ಕುಂದಾಪುರ

ಯೋಗಾ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದ ಅಂತಾರಾಷ್ಟ್ರೀಯ ಯೋಗ ಪಟು ತನ್ವಿತಾ ಪೂಜಾರಿ

Share

Advertisement
Advertisement
Advertisement

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕುಂದಬಾರಂದಾಡಿ ಗ್ರಾಮದ ನಿವಾಸಿ ಪುಷ್ಪಲತಾ ಮತ್ತು ವಸಂತ ಅವರ ದಂಪತಿಗಳ ಪುತ್ರಿ ಬಾಲ ಪ್ರತಿಭೆ ಕು.ತನ್ವಿತಾ ಪೂಜಾರಿ ಯೋಗಾಸನದಲ್ಲಿ ಚಿನ್ನ,ಬೆಳ್ಳಿ,ಕಂಚು ಸೇರಿದಂತೆ ಒಟ್ಟು 65 ಕ್ಕೂ ಅಧಿಕ ಪ್ರಶಸ್ತಿಗಳನ್ನು ಜಯಿಸುವುದದರ ಮೂಲಕ ಯೋಗಾಸನದಲ್ಲಿ ವಿಶಿಷ್ಟವಾದ ಸಾಧನೆ ಮಾಡುತ್ತಿದ್ದಾರೆ.

Advertisement

ನಟ ದರ್ಶನ ಜತೆ ಕ್ರಾಂತಿ ಸಿನಿಮಾದಲ್ಲಿ ನಟನೆ ಮಾಡುವುದರ ಮುಖೇನ ಚಿತ್ರರಂಗದಲ್ಲಿಯೂ ಗುರುತಿಸಿ ಕೊಂಡಿದ್ದಾರೆ.ರಿಯಾಲಿಟಿ ಶೋ,ಭರತ ನಾಟ್ಯ,ಜಾಹೀರಾತು ವಿಭಾಗದಲ್ಲಿಯೂ ವಿಶೇಷ ರೀತಿಯ ಚಾಪನ್ನು ಮೂಡಿಸಿದ್ದಾರೆ.10 ನೇ ವಯಸ್ಸಿನಲ್ಲಿ ಯೋಗಾಭ್ಯಾಸದಲ್ಲಿ ಗುರುತಿಸಿಕೊಂಡಿರುವ ಬಹುಮುಖ ಪ್ರತಿಭೆಯನ್ನು ಹೊಂದಿರುವ ಕು.ತನ್ವಿತಾ ಅವರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ರಾಜ್ಯ ಕಲಾಶ್ರೀ ಪ್ರಶಸ್ತಿ,ಅಬ್ದು ಕಲಾಂ ರಾಷ್ಟ್ರ ಸದ್ಭಾವನಾ ಪ್ರಶಸ್ತಿ,ಯೋಗರತ್ನ ಪ್ರಶಸ್ತಿ,ಬಾಲ ಪುರಸ್ಕಾರ ಪ್ರಶಸ್ತಿ ಸೇರಿದಂತೆ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳು ಒಲಿದು ಬಂದಿದೆ.

ಜಿಲ್ಲಾ,ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸರುವ ಕು.ತನ್ವಿತಾ 150ಕ್ಕೂ ಹೆಚ್ಚಿನ ವೇದಿಕೆಯಲ್ಲಿ ಯೋಗ ಪ್ರದರ್ಶನ ನೀಡಿರುತ್ತಾರೆ.2018-19 ನೇ ಸಾಲಿನ ಅತ್ಯುತ್ತಮ ವಿದ್ಯಾರ್ಥಿನಿ ವಾರ್ಷಿಕ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.ಯೋಗ ಸ್ಪರ್ಧೆಯಲ್ಲಿ ರಾಜ್ಯ,ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಸ್ಪರ್ಧೆಯಲ್ಲಿಯೂ ಭಾವಹಿಸಿದ್ದಾರೆ.

ಕೊಲ್ಲೂರು ದೇವಳದ ವ್ಯವಸ್ಥಾಪನ ಸಮಿತಿ ಸದಸ್ಯ ಗೋಪಾಲಕೃಷ್ಣ ನಾಡ ಮಾತನಾಡಿ,ಕುಂದಾಪುರ ತಾಲೂಕಿನ ಪುಟ್ಟ ಗ್ರಾಮವಾದ ಕುಂದಬಾರಂದಾಡಿ ನಿವಾಸಿ ಅಂತರಾಷ್ಟ್ರೀಯ ಯೋಗಪಟು ಕು.ತನ್ವಿತಾ ಅವರು ಬಹುಮುಖ ಪ್ರತಿಭೆ ಯೋಗ ಸೇರಿದಂತೆ ಎಲ್ಲಾ ವಿಭಾಗದಲ್ಲಿಯೂ ಹೆಸರನ್ನು ಮಾಡಿರುವ ಬಾಲಪ್ರತಿಭೆಯನ್ನು ಗುರುತಿಸುವ ಕೆಲಸ ಜಿಲ್ಲಾಡಳಿತ ಮತ್ತು ಸಂಘ ಸಂಸ್ಥೆಗಳು ಮಾಡಬೇಕು.ಯೋಗಾಸನದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಖ್ಯಾತಿ ಗಳಿಸಲಿ ಎಂದು ಶುಭಹಾರೈಸಿದರು.

ಯೋಗಪಟು ತನ್ವಿತಾ ಅವರ ತಂದೆ ವಸಂತ ಪೂಜಾರಿ ಅವರು ಮಾತನಾಡಿ,ಬಾಲ್ಯದಲ್ಲೇ ಯೋಗದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದರಿಂದ ಅವಳ ನೆಚ್ಚಿನ ಕ್ಷೇತ್ರಕ್ಕೆ ಬೆಂಬಲವನ್ನು ನೀಡಿ ಪ್ರೋತ್ಸಾಹಿಸಲಾಗಿದೆ.5ನೇ ತರಗತಿ ಯಿಂದಲೇ ಯೋಗಾದಲ್ಲಿ ತೊಡಗಿರುವ ತನ್ವಿತಾ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿಯೂ ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಗೆದ್ದು ಕೊಂಡಿದ್ದಾಳೆ.ಯೋಗ ಮಾತ್ರವಲ್ಲದೆ ನೃತ್ಯ,ಯಕ್ಷಗಾನದಲ್ಲಿಯೂ ನಟನೆ ಮಾಡುವುದರ ಮೂಲಕ ತನ್ನ ಪ್ರತಿಭೆಯನ್ನು ಹೊರ ಜಗತ್ತಿಗೆ ತೊರ್ಪಡಿಸಿದ್ದಾಳೆ.ಅವಳ ಸಾಧನೆಗೆ ಸಂಘ ಸಂಸ್ಥೆಗಳು,ಸಮಾಜ ಬಾಂಧವರು ಬೆಂಬಲ ನೀಡಬೇಕು ಎಂದರು.

ಅಂತಾರಾಷ್ಟ್ರೀಯ ಯೋಗಪಟು ಕು.ತನ್ವಿತಾ ಮಾತನಾಡಿ,ಈಗಾಗಲೇ ಹಲವಾರು ಯೋಗಾಸನ ಸ್ಪರ್ಧೆಗಳಲ್ಲಿ ಭಾಗವಹಿಸಿ ತಾಲೂಕು,ಜಿಲ್ಲಾ,ರಾಜ್ಯ,ರಾಷ್ಟ್ರ ಹಾಗೂ ಅಂತರಾಷ್ಟ್ರಿಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಗೆದ್ದಿದಿನಿ.ರಾಜ್ಯ ಸರಕಾರದಿಂದ ಕಲಾಶ್ರೀ ಪ್ರಶಸ್ತಿ ಕೂಡ ದೊರೆತ್ತಿದೆ.ಯೋಗಾ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡಿ,ಆಸಕ್ತರಿಗೆ ಯೋಗಾವನ್ನು ಹೇಳಿ ಕೊಡಬೇಕು ಎನ್ನುವ ಆಸೆ ಇದೆ.ಐಎಎಸ್ ಓದಿ ಜನರ ಸೇವೆ ಮಾಡಬೇಕು ಎಂದು ಹೇಳಿದರು.

Advertisement
Advertisement

Share
Team Kundapur Times

Recent Posts

ಶ್ರೀ ಕೃಷ್ಣಾನಂದತೀರ್ಥಮಹಾಸ್ವಾಮಿ ಗೋಪಾಲಕೃಷ್ಣ ದೇವಸ್ಥಾನಕ್ಕೆ ಭೇಟಿ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ…

6 days ago

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ “ಐಕ್ಯಂ” 2k25 ಕಾರ್ಯಕ್ರಮ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ "ಐಕ್ಯಂ" 2025 ಅದ್ದೂರಿಯಿಂದ ನಡೆಯಿತು.ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ…

6 days ago

ಯುವಕ ಮಂಡಲ ತ್ರಾಸಿ 59ನೇ ವಾರ್ಷಿಕೋತ್ಸವ ಸಂಭ್ರಮ

ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು…

2 weeks ago

ಕೃಷ್ಣ ಮಠ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ

ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ…

2 weeks ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕ ಕ್ರೀಡಾಕೂಟ 2024-2025

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ಜರುಗಿತು.ಹಿರಿಯ ದೈಹಿಕ ನಿರ್ದೇಶಕ ಯುನೈಟೆಡ್ ಉಡುಪಿ…

2 weeks ago

ಸ್ಕೈಡೈನಿಂಗ್ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ: ಪ್ರಕೃತಿ ಸೌಂದರ್ಯಕ್ಕೆ ಮನಸೋತ ಸಚಿವ

ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ…

3 weeks ago