾ ಒಕ್ಕೂಟ ಉಪ್ಪುಂದ ಅವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ರೈತರ ದಿನಾಚರಣೆ ಹಾಗೂ ಹಿರಿಯ ರೈತರ ಸಮ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ. ಅಧ್ಯಕ್ಷ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ,ಸರಕಾರ ಕೃಷಿ ಇಲಾಖೆಯನ್ನು ಬಲಪಡಿಸಿ ರೈತರ ಜೊತೆಗೆ ನಿಲ್ಲುವ ಅಗತ್ಯವಿದೆ.ರೈತರ ದಿನಾಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗಿರದೆ ರೈತರಿಗೆ ಆತ್ಮಸ್ತರ್ಯ ತುಂಬುವ ನಿಟ್ಟಿನಲ್ಲಿ ಇನ್ನಷ್ಟು ಆದ್ಯತೆಗಳು ಸರಕಾರದ ಮಟ್ಟದಲ್ಲಿ ದೊರಕುವಂತಾದಾಗ ಕೃಷಿ ಕ್ಷೇತ್ರದ ಉಳಿವಿಗೆ ಸಹಕಾರಿಯಾಗಲಿದೆ ಎಂದರು.

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಅಧ್ಯಕ್ಷ  ಕೆ.ಪಿ ಸುಚರಿತ ಶೆಟ್ಟಿ ಮಾತನಾಡಿ,ಸಹಕಾರಿ ಕ್ಷೇತ್ರಕ್ಕೆ ಧರ್ಮ ಜಾತಿ ಇಲ್ಲ ಎಲ್ಲರೂ ಒಂದೇ ಎನ್ನುವ ಭಾವನೆ ಆಗಿದೆ.ಕೃಷಿ ಮತ್ತು ಹೈನುಗಾರಿಕೆಗೆ ಜಗತ್ತಿನ ಹಸಿವನ್ನು ನೀಗಿಸುವ ಶಕ್ತಿ ಇದೆ ಎಂದು ಹೇಳಿದರು.ಸಶಕ್ತ ಸದೃಢ ಭಾರತ ನಿರ್ಮಾಣಕ್ಕೆ ಯುವಜನತೆ ಮುಂದಾಗಬೇಕಿದೆ ಎಂದರು.

ಕಿರಿಮಂಜೇಶ್ವರ ಗ್ರಾ.ಪಂ ಅಧ್ಯಕ್ಷ ಶೇಖರ ಖಾರ್ವಿ,ಕುಂದಾಪುರ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಕೆ.ಜೆ. ನಿಽಶ್ ಹೊಳ್ಳ,ರೂಪಾ ಜೆ. ಮಾಡ ಸಹಾಯಕ ಕೃಷಿ ನಿರ್ದೇಶಕರು ಕೃಷಿ ಇಲಾಖೆ ಕುಂದಾವುರ,ಡಾ. ಬಿ. ಧನಂಜಯ ಹಿರಿಯ ವಿಜ್ಞಾನಿಗಳು, ಮುಖ್ಯಸ್ಥರು ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ,ನಿರ್ದೇಶಕರಾದ ಬಿ.ರಘುರಾಮ ಶೆಟ್ಟಿ,ಕೆ.ಮೋಹನ ಪೂಜಾರಿ,ಬಿ.ಎಸ್.ಸುರೇಶ ಶೆಟ್ಟಿ,ಗುರುರಾಜ ಹೆಬ್ಬಾರ್,ವೀರೇಂದ್ರ ಶೆಟ್ಟಿ,ಮಂಜು ದೇವಾಡಿಗ,ನಾಗರಾಜ ಖಾರ್ವಿ,ಭರತ್ ದೇವಾಡಿಗ,ಹೂವ ನಾಯ್ಕ,ದಿನೀತಾ ಶೆಟ್ಟಿ,ಜಲಜಾಕ್ಷಿ ಪೂಜಾರಿ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಹಿರಿಯ ಪ್ರಗತಿಪರ ಕೃಷಿಕರಾದ ವೆಂಕಟ ಪೂಜಾರಿ ಉಬ್ಜೇರಿ ಯವರನ್ನು ಸಮ್ಮಾನಿಸಲಾಯಿತು ಹಾಗೂ ಅತೀ ಹೆಚ್ಚು ಹಾಲು ಮಾರಾಟ ಮಾಡಿದ ಹಾಲು ಉತ್ಪಾದಕರನ್ನು ಗೌರವಿಸಲಾಯಿತು.ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿಷ್ಣು ಆರ್. ಪೈ ಸ್ವಾಗತಿಸಿದರು.ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿದರು.ಉಪಾಧ್ಯಕ್ಷ ಈಶ್ವರ ಹಕ್ಷತೋಡ್ ವಂದಿಸಿದರು.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

3 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago