ಕುಂದಾಪುರ

ಆಲೂರು:ಅಶಕ್ತ ಕುಟುಂಬಕ್ಕೆ ಬೇಕಿದೆ ನೆರವು

Share

ಕುಂದಾಪುರ:ತಾಲೂಕಿನ ಆಲೂರು ಗ್ರಾಮದ ಸೆಳೆಕೋಡು ನಿವಾಸಿ ಕೃಷಿಕ ವಿಜಯ ಕುಮಾರ ಶೆಟ್ಟಿ ಎಂಬುವರು ಕಾಡಿನಿಂದ ಸೊಪ್ಪು ತರುವ ಸಂದರ್ಭದಲ್ಲಿ ಕಾಲು ಜಾರಿ ಬಿದ್ದು ಬೆನ್ನುಹುರಿಗೆ ಘಾಸಿಯಾಗಿ ದಿವ್ಯಂಗರಾಗಿ ಕಳೆದ ಎರಡು ವರ್ಷಗಳಿಂದ ಕೆಲಸ ಮಾಡಲು ಸಾಧ್ಯವಾಗದೆ ಹಾಸಿಗೆ ಹಿಡಿದ್ದಾರೆ.ಇದರ ನಡುವೆ ಅವರ ಏಕೈಕ ಪುತ್ರಿ ಎರಡನೇ ತರಗತಿ ವಿದ್ಯಾರ್ಥಿನಿ ಸೃಷ್ಟಿಗೆ ಕ್ಯಾನ್ಸರ್ ರೋಗ ಕಾಣಿಸಿಕೊಂಡಿದೆ.ಸಂಕಷ್ಟದಲ್ಲಿದ್ದ ಬಡ ಕುಟುಂಬ ದಿಕ್ಕು ತೋಚದಂತಾಗಿದ್ದು ಸಾಮಾಜಿಕ ನೆರವನ್ನು ಯಾಚಿಸಿದೆ.
ಪ್ರಗತಿಪರ ಬಡ ಕೃಷಿಕರಾದ ವಿಜಯ ಕುಮಾರ್ ಶೆಟ್ಟಿ ಅವರು ಮಳೆಗಾಲದ ಸಮಯದಲ್ಲಿ ಕಾಡಿಗೆ ಹೋಗಿ ಸೊಪ್ಪು ತರುವ ವೇಳೆಯಲ್ಲಿ ಕಾಲು ಜಾರಿ ಬಿದ್ದಿದ ಪರಿಣಾಮ ಅವರ ಬೆನ್ನು ಹುರಿಗೆ ಬಲವಾದ ಪೆಟ್ಟು ಬಿದ್ದಿದ್ದೆ.ಕೆಲಸ ಮಾಡಲು ಸಾಧ್ಯವಾಗದೆ ಹಾಸಿಗೆಯಲ್ಲಿ ಜೀವನವನ್ನು ಕಳೆಯುತ್ತಿದ್ದಾರೆ ಅವರ ಕೃಷಿ ಭೂಮಿಗಳು ಹಡವು ಬಿದ್ದಿದೆ.ದುರಂತ ಎನ್ನುವಂತೆ ಅವರ ಏಕೈಕ ಪುತ್ರಿಗೆ ಬ್ಲಡ್ ಕ್ಯಾನ್ಸರ್ ರೋಗ ತಗುಲಿದೆ.ನಿರಂತರ ಎರಡು ವರ್ಷಗಳ ಕಾಲ ಚಿಕಿತ್ಸೆ ಹಾಗೂ ಸತತ ಏಳು ತಿಂಗಳುಗಳ ಕಾಲ ಆಸ್ಪತ್ರೆಯಲ್ಲಿದ್ದುಕೊಂಡು ವೈದ್ಯಕೀಯ ಚಿಕಿತ್ಸೆಯನ್ನು ಪಡೆಯಬೇಕಾದ ಅವಶ್ಯಕತೆ ಇದೆ.ಮಗುವಿನ ಚಿಕಿತ್ಸೆಗೆ 30 ಲಕ್ಷಕ್ಕೂ ಅಧಿಕ ಹಣ ಖರ್ಚಾಗಲಿದೆ ಎಂದು ವೈದ್ಯರು ತಿಳಿಸಿದ್ದಾರೆ.ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದ ಕುಟುಂಬ ಕಂಗಾಲಾಗಿದೆ.ಅಶಕ್ತ ಕುಟುಂಬ ಸಾಮಾಜಿಕ ನೆರವನ್ನು ಯಾಚಿಸಿದ್ದಾರೆ.

Advertisement

Share
Team Kundapur Times

Recent Posts

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

3 days ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 weeks ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

4 weeks ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

1 month ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…

1 month ago

ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆ:ವಿನಿಶ್ ಕುಮಾರ್,ಅನ್ವಿಶ್ ಕುಮಾರ್ ಗೆ ಪ್ರಥಮ ಸ್ಥಾನ

ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್‍ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…

1 month ago