ಕುಂದಾಪುರ

ಕಂಚುಗೋಡು ಶ್ರೀರಾಮ ದೇವಸ್ಥಾನ ಸುವರ್ಣ ಮಹೋತ್ಸವ ಮಹಿಳಾ ಸಮಿತಿ ರಚನೆ

Share

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ಶ್ರೀರಾಮ ದೇವಸ್ಥಾನದ ಸುವರ್ಣ ಮಹೋತ್ಸವ ಮಹಿಳಾ ಸಮಿತಿ ರಚನಾ ಸಭೆ ಶ್ರೀರಾಮ ದೇವಸ್ಥಾನದ ವಠಾರದಲ್ಲಿ ಶುಕ್ರವಾರ ನಡೆಯಿತು.
ಶ್ರೀರಾಮ ದೇವಸ್ಥಾನ ಕಂಚುಗೋಡು ಸಂಘಟನಾ ಕಾರ್ಯದರ್ಶಿ ರಾಘು ವಿ.ಕೆ ಮಾತನಾಡಿ,ಶ್ರೀರಾಮ ದೇವಸ್ಥಾನಕ್ಕೆ 50 ವರ್ಷ ತುಂಬುತ್ತಿರುವ ಹೊತ್ತಿನಲ್ಲಿ ನೂತನ ಆಡಳಿತ ಸಮಿತಿ ಮತ್ತು ಮಹಿಳಾ ಸಮಿತಿಯನ್ನು ರಚನೆ ಮಾಡಲಾಗಿದೆ.ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರಾಗಿ ನಾಗೇಶ್ ಖಾರ್ವಿ ಮತ್ತು ಕಾರ್ಯದರ್ಶಿಯಾಗಿ ಕೃಷ್ಣ ಪಟೇಲ್ ಅವರು ಈಗಾಗಲೇ ಆಯ್ಕೆಯಾಗಿದ್ದಾರೆ.ನೂತನವಾಗಿ ರಚನೆ ಗೊಂಡಿರುವ ಸುವರ್ಣ ಮಹೋತ್ಸವ ಮಹಿಳಾ ಸಮಿತಿ ಅಧ್ಯಕ್ಷರಾಗಿ ಯಶೋಧ ಖಾರ್ವಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು.ನೂತನ ಸಮಿತಿಗಳಿಂದ ಮುಂದಿನ ಕಾರ್ಯಯೋಜನೆ ನಡೆಯಲಿದೆ ಎಂದು ಹೇಳಿದರು.ಶ್ರೀರಾಮ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ನಾಗೇಶ್ ಖಾರ್ವಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಸುವರ್ಣ ಮಹೋತ್ಸವ ಮಹಿಳಾ ಸಮಿತಿ ಅಧ್ಯಕ್ಷರಾಗಿ ಯಶೋಧ ಖಾರ್ವಿ ಅವರನ್ನು ಆಯ್ಕೆಮಾಡಲಾಯಿತು.ಉಪಾಧ್ಯಕ್ಷರಾಗಿ ರಾಧ ಖಾರ್ವಿ,ಲಲಿತಾ ಖಾರ್ವಿ,ಪಲ್ಲವಿ,ಕಾರ್ಯದರ್ಶಿಯಾಗಿ ವಂದನಾ ಖಾರ್ವಿ,ಜೊತೆ ಕಾರ್ಯದರ್ಶಿ ವೀಣಾ ಖಾರ್ವಿ,ಸಂಘಟನಾ ಕಾರ್ಯದರ್ಶಿ ಆಶಾ ಹಾಗೂ ಖಜಾಂಚಿಯಾಗಿ ಜಯಂತಿ ಅವರನ್ನು ಆಯ್ಕೆಮಾಡಲಾಯಿತು.ದೇವಸ್ಥಾನದ ಆಡಳಿತ ಮಂಡಳಿ ಸಮಿತಿ ಕಾರ್ಯದರ್ಶಿ ಕೃಷ್ಣ ಪಟೇಲ್,ಕೋಶಾಧಿಕಾರಿ ವಾಸುದೇವ ಖಾರ್ವಿ,ಉಪಾಧ್ಯಕ್ಷರಾದ ರವಿ ಖಾರ್ವಿ,ಸುಬ್ರಹ್ಮಣ್ಯ ಪೂಜಾರಿ,ದೇವದಾಸ ಖಾರ್ವಿ,ಪ್ರಕಾಶ ಖಾರ್ವಿ ಹೊಸಪೇಟೆ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

4 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

4 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago