ಕುಂದಾಪುರ

ಕೆ.ಎಸ್ ಪ್ರಮೋದ್ ರಾವ್ ಜನ್ಮ ದಿನಾಚರಣೆ,ಶ್ರೀಮಹಾಲಿಂಗೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಕೆ

Share

ಕುಂದಾಪುರ:ನಂಚಾರು ಕಾಮಧೇನು ಗೋಶಾಲೆ ಮಹಾ ಪೋಷಕರು,ಸಂದೀಪನ್ ಆಂಗ್ಲ ಮಾಧ್ಯಮ ಶಾಲೆ ನಾಗೂರು ಸಂಸ್ಥಾಪಕರಲ್ಲಿ ಒಬ್ಬರಾದ,ಆರ್.ಕೆ ಸಂಜೀವ ರಾವ್ ಸ್ಮಾರಕ ದತ್ತಿ ಹಾಗೂ ಕಂಬದಕೋಣೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿಗಳಾದ ಕೆ.ಎಸ್.ಪ್ರಮೋದ್ ರಾವ್ (ಪ್ರಮೋದ್ ಅಣ್ಣ) ಅವರ ಜನ್ಮದಿನಾಚರಣೆ ಅಂಗವಾಗಿ ಅವರ ಅಭಿಮಾನಿ ಬಳಗದವರಿಂದ ಕಂಬದಕೋಣೆ ಶ್ರೀಮಹಾಲಿಂಗೇಶ್ವರ ದೇವರಿಗೆ ರುದ್ರಾಭಿಷೇಕ ಹಾಗೂ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.ಹಾಗೂ ಬೈಂದೂರು ತಾಲೂಕಿನ ಕಂಬದಕೋಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿಯನ್ನು ವಿತರಿಸಲಾಯಿತು.

ಕಂಬದಕೋಣೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕರಾದ ಮಹಾಬಲೇಶ್ವರ ಭಟ್ ಅವರು ಮಾತನಾಡಿ,
ಆರ್.ಕೆ ಸಂಜೀವ ರಾವ್ ಅವರ ಸುಪುತ್ರರಾದ ಕೆ.ಎಸ್ ಪ್ರಮೋದ್ ರಾವ್ ಅವರ ಜನ್ಮದಿನಾಚರಣೆ ಅಂಗವಾಗಿ ಶ್ರೀ ಮಹಾಲಿಂಗೇಶ್ವರ ದೇವರಿಗೆ ರುದ್ರಾಭಿಷೇಕ ಹಾಗೂ ವಿಶೇಷ ಪೂಜೆಯನ್ನು ನೆರವೇರಿಸಲಾಗಿದೆ.
ಸುಮಾರು 200 ವರ್ಷಕ್ಕೂ ಹೆಚ್ಚಿನ ಕಾಲದ ಇತಿಹಾಸವನ್ನು ಹೊಂದಿರುವ ಈ ದೇವಾಲಯವನ್ನು ಕೆ.ಎಸ್ ಪ್ರಮೋದ್ ರಾವ್ ಅವರು ಜೀರ್ಣೋದ್ಧಾರ ಮಾಡಿ ಸುಂದರವಾದ ಶಿಲಾಮಯ ದೇವಾಲಯವನ್ನು ನಿರ್ಮಿಸಿದ್ದಾರೆ, ಸಾಮಾಜಿಕ,ಧಾರ್ಮಿಕ ಶೈಕ್ಷಣಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಅವರಿಗೆ ಶ್ರೀ ಪರಮಾತ್ಮನನ್ನು ಆರೋಗ್ಯ,ಸುಖ ಸಂಪತ್ತು ನೀಡಿ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.

ಉದ್ಯಮಿಗಳಾದ ನಾಗರಾಜ ಶೆಟ್ಟಿ ನಾರ್ಕಳಿ ಗುಡಿಮನೆ ಅವರು ಮಾತನಾಡಿ,ಬಡವರ ಬಗ್ಗೆ ವಿಶೇಷವಾದ ಕಾಳಜಿ ಮತ್ತು ಊರಿನ ಬಗ್ಗೆ ಅಭಿಮಾನವನ್ನು ಹೊಂದಿರುವ ಪ್ರಮೋದ್ ಅಣ್ಣನವರು ಸಾಮಾಜಿಕ ಧಾರ್ಮಿಕ ಕ್ಷೇತ್ರಗಳಲ್ಲಿ ಯಾವುದೇ ರೀತಿಯ ಫಲಾಪೇಕ್ಷೆ ಇಲ್ಲದೆ ತಮ್ಮದೇ ರೀತಿಯಲ್ಲಿ ಕೆಲಸವನ್ನು ಮಾಡುತ್ತಿದ್ದಾರೆ.ಇಂತಹ ಮಹಾನ್ ವ್ಯಕ್ತಿಯ ಜನ್ಮದಿನಾಚರಣೆ ಮಾಡುತ್ತಿರುವುದೇ ನಮಗೆಲ್ಲ ಹೆಮ್ಮೆಯ ವಿಷಯವಾಗಿದೆ ತಂದೆಯ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಪ್ರಮೋದ್ ಅಣ್ಣನವರಿಗೆ ಆದಿ ಪರಾಶಕ್ತಿ ಮೂಕಾಂಬಿಕೆ ದೇವಿ ಹಾಗೂ ಶ್ರೀ ಬ್ರಹ್ಮಲಿಂಗೇಶ್ವರ ದೇವರು ಆಯುಷ್ಯ ಆರೋಗ್ಯ ಕೊಟ್ಟು ಕಾಪಾಡಲಿ ಎಂದು ಹಾರೈಸಿದರು.

ಶ್ರೀ ಬೊಬ್ಬರ್ಯ ಪ್ರೆಂಡ್ಸ್ ಕಂಬದಕೋಣೆ ಅಧ್ಯಕ್ಷರಾದ ಸುರೇಂದ್ರ ಪೂಜಾರಿ ಮಾತನಾಡಿ,ಪ್ರಮೋದ್ ಅಣ್ಣನವರ ಅಭಿಮಾನಿ ಬಳಗದವರಿಂದ ಇಂದು ಅವರ ಹುಟ್ಟು ಹಬ್ಬದ ಪ್ರಯುಕ್ತ ಅವರ ಶ್ರೇಯೋಭಿವೃದ್ಧಿಗಾಗಿ ಶ್ರೀ ಮಹಾಲಿಂಗೇಶ್ವರ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಗಿದೆ.ಅವರಿಂದ ಇನ್ನಷ್ಟು ಸಾಮಾಜಿಕ ಕಾರ್ಯಗಳು ನೆರವೇರಲಿ ಎಂದರು.

ಕದಂಬ ಯುವಕ ಮಂಡಲದ ಗೌರವಾಧ್ಯಕ್ಷ ಸಂತೋಷ್ ಪೂಜಾರಿ ಮಾತನಾಡಿ,ಆರ್.ಕೆ ಸಂಜೀವ ರಾವ್ ಅವರ ಗತಕಾಲದ ವೈಭವವನ್ನು ಮರುಕಳಿಸುವಲ್ಲಿ ಅವರ ಮಗನಾದ ಪ್ರಮೋದ್ ಅಣ್ಣನವರ ಸಾಮಾಜಿಕ ಕಾರ್ಯವೈಖರಿ ಬಗ್ಗೆ ವಿವರಿಸಿದರು.ಈ ಸಂದರ್ಭ ಕಂಬದಕೋಣೆ ಗ್ರಾಮ ಪಂಚಾಯತ್ ಸದಸ್ಯ ರಾಜೇಶ್ ದೇವಾಡಿಗ, ರಾಘವೇಂದ್ರ ದೇವಾಡಿಗ, ಮಂಜುನಾಥ ಪೂಜಾರಿ ಹಾಡಿಮನೆ,ಪ್ರತೀಶ್ ಪೂಜಾರಿ, ಮೋಹನ್ ದೇವಾಡಿಗ, ಶ್ರೀನಿವಾಸ ಶೆಟ್ಟಿ,ಸಂತೋಷ್ ಪೂಜಾರಿ, ಅಜಿತ್ ಭಂಡಾರಿ, ಗ್ರಾಮಸ್ಥರು ಉಪಸ್ಥಿತರಿದ್ದರು.

ಕೆ.ಎಸ್ ಪ್ರಮೋದ್ ರಾವ್ ಅವರ ಹುಟ್ಟು ಹಬ್ಬದ ಪ್ರಯುಕ್ತ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

3 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago