ಕುಂದಾಪುರ

ಆಲೂರು:ಅಶಕ್ತ ಕುಟುಂಬಕ್ಕೆ ಬೇಕಿದೆ ನೆರವು

Share

ಕುಂದಾಪುರ:ತಾಲೂಕಿನ ಆಲೂರು ಗ್ರಾಮದ ಸೆಳೆಕೋಡು ನಿವಾಸಿ ಕೃಷಿಕ ವಿಜಯ ಕುಮಾರ ಶೆಟ್ಟಿ ಎಂಬುವರು ಕಾಡಿನಿಂದ ಸೊಪ್ಪು ತರುವ ಸಂದರ್ಭದಲ್ಲಿ ಕಾಲು ಜಾರಿ ಬಿದ್ದು ಬೆನ್ನುಹುರಿಗೆ ಘಾಸಿಯಾಗಿ ದಿವ್ಯಂಗರಾಗಿ ಕಳೆದ ಎರಡು ವರ್ಷಗಳಿಂದ ಕೆಲಸ ಮಾಡಲು ಸಾಧ್ಯವಾಗದೆ ಹಾಸಿಗೆ ಹಿಡಿದ್ದಾರೆ.ಇದರ ನಡುವೆ ಅವರ ಏಕೈಕ ಪುತ್ರಿ ಎರಡನೇ ತರಗತಿ ವಿದ್ಯಾರ್ಥಿನಿ ಸೃಷ್ಟಿಗೆ ಕ್ಯಾನ್ಸರ್ ರೋಗ ಕಾಣಿಸಿಕೊಂಡಿದೆ.ಸಂಕಷ್ಟದಲ್ಲಿದ್ದ ಬಡ ಕುಟುಂಬ ದಿಕ್ಕು ತೋಚದಂತಾಗಿದ್ದು ಸಾಮಾಜಿಕ ನೆರವನ್ನು ಯಾಚಿಸಿದೆ.
ಪ್ರಗತಿಪರ ಬಡ ಕೃಷಿಕರಾದ ವಿಜಯ ಕುಮಾರ್ ಶೆಟ್ಟಿ ಅವರು ಮಳೆಗಾಲದ ಸಮಯದಲ್ಲಿ ಕಾಡಿಗೆ ಹೋಗಿ ಸೊಪ್ಪು ತರುವ ವೇಳೆಯಲ್ಲಿ ಕಾಲು ಜಾರಿ ಬಿದ್ದಿದ ಪರಿಣಾಮ ಅವರ ಬೆನ್ನು ಹುರಿಗೆ ಬಲವಾದ ಪೆಟ್ಟು ಬಿದ್ದಿದ್ದೆ.ಕೆಲಸ ಮಾಡಲು ಸಾಧ್ಯವಾಗದೆ ಹಾಸಿಗೆಯಲ್ಲಿ ಜೀವನವನ್ನು ಕಳೆಯುತ್ತಿದ್ದಾರೆ ಅವರ ಕೃಷಿ ಭೂಮಿಗಳು ಹಡವು ಬಿದ್ದಿದೆ.ದುರಂತ ಎನ್ನುವಂತೆ ಅವರ ಏಕೈಕ ಪುತ್ರಿಗೆ ಬ್ಲಡ್ ಕ್ಯಾನ್ಸರ್ ರೋಗ ತಗುಲಿದೆ.ನಿರಂತರ ಎರಡು ವರ್ಷಗಳ ಕಾಲ ಚಿಕಿತ್ಸೆ ಹಾಗೂ ಸತತ ಏಳು ತಿಂಗಳುಗಳ ಕಾಲ ಆಸ್ಪತ್ರೆಯಲ್ಲಿದ್ದುಕೊಂಡು ವೈದ್ಯಕೀಯ ಚಿಕಿತ್ಸೆಯನ್ನು ಪಡೆಯಬೇಕಾದ ಅವಶ್ಯಕತೆ ಇದೆ.ಮಗುವಿನ ಚಿಕಿತ್ಸೆಗೆ 30 ಲಕ್ಷಕ್ಕೂ ಅಧಿಕ ಹಣ ಖರ್ಚಾಗಲಿದೆ ಎಂದು ವೈದ್ಯರು ತಿಳಿಸಿದ್ದಾರೆ.ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದ ಕುಟುಂಬ ಕಂಗಾಲಾಗಿದೆ.ಅಶಕ್ತ ಕುಟುಂಬ ಸಾಮಾಜಿಕ ನೆರವನ್ನು ಯಾಚಿಸಿದ್ದಾರೆ.

Advertisement

Share
Team Kundapur Times

Recent Posts

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

7 days ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago