ಕುಂದಾಪುರ

ಯೋಗಾ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದ ಅಂತಾರಾಷ್ಟ್ರೀಯ ಯೋಗ ಪಟು ತನ್ವಿತಾ ಪೂಜಾರಿ

Share

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕುಂದಬಾರಂದಾಡಿ ಗ್ರಾಮದ ನಿವಾಸಿ ಪುಷ್ಪಲತಾ ಮತ್ತು ವಸಂತ ಅವರ ದಂಪತಿಗಳ ಪುತ್ರಿ ಬಾಲ ಪ್ರತಿಭೆ ಕು.ತನ್ವಿತಾ ಪೂಜಾರಿ ಯೋಗಾಸನದಲ್ಲಿ ಚಿನ್ನ,ಬೆಳ್ಳಿ,ಕಂಚು ಸೇರಿದಂತೆ ಒಟ್ಟು 65 ಕ್ಕೂ ಅಧಿಕ ಪ್ರಶಸ್ತಿಗಳನ್ನು ಜಯಿಸುವುದದರ ಮೂಲಕ ಯೋಗಾಸನದಲ್ಲಿ ವಿಶಿಷ್ಟವಾದ ಸಾಧನೆ ಮಾಡುತ್ತಿದ್ದಾರೆ.

ನಟ ದರ್ಶನ ಜತೆ ಕ್ರಾಂತಿ ಸಿನಿಮಾದಲ್ಲಿ ನಟನೆ ಮಾಡುವುದರ ಮುಖೇನ ಚಿತ್ರರಂಗದಲ್ಲಿಯೂ ಗುರುತಿಸಿ ಕೊಂಡಿದ್ದಾರೆ.ರಿಯಾಲಿಟಿ ಶೋ,ಭರತ ನಾಟ್ಯ,ಜಾಹೀರಾತು ವಿಭಾಗದಲ್ಲಿಯೂ ವಿಶೇಷ ರೀತಿಯ ಚಾಪನ್ನು ಮೂಡಿಸಿದ್ದಾರೆ.10 ನೇ ವಯಸ್ಸಿನಲ್ಲಿ ಯೋಗಾಭ್ಯಾಸದಲ್ಲಿ ಗುರುತಿಸಿಕೊಂಡಿರುವ ಬಹುಮುಖ ಪ್ರತಿಭೆಯನ್ನು ಹೊಂದಿರುವ ಕು.ತನ್ವಿತಾ ಅವರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ರಾಜ್ಯ ಕಲಾಶ್ರೀ ಪ್ರಶಸ್ತಿ,ಅಬ್ದು ಕಲಾಂ ರಾಷ್ಟ್ರ ಸದ್ಭಾವನಾ ಪ್ರಶಸ್ತಿ,ಯೋಗರತ್ನ ಪ್ರಶಸ್ತಿ,ಬಾಲ ಪುರಸ್ಕಾರ ಪ್ರಶಸ್ತಿ ಸೇರಿದಂತೆ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳು ಒಲಿದು ಬಂದಿದೆ.

ಜಿಲ್ಲಾ,ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸರುವ ಕು.ತನ್ವಿತಾ 150ಕ್ಕೂ ಹೆಚ್ಚಿನ ವೇದಿಕೆಯಲ್ಲಿ ಯೋಗ ಪ್ರದರ್ಶನ ನೀಡಿರುತ್ತಾರೆ.2018-19 ನೇ ಸಾಲಿನ ಅತ್ಯುತ್ತಮ ವಿದ್ಯಾರ್ಥಿನಿ ವಾರ್ಷಿಕ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.ಯೋಗ ಸ್ಪರ್ಧೆಯಲ್ಲಿ ರಾಜ್ಯ,ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಸ್ಪರ್ಧೆಯಲ್ಲಿಯೂ ಭಾವಹಿಸಿದ್ದಾರೆ.

