ಕುಂದಾಪುರ

ಜ.20,21 ರಂದು ಕಂಚುಗೋಡು ಶಾಲೆ ಅಮೃತ ಮಹೋತ್ಸವ

Share

ಕುಂದಾಪುರ:ಅಮೃತ ಮಹೋತ್ಸವ ಕಾರ್ಯಕ್ರಮ ಎನ್ನುವುದು ಕೇವಲ ಸಂಭ್ರಮಕ್ಕೆ ಮಾತ್ರ ಸೀಮಿತವಾಗದೆ ಶಾಲಾಭಿವೃದ್ಧಿಗೆ ಹೆಚ್ಚಿನ ಒತ್ತನ್ನು ನೀಡಲಾಗುತ್ತಿದೆ ಎಂದು ಶಾಲಾ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ವಾಸುದೇವ ಖಾರ್ವಿ ಹೇಳಿದರು.
ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಕಂಚುಗೋಡು ಶಾಲೆ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಕಂಚುಗೋಡು ಶಾಲೆಯಲ್ಲಿ ಶನಿವಾರ ನಡೆದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಶಾಲಾ ಮಕ್ಕಳಿಗೆ ಅನುಕೂಲವಾಗುವ ದೃಷ್ಟಿಯಿಂದ ಶಾಲಾ ವಾಹನದ ವ್ಯವಸ್ಥೆ ಸಹಿತ ಸ್ಮಾರ್ಟ್ ಕ್ಲಾಸ್ ನಿರ್ಮಾಣ,ಇಂಗ್ಲಿಷ್ ಸ್ಪಿಕಿಂಗ್ ಕ್ಲಾಸ್,ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ,ವಿದ್ಯಾನಿಧಿ ಯೋಜನೆ ಹಾಗೂ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸುವ ದೃಷ್ಟಿಯಲ್ಲಿ ಎಲ್.ಕೆ.ಜಿ,ಯು.ಕೆ.ಜಿ ತರಗತಿ ಆರಂಭಿಸುವ ಚಿಂತನೆಯನ್ನು ಮಾಡಲಾಗಿದ್ದು ಎಲ್ಲಾ ಯೋಜನೆಗಳನ್ನು ಅಮೃತ ಮಹೋತ್ಸವ ಕಾರ್ಯಕ್ರಮದ ಮುಖೇನ ಹಮ್ಮಿಕೊಳ್ಳಲಾಗಿದೆ ಎಂದರು.ವಿದ್ಯಾಭಿಮಾನಿಗಳು,ದಾನಿಗಳು ಸಹಕಾರ ನೀಡಬೇಕೆಂದು ವಿನಂತಿಸಿಕೊಂಡರು.
ಹಳೆ ವಿದ್ಯಾರ್ಥಿ ಸಂಘದ ಸಂಘದ ಕೋಶಾಧಿಕಾರಿ ಹರೀಶ್ ಖಾರ್ವಿ ಮಾತನಾಡಿ,1948 ರಲ್ಲಿ ಆರಂಭಗೊಂಡ ಕಂಚುಗೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 2024 ರಲ್ಲಿ 75 ವರ್ಷಗಳು ತುಂಬಲಿದೆ.ಅಮೃತ ಮಹೋತ್ಸವ ಕಾರ್ಯಕ್ರಮ ಒಂದೆ ವಿಷಯವಲ್ಲದೆ ಸರಕಾರಿ ಶಾಲೆಯನ್ನು ನಮ್ಮ ಭಾಗದಲ್ಲಿ ಉಳಿಸಿಕೊಳ್ಳುವ ದೃಷ್ಟಿಯಿಂದ ಹಲವಾರು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಲ್ಲರೂ ಸಹಕಾರ ನೀಡಬೇಕೆಂದರು.
ಶಾಲಾ ಮುಖ್ಯ ಶಿಕ್ಷಕಿ ಗಿರಿಜಾ.ಎಂ ಮಾತನಾಡಿ,ಹಳೆ ವಿದ್ಯಾರ್ಥಿ ಸಂಘ ಮತ್ತು ಎಸ್‍ಡಿಎಂಸಿ ಸದಸ್ಯರ ಅವಿತರ ಶ್ರಮದಿಂದ ಶಾಲೆಯಲ್ಲಿ ಹಾಜರಾತಿ ಪ್ರಮಾಣವೂ ಅಧಿಕಗೊಂಡಿದೆ ಎಂದರು.
ಶಾಲಾ ಎಸ್‍ಡಿಎಂಸಿ ಅಧ್ಯಕ್ಷೆ ವಿಮಲಾ ಸುರೇಶ್ ನಾಯಕ್,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚೌಕಿ ಅಖೋಕ ಖಾರ್ವಿ ಮತ್ತು ಕಾರ್ಯದರ್ಶಿ ಕೃಷ್ಣ ಪಟೇಲ್,ಸಂಘಟನಾ ಕಾರ್ಯದರ್ಶಿ ರಮೇಶ್ ಖಾರ್ವಿ,ಅಮೃತ ಮಹೋತ್ಸವ ಸಮಿತಿ ಕೋಶಾಧಿಕಾರಿ ಪ್ರದೀಪ ಪೂಜಾರಿ,ಸುಖಪಾಲ್ ಖಾರ್ವಿ,ನಾಗರಾಜ,ದಿವಾಕರ,ಆಶಾ ಕಾರ್ಯಕರ್ತೆ ಪ್ರೇಮ ಭಂಡಾರಿ ಉಪಸ್ಥಿತರಿದ್ದರು.ಜನವರಿ 20,21 ರಂದು ಸರಕಾರಿ ಹಿರಿಯ ಪ್ರಾಥಮಿಕ ಕಂಚುಗೋಡು ಶಾಲೆ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ.

Advertisement

Share
Team Kundapur Times

Recent Posts

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

7 days ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago