ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ಶ್ರೀರಾಮ ದೇವಸ್ಥಾನದ ಸುವರ್ಣ ಮಹೋತ್ಸವ ಮಹಿಳಾ ಸಮಿತಿ ರಚನಾ ಸಭೆ ಶ್ರೀರಾಮ ದೇವಸ್ಥಾನದ ವಠಾರದಲ್ಲಿ ಶುಕ್ರವಾರ ನಡೆಯಿತು.
ಶ್ರೀರಾಮ ದೇವಸ್ಥಾನ ಕಂಚುಗೋಡು ಸಂಘಟನಾ ಕಾರ್ಯದರ್ಶಿ ರಾಘು ವಿ.ಕೆ ಮಾತನಾಡಿ,ಶ್ರೀರಾಮ ದೇವಸ್ಥಾನಕ್ಕೆ 50 ವರ್ಷ ತುಂಬುತ್ತಿರುವ ಹೊತ್ತಿನಲ್ಲಿ ನೂತನ ಆಡಳಿತ ಸಮಿತಿ ಮತ್ತು ಮಹಿಳಾ ಸಮಿತಿಯನ್ನು ರಚನೆ ಮಾಡಲಾಗಿದೆ.ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರಾಗಿ ನಾಗೇಶ್ ಖಾರ್ವಿ ಮತ್ತು ಕಾರ್ಯದರ್ಶಿಯಾಗಿ ಕೃಷ್ಣ ಪಟೇಲ್ ಅವರು ಈಗಾಗಲೇ ಆಯ್ಕೆಯಾಗಿದ್ದಾರೆ.ನೂತನವಾಗಿ ರಚನೆ ಗೊಂಡಿರುವ ಸುವರ್ಣ ಮಹೋತ್ಸವ ಮಹಿಳಾ ಸಮಿತಿ ಅಧ್ಯಕ್ಷರಾಗಿ ಯಶೋಧ ಖಾರ್ವಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು.ನೂತನ ಸಮಿತಿಗಳಿಂದ ಮುಂದಿನ ಕಾರ್ಯಯೋಜನೆ ನಡೆಯಲಿದೆ ಎಂದು ಹೇಳಿದರು.ಶ್ರೀರಾಮ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ನಾಗೇಶ್ ಖಾರ್ವಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಸುವರ್ಣ ಮಹೋತ್ಸವ ಮಹಿಳಾ ಸಮಿತಿ ಅಧ್ಯಕ್ಷರಾಗಿ ಯಶೋಧ ಖಾರ್ವಿ ಅವರನ್ನು ಆಯ್ಕೆಮಾಡಲಾಯಿತು.ಉಪಾಧ್ಯಕ್ಷರಾಗಿ ರಾಧ ಖಾರ್ವಿ,ಲಲಿತಾ ಖಾರ್ವಿ,ಪಲ್ಲವಿ,ಕಾರ್ಯದರ್ಶಿಯಾಗಿ ವಂದನಾ ಖಾರ್ವಿ,ಜೊತೆ ಕಾರ್ಯದರ್ಶಿ ವೀಣಾ ಖಾರ್ವಿ,ಸಂಘಟನಾ ಕಾರ್ಯದರ್ಶಿ ಆಶಾ ಹಾಗೂ ಖಜಾಂಚಿಯಾಗಿ ಜಯಂತಿ ಅವರನ್ನು ಆಯ್ಕೆಮಾಡಲಾಯಿತು.ದೇವಸ್ಥಾನದ ಆಡಳಿತ ಮಂಡಳಿ ಸಮಿತಿ ಕಾರ್ಯದರ್ಶಿ ಕೃಷ್ಣ ಪಟೇಲ್,ಕೋಶಾಧಿಕಾರಿ ವಾಸುದೇವ ಖಾರ್ವಿ,ಉಪಾಧ್ಯಕ್ಷರಾದ ರವಿ ಖಾರ್ವಿ,ಸುಬ್ರಹ್ಮಣ್ಯ ಪೂಜಾರಿ,ದೇವದಾಸ ಖಾರ್ವಿ,ಪ್ರಕಾಶ ಖಾರ್ವಿ ಹೊಸಪೇಟೆ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…
ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…
ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…