ಕುಂದಾಪುರ

ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬೈಂದೂರು ಗೋಳಿಹೊಳೆ-ಸೌಹಾರ್ದ ಸಹಕಾರಿ ದಿನಾಚರಣೆ

Share

ಬೈಂದೂರು:ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬೈಂದೂರು-ಗೋಳಿಹೊಳೆ ವತಿಯಿಂದ ಸೌಹಾರ್ದ ಸಹಕಾರಿ ದಿನಾಚರಣೆ, ಗ್ರಾಹಕರ ಸಭೆ ಮಹಿಷಮರ್ಧಿನಿ ಸಭಾಭವನ ಗೋಳಿಹೊಳೆಯಲ್ಲಿ ಅದ್ದೂರಿಯಾಗಿ ಸೋಮವಾರ ನಡೆಯಿತು.
ಸೌಹಾರ್ದ ಸಹಕಾರಿ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಸಂಘದ ಸದಸ್ಯರು ಹಾಗೂ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.ಆಶಾ ಕಾರ್ಯಕರ್ತೆಯರನ್ನು ಗೌರವಿಸಲಾಯಿತು.ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಯಿತು.

ಕರ್ನಾಟಕ ರಾಜ್ಯ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು ನಿರ್ದೇಶಕರಾದ ಎಸ್.ಕೆ ಮಂಜುನಾಥ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಕಾಡಂಚಿನ ಪ್ರದೇಶವನ್ನು ಹೊಂದಿರುವ ಗೋಳಿಹೊಳೆ ಅಂತಹ ಪ್ರದೇಶದಲ್ಲಿ ಸೌಹಾರ್ದ ಸಹಕಾರಿ ದಿನಾಚರಣೆಯನ್ನು ಆಯೋಜನೆ ಮಾಡಿರುವುದು ಸಂಘದ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿ ಆಗಿದೆ.ಸರಕಾರದ ಯಾವುದೇ ರೀತಿಯ ಅನುದಾನ ಮತ್ತು ಪ್ರೋತ್ಸಾಹವಿಲ್ಲದೆ ಸಂಘದ ಸದಸ್ಯರಿಲ್ಲದೆ ಇಂದು ಸೌಹಾರ್ದ ಸಹಕಾರಿ ಸಂಸ್ಥೆಗಳು ಪ್ರಗತಿಯನ್ನು ಸಾಧಿಸಿದೆ ಎಂದರು.ಸರಕಾರ ವಿಧಿಸಿದ ಚೌಕಟ್ಟಿನಲ್ಲಿ ಕೆಲಸ ಮಾಡಬೇಕಿದ ಅನಿವಾರ್ಯಯತೆ ನಮಗೆ ಇದೆ ರಾಜಕೀಯ ಉದ್ದೇಶದಿಂದಾಗಿ ಒಳ್ಳೆ ಸಹಕಾರಿ ಸಂಸ್ಥೆಗಳು ಮೂಲೆ ಗುಂಪಾಗಿದೆ ಎಂದು ತಮ್ಮ ಬೇಸರವನ್ನು ವ್ಯಕ್ತಪಡಿಸಿದರು.

ಶ್ರೀರಾಮ್ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿಯಮಿತ ಬೈಂದೂರು ಅಧ್ಯಕ್ಷ ಎಸ್.ರಾಜು ಪೂಜಾರಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ,ಸಣ್ಣ ಠೇವಣಿ ಯೊಂದಿಗೆ ಆರಂಭಗೊಂಡ ಗೋಳಿಹೊಳೆ ಶಾಖೆ ಇಂದು ತನ್ನ ಸ್ವಂತ ನೆಲೆಯಲ್ಲಿ ಗ್ರಾಹಕರಿಗೆ ಸಾಲವನ್ನು ವಿತರಿಸುತ್ತಿದೆ.ಸಂಸ್ಥೆಯ ಯಶಸ್ಸಿಗೆ ಗ್ರಾಹಕರ ಕೊಡುಗೆ ಅಪಾರವಾದದ್ದು ಎಂದರು. ಸಾಮಾಜಿಕ ಕ್ಷೇತ್ರಕ್ಕೆ ತನ್ನದೇ ರೀತಿಯಲ್ಲಿ ಕೊಡುಗೆಯನ್ನು ನೀಡುತ್ತಿರುವ ನಮ್ಮ ಸಂಸ್ಥೆಯೂ ಸಂಘದ ಸದಸ್ಯರಲ್ಲಿರುಲವ ಪ್ರತಿಭೆಯನ್ನು ಹೊರ ಹಾಕುವ ದೃಷ್ಟಿಯಿಂದ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಗೋಳಿಹೊಳೆ ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಶೆಟ್ಟಿ ಮಾತನಾಡಿ,ತೀರಾ ಹಿಂದುಳಿದ ಪ್ರದೇಶದಲ್ಲಿ ಸೌಹಾರ್ದ ಸೊಸೈಟಿಯನ್ನು ಹುಟ್ಟು ಹಾಕುವುದರ ಮೂಲಕ ರಾಜು ಪೂಜಾರಿ ಅವರು ಗ್ರಾಮೀಣ ಅಭಿವೃದ್ಧಿ ಮತ್ತು ಕೃಷಿಗೆ ಉತ್ತೇಜನ ನೀಡುವುದರ ಮೂಲಕ ವಿಶೇಷವಾದ ರೀತಿಯಲ್ಲಿ ಕೊಡುಗೆಯನ್ನು ನೀಡಿದರು ಎಂದು ಸ್ಮರಿಸಿದರು.

ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟ ಉಡುಪಿ ಜಿಲ್ಲಾ ಅಧ್ಯಕ್ಷ ಜಗನ್ನಾಥ ಶೆಟ್ಟಿ, ಸೌಹಾರ್ದ ಸಂಯೋಜಕರಾದ ವಿಜಯ ಬಿ.ಎಸ್, ನಿವೃತ್ತ ಮುಖ್ಯೋಪಾಧ್ಯಾಯ ಜೆ.ರತ್ನಾಕರ ಶೆಟ್ಟಿ,ಉಪಾಧ್ಯಕ್ಷ ವಿನಾಯಕ ರಾವ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಕಿಟ್ಟಣ್ಣ ರೈ,ಶಾಖಾ ವ್ಯವಸ್ಥಾಪಕ ರಾಘವೇಂದ್ರ ಪೂಜಾರಿ,ನಿರ್ದೇಶಕ ಸಿದ್ದ ಮಡಿವಾಳ,ರೋಹಿತ್ ಉಪಸ್ಥಿತರಿದ್ದರು.

ಸಹಕಾರಿ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದ ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘ ಯಡ್ತರೆ ಅಧ್ಯಕ್ಷ ಟಿ.ನಾರಾಯಣ ಹೆಗಡೆ ಮತ್ತು ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬೈಂದೂರು ಶಾಖಾ ಸಲಹಾ ಸಮಿತಿ ಸದಸ್ಯ ನಾರಾಯಣ ಶೆಟ್ಟಿ ಚುಚ್ಚಿ ಅವರನ್ನು ಸನ್ಮಾನಿಸಲಾಯಿತು.

ಶ್ರೇಯ ಮತ್ತು ತಂಡದವರು ಪ್ರಾರ್ಥಿಸಿದರು.ಸಂಘದ ಅಧ್ಯಕ್ಷ ರಾಜು ಎಸ್ ಪೂಜಾರಿ ಸ್ವಾಗತಿಸಿದರು.ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ನಿರೂಪಿಸಿದರು.ವಿನಾಯಕ ರಾವ್ ಸನ್ಮಾನ ಪತ್ರ ವಾಚಿಸಿದರು.ವ್ಯವಸ್ಥಾಪಕ ರಾಘವೇಂದ್ರ ಪೂಜಾರಿ ವಂದಿಸಿದರು.
ಸಂಘದ ಸದಸ್ಯರಿಗೆ ನೀಡಿದ ಲಕ್ಕಿ ಕೂಪನ್ ಡ್ರಾದಲ್ಲಿ ವಿಜೇತರಾದವರಿಗೆ ವಿಶೇಷ ಬಹುಮಾನ ವಿತರಿಸಲಾಯಿತು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

4 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

4 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago