ಕುಂದಾಪುರ:ಬೈಂದೂರು ತಾಲೂಕಿನ ಪಡುಕೋಣೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್.ಜಿ ಫೌಂಡೇಶನ್, ಕುಂದಾಪುರ ಇವರ ವತಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ನಿವಾರಣಾ ವಿಭಾಗ) ಉಡುಪಿ ಪ್ರಾಥಮಿಕ ಆರೋಗ್ಯ ಕೇಂದ್ರ, ನಾಡ, ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮಂಗಳೂರು ಹಳೆ ವಿದ್ಯಾರ್ಥಿಗಳ ಸಂಘ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಪಡುಕೋಣೆ, ಶ್ರೀ ಮಹಾವಿಷ್ಣು ಫ್ರೆಂಡ್ಸ್ ಸರ್ಕಲ್, ಪಡುಕೋಣೆ ಫ್ರೆಂಡ್ಸ್ ಪಡುಕೋಣೆ, ವಿಶ್ವ ದೇವಾಡಿಗ ಮಹಾ ಮಂಡಲ ದೇವಾಡಿಗ ಅಕ್ಷಯ ಕಿರಣ ಸೇವಾ ಫೌಂಡೇಶನ್ ಪಡುಕೋಣೆ ಎಜುಕೇಶನ್ & ಸ್ಪೋಟ್ಸ್ ಪ್ರಮೋಟರ್ಸ್, ನಾಡ, ಜನ ಶಕ್ತಿ ಸೇವಾ ಟ್ರಸ್ಟ್ (ರಿ.), ನಾಡ ಇವರ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಭಾನುವಾರ ನಡೆಯಿತು.
ಉದ್ಯಮಿ ಡಾ.ವಿಜಯಕೃಷ್ಣ ಪಡುಕೋಣೆ ಅವರು ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ,ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಎಲ್ಲರಿಗೂ ಅಗತ್ಯವಾಗಿದ್ದು,ಕಾಲ ಕಾಲಕ್ಕೆ ಸೂಕ್ತವಾದ ತಪಾಸಣೆ ಮಾಡಿಕೊಂಡಾಗ ಮಾತ್ರ ಪ್ರಾಥಮಿಕ ಹಂತದಲ್ಲಿಯೇ ಆರೋಗ್ಯದ ಗುಣಲಕ್ಷಣಗಳನ್ನು ಪತ್ತೆ ಹಚ್ಚಬಹುದಾಗಿದೆ.ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಹೆಚ್ಚು ಶಿಬಿರಗಳನ್ನು ಆಯೋಜಿಸುದರಿಂದ ಜನರಿಗೆ ಅನುಕೂಲವಾಗಲಿದೆ ಎಂದರು.
ಎಲ್.ಜಿ ಫೌಂಡೇಶನ್ ಮ್ಯಾನೇಜಿಂಗ್ ಟ್ರಸ್ಟಿ ನಾಗರಾಜ ಡಿ ಪಡುಕೋಣೆ ಮಾತನಾಡಿ,ಸಾಮಾಜಿಕ,ಶೈಕ್ಷಣಿಕ ಕಾರ್ಯಗಳಿಗೆ ಹೆಚ್ಚಿನ ಒತ್ತನ್ನು ನೀಡುತ್ತಾ ಬರಲಾಗುತ್ತಿದ್ದು,ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ಇವೊಂದು ಆರೋಗ್ಯ ಶಿಬಿರ ಆಯೋಜನೆ ಮಾಡಲಾಗಿದೆ ಎಂದು ಹೇಳಿದರು.ಸಾಮಾಜಿಕ ಜಾಲತಾಣಗಳನ್ನು ಸದುಪಯೋಗ ಪಡಿಸಿಕೊಂಡು ಸಣ್ಣ ಸಣ್ಣ ವಾಟ್ಸ್ ಆ್ಯಪ್ ಗ್ರೂಪ್ ನಿಂದಲೂ ಜನ ಸೇವಾ ಕಾರ್ಯಗಳನ್ನು ಮಾಡಬಹುದಾಗಿದೆ ಎಂದು ಅಭಿಪ್ರಾಯಪಟ್ಟರು.
ಕುಂದಾಪುರ ತಾಲೂಕು ಆರೋಗ್ಯಧಿಕಾರಿ ಡಾ.ಪ್ರೇಮಾನಂದ ಮಾತನಾಡಿ,ಆಯುಷ್ಮಾನ್ ಕಾರ್ಡ್ ಮಹತ್ವ ಮತ್ತು ಆರೋಗ್ಯ ಶಿಬಿರದ ಕುರಿತು ಮಾಹಿತಿಯನ್ನು ನೀಡಿದರು.
ಈ ಸಂದರ್ಭದಲ್ಲಿ ಜನಶಕ್ತಿ ಸೇವಾ ಟ್ರಸ್ಟ್ ಫಿಲಿಪ್ ಡಿಸಿಲ್ವ,ನಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚಿಕ್ಮರಿ,ನಾಟಿ ವೈದ್ಯ ಮಾಕ್ಸಿಮ್ ಓಲವೇರಾ ಆನಗೋಡು ತ್ರಾಸಿ,ದೇವಾಡಿಗ ಅಕ್ಷಯ ಕಿರಣ ಸೇವಾ ಫೌಂಡೇಶನ್ ಸ್ಥಾಪಕ ಗಣೇಶ್ ಶೇರಿಗಾರ್ ಅವರನ್ನು ವಿಶೇಷವಾಗಿ ಸನ್ಮಾನಿಸಿ,ಗೌರವಿಸಲಾಯಿತು.
ಕುಂದಾಪುರ ಉಪವಿಭಾಗೀಯ ಸರಕಾರಿ ಆಸ್ಪತ್ರೆಯ ವೈದ್ಯಕೀಯ ತಜ್ಜ ಡಾ.ನಾಗೇಶ್,ದೇವಾಡಿಗ ಅಕ್ಷಯ ಕಿರಣ ಪೌಂಡೇಶನ್ ಎಂ.ಡಿ.ಮಧುಕರ ದೇವಾಡಿಗ,ದೇವಾಡಿಗ ವಿಶ್ವ ಮಹಾ ಮಂಡಲದ ಉಪಾಧ್ಯಕ್ಷ ಡಾ.ದೇವರಾಜ್ ಕೆ,ಪಡುಕೋಣೆ ಎಜುಕೇಶನ್ ಹಾಗೂ ಸ್ಪೋಟ್ರ್ಸ್ ಪ್ರಮೋಟರ್ಸ ನಾಡ ಅಧ್ಯಕ್ಷ ಡಾಲ್ಫಿ ಡಿಸಿಲ್ವ,ಪಡುಕೋಣೆ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದಿನೇಶ್ ಪೂಜಾರಿ,ಹಿರಿಯ ಸಂಶೋಧನಾ ವಿಜ್ಜಾನಿ ಪೂರ್ಣಿಮಾ ದಯಾನಂದ ದೇವಾಡಿಗ,ನಾಡ ಗ್ರಾ.ಪಂ.ಸದಸ್ಯ ಅರವಿಂದ ಪೂಜಾರಿ,ರಘರಾಮ ದೇವಾಡಿಗ ಆಲೂರು,ಕುಸುಮಾ ನಾಗರಾಜ ಪಡುಕೋಣೆ,ಡಾ.ರೋಹನ್ ಉಪಸ್ಥಿತರಿದ್ದರು.ನಾಗರಾಜ ಡಿ ಪಡುಕೋಣೆ ಸ್ವಾಗತಿಸಿದರು.ವೈಸ್ ಪ್ರಿನ್ಸಿಪಾಲ್ ರಾಮ ದೇವಾಡಿಗ ನಿರೂಪಿಸಿದರು.ಪುರುಷೋತ್ತಮ ದಾಸ್ ವಂದಿಸಿದರು.ನೂರಾರು ಜನರು ಆರೋಗ್ಯ ಶಿಬಿರಕ್ಕೆ ಆಗಮಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು,ಆರೋಗ್ಯ ಸಿಬ್ಬಂದಿಗಳು ಹಾಜರಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…