ಕುಂದಾಪುರ

ಪಡುಕೋಣೆ:ಬೃಹತ್ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

Share

ಕುಂದಾಪುರ:ಬೈಂದೂರು ತಾಲೂಕಿನ ಪಡುಕೋಣೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್.ಜಿ ಫೌಂಡೇಶನ್, ಕುಂದಾಪುರ ಇವರ ವತಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ನಿವಾರಣಾ ವಿಭಾಗ) ಉಡುಪಿ ಪ್ರಾಥಮಿಕ ಆರೋಗ್ಯ ಕೇಂದ್ರ, ನಾಡ, ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮಂಗಳೂರು ಹಳೆ ವಿದ್ಯಾರ್ಥಿಗಳ ಸಂಘ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಪಡುಕೋಣೆ, ಶ್ರೀ ಮಹಾವಿಷ್ಣು ಫ್ರೆಂಡ್ಸ್ ಸರ್ಕಲ್, ಪಡುಕೋಣೆ ಫ್ರೆಂಡ್ಸ್ ಪಡುಕೋಣೆ, ವಿಶ್ವ ದೇವಾಡಿಗ ಮಹಾ ಮಂಡಲ ದೇವಾಡಿಗ ಅಕ್ಷಯ ಕಿರಣ ಸೇವಾ ಫೌಂಡೇಶನ್ ಪಡುಕೋಣೆ ಎಜುಕೇಶನ್ & ಸ್ಪೋಟ್ಸ್ ಪ್ರಮೋಟರ್ಸ್, ನಾಡ, ಜನ ಶಕ್ತಿ ಸೇವಾ ಟ್ರಸ್ಟ್ (ರಿ.), ನಾಡ ಇವರ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಭಾನುವಾರ ನಡೆಯಿತು.

ಉದ್ಯಮಿ ಡಾ.ವಿಜಯಕೃಷ್ಣ ಪಡುಕೋಣೆ ಅವರು ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ,ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಎಲ್ಲರಿಗೂ ಅಗತ್ಯವಾಗಿದ್ದು,ಕಾಲ ಕಾಲಕ್ಕೆ ಸೂಕ್ತವಾದ ತಪಾಸಣೆ ಮಾಡಿಕೊಂಡಾಗ ಮಾತ್ರ ಪ್ರಾಥಮಿಕ ಹಂತದಲ್ಲಿಯೇ ಆರೋಗ್ಯದ ಗುಣಲಕ್ಷಣಗಳನ್ನು ಪತ್ತೆ ಹಚ್ಚಬಹುದಾಗಿದೆ.ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಹೆಚ್ಚು ಶಿಬಿರಗಳನ್ನು ಆಯೋಜಿಸುದರಿಂದ ಜನರಿಗೆ ಅನುಕೂಲವಾಗಲಿದೆ ಎಂದರು.

ಎಲ್.ಜಿ ಫೌಂಡೇಶನ್ ಮ್ಯಾನೇಜಿಂಗ್ ಟ್ರಸ್ಟಿ ನಾಗರಾಜ ಡಿ ಪಡುಕೋಣೆ ಮಾತನಾಡಿ,ಸಾಮಾಜಿಕ,ಶೈಕ್ಷಣಿಕ ಕಾರ್ಯಗಳಿಗೆ ಹೆಚ್ಚಿನ ಒತ್ತನ್ನು ನೀಡುತ್ತಾ ಬರಲಾಗುತ್ತಿದ್ದು,ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ಇವೊಂದು ಆರೋಗ್ಯ ಶಿಬಿರ ಆಯೋಜನೆ ಮಾಡಲಾಗಿದೆ ಎಂದು ಹೇಳಿದರು.ಸಾಮಾಜಿಕ ಜಾಲತಾಣಗಳನ್ನು ಸದುಪಯೋಗ ಪಡಿಸಿಕೊಂಡು ಸಣ್ಣ ಸಣ್ಣ ವಾಟ್ಸ್ ಆ್ಯಪ್ ಗ್ರೂಪ್ ನಿಂದಲೂ ಜನ ಸೇವಾ ಕಾರ್ಯಗಳನ್ನು ಮಾಡಬಹುದಾಗಿದೆ ಎಂದು ಅಭಿಪ್ರಾಯಪಟ್ಟರು.

ಕುಂದಾಪುರ ತಾಲೂಕು ಆರೋಗ್ಯಧಿಕಾರಿ ಡಾ.ಪ್ರೇಮಾನಂದ ಮಾತನಾಡಿ,ಆಯುಷ್ಮಾನ್ ಕಾರ್ಡ್ ಮಹತ್ವ ಮತ್ತು ಆರೋಗ್ಯ ಶಿಬಿರದ ಕುರಿತು ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಜನಶಕ್ತಿ ಸೇವಾ ಟ್ರಸ್ಟ್ ಫಿಲಿಪ್ ಡಿಸಿಲ್ವ,ನಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚಿಕ್ಮರಿ,ನಾಟಿ ವೈದ್ಯ ಮಾಕ್ಸಿಮ್ ಓಲವೇರಾ ಆನಗೋಡು ತ್ರಾಸಿ,ದೇವಾಡಿಗ ಅಕ್ಷಯ ಕಿರಣ ಸೇವಾ ಫೌಂಡೇಶನ್ ಸ್ಥಾಪಕ ಗಣೇಶ್ ಶೇರಿಗಾರ್ ಅವರನ್ನು ವಿಶೇಷವಾಗಿ ಸನ್ಮಾನಿಸಿ,ಗೌರವಿಸಲಾಯಿತು.

ಕುಂದಾಪುರ ಉಪವಿಭಾಗೀಯ ಸರಕಾರಿ ಆಸ್ಪತ್ರೆಯ ವೈದ್ಯಕೀಯ ತಜ್ಜ ಡಾ.ನಾಗೇಶ್,ದೇವಾಡಿಗ ಅಕ್ಷಯ ಕಿರಣ ಪೌಂಡೇಶನ್ ಎಂ.ಡಿ.ಮಧುಕರ ದೇವಾಡಿಗ,ದೇವಾಡಿಗ ವಿಶ್ವ ಮಹಾ ಮಂಡಲದ ಉಪಾಧ್ಯಕ್ಷ ಡಾ.ದೇವರಾಜ್ ಕೆ,ಪಡುಕೋಣೆ ಎಜುಕೇಶನ್ ಹಾಗೂ ಸ್ಪೋಟ್ರ್ಸ್ ಪ್ರಮೋಟರ್ಸ ನಾಡ ಅಧ್ಯಕ್ಷ ಡಾಲ್ಫಿ ಡಿಸಿಲ್ವ,ಪಡುಕೋಣೆ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದಿನೇಶ್ ಪೂಜಾರಿ,ಹಿರಿಯ ಸಂಶೋಧನಾ ವಿಜ್ಜಾನಿ ಪೂರ್ಣಿಮಾ ದಯಾನಂದ ದೇವಾಡಿಗ,ನಾಡ ಗ್ರಾ.ಪಂ.ಸದಸ್ಯ ಅರವಿಂದ ಪೂಜಾರಿ,ರಘರಾಮ ದೇವಾಡಿಗ ಆಲೂರು,ಕುಸುಮಾ ನಾಗರಾಜ ಪಡುಕೋಣೆ,ಡಾ.ರೋಹನ್ ಉಪಸ್ಥಿತರಿದ್ದರು.ನಾಗರಾಜ ಡಿ ಪಡುಕೋಣೆ ಸ್ವಾಗತಿಸಿದರು.ವೈಸ್ ಪ್ರಿನ್ಸಿಪಾಲ್ ರಾಮ ದೇವಾಡಿಗ ನಿರೂಪಿಸಿದರು.ಪುರುಷೋತ್ತಮ ದಾಸ್ ವಂದಿಸಿದರು.ನೂರಾರು ಜನರು ಆರೋಗ್ಯ ಶಿಬಿರಕ್ಕೆ ಆಗಮಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು,ಆರೋಗ್ಯ ಸಿಬ್ಬಂದಿಗಳು ಹಾಜರಿದ್ದರು.

Advertisement

Share
Team Kundapur Times

Recent Posts

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

3 weeks ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

4 weeks ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

1 month ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

2 months ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

2 months ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…

2 months ago