ಕುಂದಾಪುರ

ಕಂಬದಕೋಣೆ:ಆರ್.ಕೆ ಸಂಜೀವ ರಾವ್ ಮೆಮೋರಿಯಲ್ ಟ್ರೋಫಿ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಉದ್ಘಾಟನೆ

Share

ಕುಂದಾಪುರ:ಆರ್.ಕೆ ಸಂಜೀವ ರಾವ್ ಮೆಮೋರಿಯಲ್ ಟ್ರೋಫಿ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಬೈಂದೂರು ತಾಲೂಕಿನ ಕಂಬದಕೋಣೆಯಲ್ಲಿ ಅದ್ದೂರಿಯಾಗಿ ಶನಿವಾರ ನಡೆಯಿತು.

ರಾಷ್ಟ್ರ ಪ್ರಶಸ್ತಿ ವಿಜೇತರಾದ ನಿವೃತ್ತ ಶಿಕ್ಷಕ ಕರುಣಾಕರ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿ,ಊರಿನ ಒಳಿತಿನ ಬಗ್ಗೆ ಶ್ರಮಿಸಿದ ಆರ್.ಕೆ ಸಂಜೀವ ರಾವ್ ಅವರು ವ್ಯಕ್ತಿ ಅಲ್ಲಾ ಒಂದು ಶಕ್ತಿ ಕುಂದಾಪುರ ತಾಲೂಕಿನಾದ್ಯಂತ ವಿವಿಧ ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿಕೊಂಡು ಸಾಮಾಜಿಕ,ಧಾರ್ಮಿಕ,ರಾಜಕೀಯ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಅಪಾರವಾದ ಸೇವೆಯನ್ನು ಸಲ್ಲಿಸಿ ಎಲ್ಲರಿಂದಲೂ ಗೌರವಿಸಲ್ಪಡುವ ಆರ್.ಕೆ ಸಂಜೀವ ರಾವ್ ಅವರ ಜೀವನದ ಶೈಲಿ ಎಲ್ಲರಿಗೂ ಪ್ರೇರಣದಾಯಕ ವಾದುದು.ಆರ್.ಕೆ ಸಂಜೀವ ರಾವ್ ಅವರ ಸುಪುತ್ರರಾದ ಕೆ.ಎಸ್ ಪ್ರಮೋದ್ ರಾವ್ ಕೂಡ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸ್ಪಂದಿಸುವ ವ್ಯಕ್ತಿಯಾಗಿದ್ದಾರೆ ಇಂತಹ ಮಹಾನ್ ವ್ಯಕ್ತಿಗಳನ್ನು ಪಡೆದ ಕಂಬದಕೋಣೆ ಗ್ರಾಮ ಅದೃಷ್ಟವಂತವಾಗಿದೆ ಎಂದು ಹೇಳಿದರು.ಆರ್.ಕೆ ಸಂಜೀವ ರಾವ್ ಅವರ ಸವಿನೆನಪಿನಲ್ಲಿ ಇವೊಂದು ವಾಲಿಬಾಲ್ ಪಂದ್ಯಾಟವನ್ನು ಆಯೋಜನೆ ಮಾಡಿರುವುದು ಬಹಳಷ್ಟು ಸಂತೋಷದ ವಿಷಯವಾಗಿದೆ ಎಂದರು.

ನಂಚಾರು ಕಾಮಧೇನು ಗೋಶಾಲೆ ಮಹಾ ಪೋಷಕರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಕಂಬದಕೋಣೆ ಧರ್ಮದರ್ಶಿಗಳಾದ ಕೆ.ಎಸ್ ಪ್ರಮೋದ್ ರಾವ್ ಮಾತನಾಡಿ,ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಗಳನ್ನು ಮಾಡುತ್ತಾ ಯುವ ಜನತೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಇವೊಂದು ವಾಲಿಬಾಲ್ ಪಂದ್ಯಾಟಕ್ಕೆ ಸಂಪೂರ್ಣವಾದ ಸಹಕಾರವನ್ನು ನೀಡಲಾಗಿದೆ.ಗ್ರಾಮೀಣ ಪ್ರದೇಶದಲ್ಲಿ ಕ್ರೀಡಾ ಚಟುವಟಿಕೆಗಳಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ಯುವಕರನ್ನು ಸಂಘಟಿತರನ್ನಾಗಿ ಬಾಳುವಂತೆ ಮಾಡಲು ಸಹಕಾರಿ ಆಗುತ್ತದೆ.ಯುವ ಶಕ್ತಿಯಿಂದ ದೇಶ ಸುಭೀಕ್ಷೆಗೊಳ್ಳಲಿ ಎಂದು ಶುಭಹಾರೈಸಿದರು.

ಶ್ರೀಬೊಬ್ಬರ್ಯ ಫ್ರೆಂಡ್ಸ್ ಅಧ್ಯಕ್ಷ ಸುರೇಂದ್ರ ಪೂಜಾರಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ,ಕೆ.ಎಸ್ ಪ್ರಮೋದ್ ಅಣ್ಣನವರ ಸಹಕಾರದಿಂದ ಇವೊಂದು ವಾಲಿಬಾಲ್ ಪಂದ್ಯಾಟವನ್ನು ಅವರ ತಂದೆಯವರಾದ ಆರ್.ಕೆ ಸಂಜೀವ ರಾವ್ ಅವರ ಸ್ಮರಣಾರ್ಥವಾಗಿ ಆಯೋಜನೆ ಮಾಡಲಾಗಿದೆ.ಯುವಕರಿಗೆ ಉತ್ಸಾಹದ ಚಿಲುಮೆಯಾಗಿರುವ ಪ್ರಮೋದ ಅಣ್ಣನವರಿಗೆ ದೇವರು ಸದಾ ಒಳಿತನ್ನು ಮಾಡಲಿ ಎಂದು ಪ್ರಾರ್ಥಿಸಿದರು.

ಕಂಬದಕೋಣೆ ಗ್ರಾಮ ಪಂಚಾಯತ್ ಸದಸ್ಯ ರಾಜೇಶ್ ದೇವಾಡಿಗ ಮಾತನಾಡಿ,ಆರ್.ಕೆ ಸಂಜೀವ ರಾವ್ ಮೆಮೋರಿಯಲ್ ಟ್ರೋಫಿ ಅದ್ದೂರಿಯಾಗಿ ನಡೆದಿದೆ.ಮುಂದಿನ ದಿನಗಳಲ್ಲಿಯೂ ಇಂತಹ ಕಾರ್ಯಕ್ರಮಗಳು ನಮ್ಮ ಗ್ರಾಮದಲ್ಲಿ ನಡೆಯುವಂತೆ ಆಗಲಿ ಎಂದು ಹೇಳಿದರು.

ಉದ್ಯಮಿ ಜಯಶೀಲ ಶೆಟ್ಟಿ ಮಾತನಾಡಿ,ಗ್ರಾಮೀಣ ಪ್ರದೇಶದಲ್ಲಿ ಇವೊಂದು ಪಂದ್ಯಾಟ ಆಯೋಜನೆ ಮಾಡುವುದರಿಂದ ಯುವ ಕ್ರೀಡಾಭಿಮಾನಿಗಳಿಗೆ ಬಹಳಷ್ಟು ಉತ್ತೇಜನ ನೀಡಿದೆ.ನಿರಂತರ ಸಾಗಲಿ ಎಂದು ಶುಭಹಾರೈಸಿದರು.

ಈ ಸಂದರ್ಭ ಕಂಬದಕೋಣೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗಮ್ಮ ದೇವಾಡಿಗ,ಕರುಣಾಕರ ದೇವಾಡಿಗ,ಮಾಜಿ ಪಂಚಾಯತ್ ಸದಸ್ಯ ಗುರುರಾಜ ಹೆಬ್ಬಾರ್,ಉದ್ಯಮಿಗಳಾದ ಜಯಪ್ರಕಾಶ ಶೆಟ್ಟಿ,ಸುದರ್ಶನ ಶೆಟ್ಟಿ,ಶ್ರೀನಿವಾಸ ಶೆಟ್ಟಿ,ಶ್ರೀಬೊಬ್ಬರ್ಯ ಫ್ರೆಂಡ್ಸ್ ಸದಸ್ಯರು ಉಪಸ್ಥಿತರಿದ್ದರು.ಆರ್.ಕೆ ಸಂಜೀವ ರಾವ್ ಮೆಮೋರಿಯಲ್ ಟ್ರೋಫಿ ಅಂಗವಾಗಿ ರಾಷ್ಟ್ರಪ್ರಶಸ್ತಿ ಪುರಸ್ಕೃತರಾದ ನಿವೃತ್ತ ಶಿಕ್ಷಕ ಕರುಣಾಕರ ಶೆಟ್ಟಿ ಮತ್ತು ಸುರೇಂದ್ರ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.ಪ್ರಶಾಂತ ಪೂಜಾರಿ ನಿರೂಪಿಸಿದರು.ರಾಘವೇಂದ್ರ ದೇವಾಡಿಗ ವಂದಿಸಿದರು.ಬೈಂದೂರು,ಕುಂದಾಪುರ ಮತ್ತು ಭಟ್ಕಳ ತಾಲೂಕಿನಿಂದ 20 ವಾಲಿಬಾಲ್ ತಂಡ ಭಾಗವಹಿದ್ದವು.ಸ್ಥಳೀಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 weeks ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 weeks ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 month ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

1 month ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

2 months ago