ಕೊಲ್ಲೂರು ದೇವಳದ ವ್ಯವಸ್ಥಾಪನ ಸಮಿತಿ ಸದಸ್ಯ ಗೋಪಾಲಕೃಷ್ಣ ನಾಡ ಮಾತನಾಡಿ,ಕುಂದಾಪುರ ತಾಲೂಕಿನ ಪುಟ್ಟ ಗ್ರಾಮವಾದ ಕುಂದಬಾರಂದಾಡಿ ನಿವಾಸಿ ಅಂತರಾಷ್ಟ್ರೀಯ ಯೋಗಪಟು ಕು.ತನ್ವಿತಾ ಅವರು ಬಹುಮುಖ ಪ್ರತಿಭೆ ಯೋಗ ಸೇರಿದಂತೆ ಎಲ್ಲಾ ವಿಭಾಗದಲ್ಲಿಯೂ ಹೆಸರನ್ನು ಮಾಡಿರುವ ಬಾಲಪ್ರತಿಭೆಯನ್ನು ಗುರುತಿಸುವ ಕೆಲಸ ಜಿಲ್ಲಾಡಳಿತ ಮತ್ತು ಸಂಘ ಸಂಸ್ಥೆಗಳು ಮಾಡಬೇಕು.ಯೋಗಾಸನದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಖ್ಯಾತಿ ಗಳಿಸಲಿ ಎಂದು ಶುಭಹಾರೈಸಿದರು.

ಯೋಗಪಟು ತನ್ವಿತಾ ಅವರ ತಂದೆ ವಸಂತ ಪೂಜಾರಿ ಅವರು ಮಾತನಾಡಿ,ಬಾಲ್ಯದಲ್ಲೇ ಯೋಗದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದರಿಂದ ಅವಳ ನೆಚ್ಚಿನ ಕ್ಷೇತ್ರಕ್ಕೆ ಬೆಂಬಲವನ್ನು ನೀಡಿ ಪ್ರೋತ್ಸಾಹಿಸಲಾಗಿದೆ.5ನೇ ತರಗತಿ ಯಿಂದಲೇ ಯೋಗಾದಲ್ಲಿ ತೊಡಗಿರುವ ತನ್ವಿತಾ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿಯೂ ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಗೆದ್ದು ಕೊಂಡಿದ್ದಾಳೆ.ಯೋಗ ಮಾತ್ರವಲ್ಲದೆ ನೃತ್ಯ,ಯಕ್ಷಗಾನದಲ್ಲಿಯೂ ನಟನೆ ಮಾಡುವುದರ ಮೂಲಕ ತನ್ನ ಪ್ರತಿಭೆಯನ್ನು ಹೊರ ಜಗತ್ತಿಗೆ ತೊರ್ಪಡಿಸಿದ್ದಾಳೆ.ಅವಳ ಸಾಧನೆಗೆ ಸಂಘ ಸಂಸ್ಥೆಗಳು,ಸಮಾಜ ಬಾಂಧವರು ಬೆಂಬಲ ನೀಡಬೇಕು ಎಂದರು.

ಅಂತಾರಾಷ್ಟ್ರೀಯ ಯೋಗಪಟು ಕು.ತನ್ವಿತಾ ಮಾತನಾಡಿ,ಈಗಾಗಲೇ ಹಲವಾರು ಯೋಗಾಸನ ಸ್ಪರ್ಧೆಗಳಲ್ಲಿ ಭಾಗವಹಿಸಿ ತಾಲೂಕು,ಜಿಲ್ಲಾ,ರಾಜ್ಯ,ರಾಷ್ಟ್ರ ಹಾಗೂ ಅಂತರಾಷ್ಟ್ರಿಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಗೆದ್ದಿದಿನಿ.ರಾಜ್ಯ ಸರಕಾರದಿಂದ ಕಲಾಶ್ರೀ ಪ್ರಶಸ್ತಿ ಕೂಡ ದೊರೆತ್ತಿದೆ.ಯೋಗಾ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡಿ,ಆಸಕ್ತರಿಗೆ ಯೋಗಾವನ್ನು ಹೇಳಿ ಕೊಡಬೇಕು ಎನ್ನುವ ಆಸೆ ಇದೆ.ಐಎಎಸ್ ಓದಿ ಜನರ ಸೇವೆ ಮಾಡಬೇಕು ಎಂದು ಹೇಳಿದರು.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

3 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago