ಕುಂದಾಪುರ

ಹೈನುಗಾರಿಕೆಯಲ್ಲಿ ವಿಶಿಷ್ಟ ಸಾಧನೆ ಮಾಡುತ್ತಿರುವ ಯಶಸ್ವಿ ಕೃಷಿಕ ಸಾಬ್ಲಾಡಿ ಮಂಜಯ್ಯ ಶೆಟ್ಟಿ

Share

ಕುಂದಾಪುರ:ತಾಲೂಕಿನ ಮೂಲತಃ ಹಟ್ಟಿಯಂಗಡಿ ಗ್ರಾಮದ ಸಾಬ್ಲಾಡಿ ನಿವಾಸಿ ಪ್ರಸ್ತುತ ಹುಣ್ಸೆಮಕ್ಕಿಯಲ್ಲಿ ವಾಸಮಾಡುತ್ತಿರುವ ಸಬ್ಲಾಡಿ ಮಂಜಯ್ಯ ಶೆಟ್ಟಿ ಅವರು ಉದ್ಯಮದ ಜತೆಗೆ ಹೈನುಗಾರಿಕೆಯಲ್ಲಿ ತೊಡಗಿ ಸುಮಾರು 60 ಕ್ಕೂ ಹೆಚ್ಚಿನ ಹಸುಗಳನ್ನು ಸಾಕಿ ಕೊಂಡು ದಿನವೊಂದಕ್ಕೆ ಅಂದಾಜು 300 ಲೀಟರ್ ಹಾಲು ಉತ್ಪಾದನೆಯನ್ನು ಮಾಡುತ್ತಿದ್ದಾರೆ.
ಹೈನುಗಾರಿಕೆಯಲ್ಲಿ ತೊಡಗಿ ಕೊಂಡು ಹಸುಗಳ ಜೊತೆ ನೆಮ್ಮದಿ ಜೀವನವನ್ನು ಸಾಗಿಸುತ್ತಿರುವ ಸಬ್ಲಾಡಿ ಮಂಜಯ್ಯ ಶೆಟ್ಟಿ ಅವರಿಗೆ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳು ಒಲಿದು ಬಂದಿದೆ.ಅವರ ಧರ್ಮ ಪತ್ನಿ ವಸಂತಿ ಶೆಡ್ತಿ ಹಾಗೂ ಮಗಳಾದ ದೀಪ್ತಿ ಎನ್ ಹೆಗ್ಡೆ,ಅಳಿಯ ಸುರೇಂದ್ರ ಹೆಗ್ಡೆ ಮತ್ತು ಮೊಮ್ಮಕ್ಕಳಾದ ಅನಿಕಾ ಮತ್ತು ನದಿ ಜೊತೆಗೆ ಖುಷಿಯ ಸಂಸಾರವನ್ನು ನಡೆಸುತ್ತಿದ್ದಾರೆ.

ಜರ್ಸಿ,ಎಚ್.ಎಫ್ ಸೇರಿದಂತೆ ಗಿರ್ ತಳಿಯ ಜಾನುವಾರುಗಳನ್ನು ಸಾಕುತ್ತಿರುವ ಮಂಜಯ್ಯ ಶೆಟ್ಟಿ ಅವರು ಹಸು ಗಳಿಗೆಂದೆ ಎರಡು ಎಕರೆ ಪ್ರದೇಶದಲ್ಲಿ ಹಸಿ ಹುಲ್ಲನ್ನು ಬೆಳೆಸುತ್ತಿದ್ದಾರೆ, ಫೀಡ್ ಗಿಂತ ಹಸಿ ಹುಲ್ಲು ದನಕರುಗಳಿಗೆ ಆರೋಗ್ಯ ದಾಯಕವಾದದು ಎನ್ನುವುದು ಮಂಜಯ್ಯ ಶೆಟ್ಟಿ ಅವರ ಅಭಿಪ್ರಾಯ.

ದ್ವಿತೀಯ ಪಿಯುಸಿ ವಿದ್ಯಾಭ್ಯಾಸವನ್ನು ಮಾಡಿರುವ ಸಬ್ಲಾಡಿ ಮಂಜಯ್ಯ ಶೆಟ್ಟಿ ಅವರು 1982ರಲ್ಲೇ ಕೃಷಿ ಮತ್ತು ತೋಟಗಾರಿಕೆ ಹಾಗೂ ಹೈನುಗಾರಿಕೆಗೆ ಯಲ್ಲಿ ತೊಡಗಿಕೊಂಡಿದ್ದಾರೆ.
ಸಂಚಾರದ ವ್ಯವಸ್ಥೆ ಇಲ್ಲದ ಕೆರಾಡಿ ಎನ್ನುವ ಕೂಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿದ ಕೀರ್ತಿ ಸಬ್ಲಾಡಿ ಮಂಜಯ್ಯ ಶೆಟ್ಟಿ ಅವರಿಗೆ ಸಲ್ಲುತ್ತದೆ.

ಬಸ್ ಮತ್ತು ಗೇರು ಉದ್ಯಮವನ್ನು ನಡೆಸುತ್ತಿದ್ದರು ಅವರ ಆಸಕ್ತಿ ಮಾತ್ರ ಹೈನುಗಾರಿಕೆಯತ್ತಾ ಸೆಳೆದಿದೆ.
7000 ಅಡಿಕೆ ಗಿಡ,1500 ತೆಂಗು,ಬಾಳೆ,ಕಾಳು ಮೆಣಸು ಮತ್ತು ಭತ್ತವನ್ನು ಕೂಡ ಬೆಳೆಯುತ್ತಾರೆ.

ಧಾರ್ಮಿಕ ಹಾಗೂ ಶೈಕ್ಷಣಿಕ ಸಾಮಾಜಿಕ ಕ್ಷೇತ್ರದಲ್ಲಿ ತನ್ನದೇ ರೀತಿಯಲ್ಲಿ ಕೆಲಸವನ್ನು ಮಾಡಿಕೊಂಡು ಬರುತ್ತಿದ್ದ ಅವರು
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಟ್ರಸ್ಟಿಯಾಗಿಯೂ,ಪ್ರಸ್ತುತ ಸೌಕೂರು ದೇವಸ್ಥಾನದ ಮ್ಯಾನೆಂಜಿಗ್ ಟ್ರಸ್ಟಿ ಆಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.ಹುಣ್ಸೆಮಕ್ಕಿ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.ವಂಡ್ಸೆ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿಯೂ.ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಅಧ್ಯಕ್ಷರಾಗಿ ಹಾಗೂ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.

ಕೃಷಿಯಲ್ಲಿ ಇನ್ನಷ್ಟು ಸಾಧನೆ ಮಾಡಲಿ ಎಂಬ ಆಶಯ ನಮ್ಮದಾಗಿದೆ.

Advertisement

Share
Team Kundapur Times

Recent Posts

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

7 hours ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

1 week ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago