ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ ಏರಿಕೆ
ಕುಂದಾಪುರ:ಕೊಬ್ಬರಿ ಧಾರಣೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ತೆಂಗು ಬೆಳೆಗಾರರಿಗೆ ಕೇಂದ್ರ ಸರಕಾರ ಬೆಂಬಲ ಬೆಲೆ ಘೋಷಣೆ ಮಾಡಿರುವುದರಿಂದ ಕರಾವಳಿ ಸಹಿತ ದೇಶದ ತೆಂಗು ಬೆಳೆಗಾರರ ಮೊಗದಲ್ಲಿ ಸಂತಸ ಮೂಡಿಸಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆಯು ದೇಶದ ತೆಂಗು ಬೆಳೆಗಾರರ ಸಂಕಷ್ಟವನ್ನು ಅರಿತು ಬೆಂಬಲ ಬೆಲೆ ಹೆಚ್ಚಿಸುವ ನಿರ್ಧಾರವನ್ನು ತನ್ನ ಸಚಿವ ಸಂಪುಟ ಸಭೆಯಲ್ಲಿ ಅಂಗೀಕರಿಸಿದೆ. ಮೋದಿ ಸರ್ಕಾರದ ಈ ನಿರ್ಧಾರದಿಂದ.ಕೇಂದ್ರ ಸರ್ಕಾರ ಗಿರಣಿ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು ಪ್ರತೀ ಕ್ವಿಂಟಾಲ್ಗೆ 300 ರೂಪಾಯಿ ಹಾಗೂ ಉಂಡೆ ಕೊಬ್ಬರಿಯ ಎಂಎಸ್ಪಿಯನ್ನು ಕ್ವಿಂಟಾಲ್ಗೆ 250 ರೂಪಾಯಿಗೆ ಏರಿಕೆ ಮಾಡಿದೆ.ಇದರೊಂದಿಗೆ 2024ನೇ ಋತುವಿಗೆ ಮಿಲ್ಲಿಂಗ್ ಕೊಬ್ಬರಿಯ ಕನಿಷ್ಠ ಬೆಲೆಯು ಕ್ವಿಂಟಾಲ್ಗೆ 11,160 ರೂಪಾಯಿಗಳಿಗೆ ಹೆಚ್ಚಳಗೊಂಡಿದೆ.ಇದೇ ವೇಳೆ ಉತ್ತಮ ಗುಣಮಟ್ಟದ ಉಂಡೆ ಕೊಬ್ಬರಿಯ ಬೆಲೆ 12,000 ರೂಪಾಯಿಗಳಿಗೆಗೆ ಏರಿಕೆಯಾಗಿದೆ.