ಕುಂದಾಪುರ

ಸಮೃದ್ಧ ಬೈಂದೂರು-ಸಮರ್ಥ ಭಾರತ,ಬಿಜೆಪಿ ಕಾರ್ಯಕರ್ತರ ಸಮಾವೇಶ

Share

ಕುಂದಾಪುರ:ರಾಜಕಾರಣದಲ್ಲಿನ ನಡೆ ನುಡಿಯನ್ನು ಜನರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಹಾಗಾಗಿಯೇ ಇಂದು ರಾಜಕಾರಣ ಎನ್ನುವುದು ಒಳ್ಳೆ ದಿಕ್ಕಿನಲ್ಲಿ ಸಾಗುತ್ತಿದೆ ಎನ್ನುವುದಕ್ಕೆ ಜನಪ್ರಿಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಜೀ ಅವರನ್ನು ಟೀಕಿಸಿದ್ದರ ಪರಿಣಾಮ ಮಾಲ್ಡೀವ್ಸ್ ಸರಕಾರ ತನ್ನ ಮೂವರು ಕ್ಯಾಬಿನೆಟ್ ದರ್ಜೆಯ ಸಚಿವರನ್ನು ವಜಾ ಮಾಡಿರುವುದೆ ಸಾಕ್ಷಿ ಆಗಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂದಸ ಬಿ.ವೈ ರಾಘವೇಂದ್ರ ಹೇಳಿದರು.
ಬಿಜೆಪಿ ಬೈಂದೂರು ಮಂಡಲದ ವತಿಯಿಂದ ಹೆಮ್ಮಾಡಿ ಜಯಶ್ರೀ ಸಭಾಂಗಣದಲ್ಲಿ ಸೋಮವಾರ ನಡೆದ ಸಮೃದ್ಧ ಬೈಂದೂರು-ಸಮರ್ಥ ಭಾರತ ಹಾಗೂ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎರ್ಮಜೆನ್ಸಿ ಹೇರಿದ ಇಂದಿರಾ ಗಾಂಧಿ ಸರಕಾರ ಜನರನ್ನು ತಿರಸ್ಕಾರ ಮನೋಭಾವದಿಂದ ನೋಡಿದ್ದರ ಪರಿಣಾಮ ಕಾಂಗ್ರೆಸ್ ಪಕ್ಷ ದೇಶದಲ್ಲಿ ತನ್ನ ನೆಲೆಯನ್ನು ಕಳೆದುಕೊಂಡಿದೆ.ಭಾರತದಲ್ಲಿ ಇಂದು ಬದಲಾದ ರಾಜಕೀಯ ವ್ಯವಸ್ಥೆ ಸ್ಥಾಪನೆಗೊಂಡಿದ್ದು ದೇಶ ಅಭಿವೃದ್ಧಿ ಪಥಾದತ್ತ ಸಾಗುತ್ತಿದೆ ಎಂದರು.ಜನರ ಕಲ್ಯಾಣದ ಬಗ್ಗೆ ಅವಿರತವಾಗಿ ಶ್ರಮಿಸುತ್ತಿರುವ ಮೋದಿಜಿ ಸರಕಾರ ಮರಳಿ ತರಲು ಕಾರ್ಯಕರ್ತರು ಶ್ರಮವಹಿಸಬೇಕು ತಾನು ಸಂಸದ ಎನ್ನುವುದನ್ನು ಮರೆತು ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು.

ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಮಾತನಾಡಿ,ಸಮೃದ್ಧ ಬೈಂದೂರು ಯೋಜನೆಯಡಿ ಕ್ಷೇತ್ರವನ್ನು ಯಾವೆಲ್ಲಾ ರೀತಿಯಲ್ಲಿ ಅಭಿವೃದ್ಧಿಗೊಳಿಸಬಹುದು ಎನ್ನುವುದರ ಬಗ್ಗೆ ಈಗಾಗಲೇ ಕಾರ್ಯಯೋಜನೆಯನ್ನು ರೂಪಿಸಲಾಗಿದೆ.ವಿಶ್ವಕರ್ಮ ಯೋಜನೆ ಫಲಾನುಭವಿಗಳನ್ನು ಗುರುತಿಸಲು ಕಾರ್ಯಕರ್ತರು ಕ್ರಮ ಕೈಗೊಳ್ಳಬೇಕು ಎಂದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಅಧ್ಯಕ್ಷತೆ ವಹಿಸಿದ್ದರು,ಬೈಂದೂರು ಮಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ಜಿಲ್ಲಾ ಕಾರ್ಯದರ್ಶಿ ಮಾಲತಿ ಬಿ ನಾಯ್ಕ್,ಉಪಾಧ್ಯಕ್ಷರಾದ ಸಾಮ್ರಾಟ್ ಶೆಟ್ಟಿ,ಶೇಖರ ಖಾರ್ವಿ,ಶ್ಯಾಮಲ ಕುಂದರ್,ಪ್ರೇಮಾ ಪೂಜಾರಿ,ಗಣೇಶ ಗಾಣಿಗ,ವಿನೋಧ ಭಂಡಾರಿ,ಕಾರ್ಯದರ್ಶಿಗಳಾದ ಎಮ್.ಆರ್ ಶೆಟ್ಟಿ,ಶೇಖರ ಕುಲಾಲ್,ಮಾಲಿನಿ.ಕೆ,ಶ್ಯಾಮಲ ನೇರಳಕಟ್ಟೆ,ವಾಸು ಮರಾಠಿ,ಗಣೇಶ್ ಪೂಜಾರಿ,ಅಶೋಕ,ಭಾಗಿರಥಿ,ಅನುರ ಮೆಂಡನ್,ಚೆಂದು ಜೋಗಿ,ಚಂದ್ರ ಉಪಸ್ಥಿತರಿದ್ದರು.ಮಹೇಂದ್ರ ಪೂಜಾರಿ ಸ್ವಾಗತಿಸಿದರು.ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ನಿರೂಪಿಸಿದರು.ಬಿ.ಎಸ್ ಸುರೇಶ ಶೆಟ್ಟಿ ವಂದಿಸಿದರು.ಪಂಚಾಯತ್ ಅಧ್ಯಕ್ಷರು,ಉಪಾಧ್ಯಕ್ಷರು,ಪ್ರಮುಖ ಮುಂಖಡರುಗಳು,ಕಾರ್ಯಕರ್ತರು ಭಾಗವಹಿಸಿದ್ದರು.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

4 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

4 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

5 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

5 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago