ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ಶ್ರೀರಾಮ ದೇವಸ್ಥಾನದ ಸುವರ್ಣ ಮಹೋತ್ಸವ ಮಹಿಳಾ ಸಮಿತಿ ರಚನಾ ಸಭೆ ಶ್ರೀರಾಮ ದೇವಸ್ಥಾನದ ವಠಾರದಲ್ಲಿ ಶುಕ್ರವಾರ ನಡೆಯಿತು.
ಶ್ರೀರಾಮ ದೇವಸ್ಥಾನ ಕಂಚುಗೋಡು ಸಂಘಟನಾ ಕಾರ್ಯದರ್ಶಿ ರಾಘು ವಿ.ಕೆ ಮಾತನಾಡಿ,ಶ್ರೀರಾಮ ದೇವಸ್ಥಾನಕ್ಕೆ 50 ವರ್ಷ ತುಂಬುತ್ತಿರುವ ಹೊತ್ತಿನಲ್ಲಿ ನೂತನ ಆಡಳಿತ ಸಮಿತಿ ಮತ್ತು ಮಹಿಳಾ ಸಮಿತಿಯನ್ನು ರಚನೆ ಮಾಡಲಾಗಿದೆ.ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರಾಗಿ ನಾಗೇಶ್ ಖಾರ್ವಿ ಮತ್ತು ಕಾರ್ಯದರ್ಶಿಯಾಗಿ ಕೃಷ್ಣ ಪಟೇಲ್ ಅವರು ಈಗಾಗಲೇ ಆಯ್ಕೆಯಾಗಿದ್ದಾರೆ.ನೂತನವಾಗಿ ರಚನೆ ಗೊಂಡಿರುವ ಸುವರ್ಣ ಮಹೋತ್ಸವ ಮಹಿಳಾ ಸಮಿತಿ ಅಧ್ಯಕ್ಷರಾಗಿ ಯಶೋಧ ಖಾರ್ವಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು.ನೂತನ ಸಮಿತಿಗಳಿಂದ ಮುಂದಿನ ಕಾರ್ಯಯೋಜನೆ ನಡೆಯಲಿದೆ ಎಂದು ಹೇಳಿದರು.ಶ್ರೀರಾಮ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ನಾಗೇಶ್ ಖಾರ್ವಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಸುವರ್ಣ ಮಹೋತ್ಸವ ಮಹಿಳಾ ಸಮಿತಿ ಅಧ್ಯಕ್ಷರಾಗಿ ಯಶೋಧ ಖಾರ್ವಿ ಅವರನ್ನು ಆಯ್ಕೆಮಾಡಲಾಯಿತು.ಉಪಾಧ್ಯಕ್ಷರಾಗಿ ರಾಧ ಖಾರ್ವಿ,ಲಲಿತಾ ಖಾರ್ವಿ,ಪಲ್ಲವಿ,ಕಾರ್ಯದರ್ಶಿಯಾಗಿ ವಂದನಾ ಖಾರ್ವಿ,ಜೊತೆ ಕಾರ್ಯದರ್ಶಿ ವೀಣಾ ಖಾರ್ವಿ,ಸಂಘಟನಾ ಕಾರ್ಯದರ್ಶಿ ಆಶಾ ಹಾಗೂ ಖಜಾಂಚಿಯಾಗಿ ಜಯಂತಿ ಅವರನ್ನು ಆಯ್ಕೆಮಾಡಲಾಯಿತು.ದೇವಸ್ಥಾನದ ಆಡಳಿತ ಮಂಡಳಿ ಸಮಿತಿ ಕಾರ್ಯದರ್ಶಿ ಕೃಷ್ಣ ಪಟೇಲ್,ಕೋಶಾಧಿಕಾರಿ ವಾಸುದೇವ ಖಾರ್ವಿ,ಉಪಾಧ್ಯಕ್ಷರಾದ ರವಿ ಖಾರ್ವಿ,ಸುಬ್ರಹ್ಮಣ್ಯ ಪೂಜಾರಿ,ದೇವದಾಸ ಖಾರ್ವಿ,ಪ್ರಕಾಶ ಖಾರ್ವಿ ಹೊಸಪೇಟೆ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…