ಕುಂದಾಪುರ

ಸರಕಾರಿ ಕಿರಿಯ ಪ್ರಾಥಮಿಕ ಹೊಸಬಾಳು ಶಾಲೆಯಲ್ಲಿ ರಜತ ಮಹೋತ್ಸವ ಕಾರ್ಯಕ್ರಮ ಸಂಭ್ರಮಾಚರಣೆ

Share

ಕುಂದಾಪುರ:ಬೈಂದೂರು ತಾಲೂಕಿನ ಹಳ್ಳಿಹೊಳೆ ಗ್ರಾಮದ ಹೊಸಬಾಳು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ರಜತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಬೆಳ್ಳಿ ಬೆಳಕು, ಸಾಂಸ್ಕøತಿಕ ಸೌರಭ ಕಾರ್ಯಕ್ರಮ ಅದ್ಧೂರಿಯಾಗಿ ಬುಧವಾರ ನಡೆಯಿತು.

ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನ ಕಮಲಶಿಲೆ ಅನುವಂಶಿಕ ಮೊಕ್ತೇಸರರಾದ ಎಸ್.ಸಚ್ಚಿದಾನಂದ ಚಾತ್ರ ಅವರು ಬೆಳ್ಳಿ ಬೆಳಕು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ದಾನ,ಧರ್ಮ ಮಾಡಿಕೊಂಡು ಉಪಕಾರ ಮನೋಭಾವದಿಂದ ಬಾಳ್ವೆ ಮಾಡಿದಾಗ ಮಾತ್ರ ನಮ್ಮ ಹೆಸರು ಸಮಾಜದಲ್ಲಿ ಶಾಶ್ವತವಾಗಿ ಉಳಿಯುತ್ತದೆ ಎಂದು ಹೇಳಿದರು.ಶಾಲೆಯ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಕೈಲಾದಷ್ಟು ಸಹಾಯ ಮಾಡಲಾಗುವುದು ಎಂದರು.

ಹೊಸಬಾಳು ಶಾಲೆಯ ಮುಖ್ಯೋಪಾಧ್ಯಾಯರಾದ ರಾಘವೇಂದ್ರ.ಡಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ತೆಂಗಿನ ಗರಿ ಮಾಡಿನೊಂದಿಗೆ ಆರಂಭಗೊಂಡ ನಮ್ಮ ಈ ಶಾಲೆ  ಇಂದು ರಜತ ಮಹೋತ್ಸವ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿದೆ.ಈ ಭಾಗದ ಪುಟ್ಟ ಮಕ್ಕಳಿಗೆ ಅನುಕೂಲವಾಗುವ ದೃಷ್ಟಿಯಿಂದ ಅಂಗನವಾಡಿ ಕೇಂದ್ರವನ್ನು ತೆರೆಯಲಾಗಿದ್ದು, ಶಾಲೆಗೆ ಕೊಠಡಿಗಳ ಕೊರತೆ ಸಹಿತ ಶಾಲಾ ಆವರಣ ಗೋಡೆ, ಬಾಲಭವನ ನಿರ್ಮಾಣ ಹಾಗೂ ಶಾಲೆಗೊಂದು ಪ್ರಾಜೆಕ್ಟರ್ ಅವಶ್ಯಕತೆ ಇದೆ ಎಂದು ಹೇಳಿದರು.ಶಾಲಾಭಿವೃದ್ದಿಗೆ ದಾನಿಗಳು ಗ್ರಾಮಸ್ಥರು ಸಹಕರಿಸಬೇಕೆಂದರು.

ಹಳ್ಳಿಹೊಳೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪ್ರದೀಪ್ ಕೊಠಾರಿ ಮಾತನಾಡಿ, ಸರಕಾರಿ ಜಾಗ ಆಗಿದ್ದರು ಕೂಡ ಅರಣ್ಯ ಇಲಾಖೆ ತಕರಾರಿ ನಿಂದ ಇನ್ನೂ ಕೂಡ ಶಾಲೆ ಹೆಸರಿಗೆ ಜಾಗ ರೆಕಾರ್ಡ್ ಆಗಿಲ್ಲ,ಎಲ್ಲಾ ರೀತಿಯ ಸಮಸ್ಯೆಗಳನ್ನು ಬಗೆಹರಿಸಿ ಶಾಲೆಯ ಹೆಸರಿಗೆ ಜಾಗ ರೆಕಾರ್ಡ್ ಆಗುವಂತೆ ಶಾಸಕರು ಗಮನ ಹರಿಸಬೇಕು ಎಂದರು.

ಹೊಸಬಾಳು ಶಾಲೆಯ ರಜತ ಮಹೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಹಳ್ಳಿಹೊಳೆ ಗ್ರಾಮ ಪಂಚಾಯತ್ ಅಧ್ಯಕ್ಷ ಮಂಜುನಾಥ ಶೆಟ್ಟಿ ಮಾತನಾಡಿ, ಮಕ್ಕಳ ಮಾನಸಿಕ ಮತ್ತು ಬೌದ್ಧಿಕ ಚಟುವಟಿಕೆ ಹೆಚ್ಚಿಸಲು ಆಟೋಟ ಮತ್ತು ಮನೋರಂಜನಾ ಕಾರ್ಯಕ್ರಮಗಳು ಬಹಳಷ್ಟು ಸಹಕಾರಿ ಆಗುತ್ತದೆ.ಪಂಚಾಯತ್, ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ನಿಂದ ಸುಮಾರು 12 ಲಕ್ಷ.ರೂ ವೆಚ್ಚದಲ್ಲಿ ಶಾಲೆಯ ಅಭಿವೃದ್ಧಿಯನ್ನು ಮಾಡಲಾಗಿದೆ.ಬಾಕಿ ಉಳಿದ ಅಭಿವೃದ್ಧಿ ಕಾರ್ಯಗಳಿಗೆ ದಾನಿಗಳು ಗ್ರಾಮಸ್ಥರು ಸಹಕರಿಸಬೇಕೆಂದರು.

ಹೊಸಬಾಳು ಶಾಲೆಯ ಎಸ್.ಡಿ ಎಂ.ಸಿ ಅಧ್ಯಕ್ಷ ಶೇಖರ ಕಟ್ಟಿನಾಡಿ, ಕೊಲ್ಲೂರು ದೇವಳದ ವ್ಯವಸ್ಥಾಪನಾ ಮಂಡಳಿ ಸದಸ್ಯ ಜಯಾನಂದ ಹೋಬಳಿದಾರ್,ಮಾನಂಜೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಬಾಲಚಂದ್ರ ಭಟ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೈಂದೂರು ವಲಯ ಅಧ್ಯಕ್ಷ ಶೇಖರ ಪೂಜಾರಿ, ನಿವೃತ್ತ ಶಿಕ್ಷಕ ಹಳ್ಳಿಹೊಳೆ ಚಕ್ರೇಶ್ ಯಡಿಯಾಳ,ಮಾನಂಜೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಶಂಕರನಾರಾಯಣ ಯಡಿಯಾಳ,ಉಪ ವಲಯ ಅರಣ್ಯಾಧಿಕಾರಿ ಸಿದ್ಧಾಪುರ ವನ್ಯಜೀವಿ ವಿಭಾಗ ನಿಂಗಪ್ಪ ವಾಲಿ, ನಾರಾಯಣ ಪೂಜಾರಿ ಹಳ್ಳಿಬೈಲು,ಶಂಕರ ಕುಲಾಲ ಹಳ್ಳಿಬೈಲು, ನಾರಾಯಣ ಚಾತ್ರ ಹಳ್ಳಿಬೈಲು,ಸೋಮ ಪೂಜಾರಿ,ತಿಮ್ಮ ಕಟ್ಟಿನಾಡಿ, ರಂಗ ಕಬ್ಬಿನಾಲೆ,ಶಿವರಾಮ ಪೂಜಾರಿ ಹಳ್ಳಿಬೈಲು, ಕ್ಷೇತ್ರ ಸಮನ್ವಯಾಧಿಕಾರಿ ಬೈಂದೂರು ಮಂಜುನಾಥ್ ನಾಯ್ಕ್, ಶಿಕ್ಷಣ ಸಂಯೋಜಕ ಸತ್ಯನಾರಾಯಣ ಕೊಡೇರಿ,ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷ ಶಿವರಾಮ ಕುಲಾಲ್, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ದಿನಕರ ಶೆಟ್ಟಿ ಅಂಪಾರು ಉಪಸ್ಥಿತರಿದ್ದರು.

ಎಸ್ಡಿಎಂಸಿ ಅಧ್ಯಕ್ಷ ಶೇಖರ ಕಟ್ಟಿನಾಡಿ ವಂದಿಸಿದರು.ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು, ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರನ್ನು, ಬಿಸಿಯೂಟ ಸಹಾಯಕರನ್ನು ಗೌರವಿಸಲಾಯಿತು.ನಾನಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.ಹಳ್ಳಿಹೊಳೆ ಗ್ರಾಮ ಪಂಚಾಯತ್ ಅಧ್ಯಕ್ಷ ಮಂಜುನಾಥ ಶೆಟ್ಟಿ ಧ್ವಜಾರೋಹಣ ನೆರವೇರಿಸಿದ್ದರು.

Advertisement

Share
Team Kundapur Times

Recent Posts

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 hour ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

1 week ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago