ಕುಂದಾಪುರ

ಸಮೃದ್ಧ ಬೈಂದೂರು-ಸಮರ್ಥ ಭಾರತ,ಬಿಜೆಪಿ ಕಾರ್ಯಕರ್ತರ ಸಮಾವೇಶ

Share

ಕುಂದಾಪುರ:ರಾಜಕಾರಣದಲ್ಲಿನ ನಡೆ ನುಡಿಯನ್ನು ಜನರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಹಾಗಾಗಿಯೇ ಇಂದು ರಾಜಕಾರಣ ಎನ್ನುವುದು ಒಳ್ಳೆ ದಿಕ್ಕಿನಲ್ಲಿ ಸಾಗುತ್ತಿದೆ ಎನ್ನುವುದಕ್ಕೆ ಜನಪ್ರಿಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಜೀ ಅವರನ್ನು ಟೀಕಿಸಿದ್ದರ ಪರಿಣಾಮ ಮಾಲ್ಡೀವ್ಸ್ ಸರಕಾರ ತನ್ನ ಮೂವರು ಕ್ಯಾಬಿನೆಟ್ ದರ್ಜೆಯ ಸಚಿವರನ್ನು ವಜಾ ಮಾಡಿರುವುದೆ ಸಾಕ್ಷಿ ಆಗಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂದಸ ಬಿ.ವೈ ರಾಘವೇಂದ್ರ ಹೇಳಿದರು.
ಬಿಜೆಪಿ ಬೈಂದೂರು ಮಂಡಲದ ವತಿಯಿಂದ ಹೆಮ್ಮಾಡಿ ಜಯಶ್ರೀ ಸಭಾಂಗಣದಲ್ಲಿ ಸೋಮವಾರ ನಡೆದ ಸಮೃದ್ಧ ಬೈಂದೂರು-ಸಮರ್ಥ ಭಾರತ ಹಾಗೂ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎರ್ಮಜೆನ್ಸಿ ಹೇರಿದ ಇಂದಿರಾ ಗಾಂಧಿ ಸರಕಾರ ಜನರನ್ನು ತಿರಸ್ಕಾರ ಮನೋಭಾವದಿಂದ ನೋಡಿದ್ದರ ಪರಿಣಾಮ ಕಾಂಗ್ರೆಸ್ ಪಕ್ಷ ದೇಶದಲ್ಲಿ ತನ್ನ ನೆಲೆಯನ್ನು ಕಳೆದುಕೊಂಡಿದೆ.ಭಾರತದಲ್ಲಿ ಇಂದು ಬದಲಾದ ರಾಜಕೀಯ ವ್ಯವಸ್ಥೆ ಸ್ಥಾಪನೆಗೊಂಡಿದ್ದು ದೇಶ ಅಭಿವೃದ್ಧಿ ಪಥಾದತ್ತ ಸಾಗುತ್ತಿದೆ ಎಂದರು.ಜನರ ಕಲ್ಯಾಣದ ಬಗ್ಗೆ ಅವಿರತವಾಗಿ ಶ್ರಮಿಸುತ್ತಿರುವ ಮೋದಿಜಿ ಸರಕಾರ ಮರಳಿ ತರಲು ಕಾರ್ಯಕರ್ತರು ಶ್ರಮವಹಿಸಬೇಕು ತಾನು ಸಂಸದ ಎನ್ನುವುದನ್ನು ಮರೆತು ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು.

ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಮಾತನಾಡಿ,ಸಮೃದ್ಧ ಬೈಂದೂರು ಯೋಜನೆಯಡಿ ಕ್ಷೇತ್ರವನ್ನು ಯಾವೆಲ್ಲಾ ರೀತಿಯಲ್ಲಿ ಅಭಿವೃದ್ಧಿಗೊಳಿಸಬಹುದು ಎನ್ನುವುದರ ಬಗ್ಗೆ ಈಗಾಗಲೇ ಕಾರ್ಯಯೋಜನೆಯನ್ನು ರೂಪಿಸಲಾಗಿದೆ.ವಿಶ್ವಕರ್ಮ ಯೋಜನೆ ಫಲಾನುಭವಿಗಳನ್ನು ಗುರುತಿಸಲು ಕಾರ್ಯಕರ್ತರು ಕ್ರಮ ಕೈಗೊಳ್ಳಬೇಕು ಎಂದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಅಧ್ಯಕ್ಷತೆ ವಹಿಸಿದ್ದರು,ಬೈಂದೂರು ಮಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ಜಿಲ್ಲಾ ಕಾರ್ಯದರ್ಶಿ ಮಾಲತಿ ಬಿ ನಾಯ್ಕ್,ಉಪಾಧ್ಯಕ್ಷರಾದ ಸಾಮ್ರಾಟ್ ಶೆಟ್ಟಿ,ಶೇಖರ ಖಾರ್ವಿ,ಶ್ಯಾಮಲ ಕುಂದರ್,ಪ್ರೇಮಾ ಪೂಜಾರಿ,ಗಣೇಶ ಗಾಣಿಗ,ವಿನೋಧ ಭಂಡಾರಿ,ಕಾರ್ಯದರ್ಶಿಗಳಾದ ಎಮ್.ಆರ್ ಶೆಟ್ಟಿ,ಶೇಖರ ಕುಲಾಲ್,ಮಾಲಿನಿ.ಕೆ,ಶ್ಯಾಮಲ ನೇರಳಕಟ್ಟೆ,ವಾಸು ಮರಾಠಿ,ಗಣೇಶ್ ಪೂಜಾರಿ,ಅಶೋಕ,ಭಾಗಿರಥಿ,ಅನುರ ಮೆಂಡನ್,ಚೆಂದು ಜೋಗಿ,ಚಂದ್ರ ಉಪಸ್ಥಿತರಿದ್ದರು.ಮಹೇಂದ್ರ ಪೂಜಾರಿ ಸ್ವಾಗತಿಸಿದರು.ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ನಿರೂಪಿಸಿದರು.ಬಿ.ಎಸ್ ಸುರೇಶ ಶೆಟ್ಟಿ ವಂದಿಸಿದರು.ಪಂಚಾಯತ್ ಅಧ್ಯಕ್ಷರು,ಉಪಾಧ್ಯಕ್ಷರು,ಪ್ರಮುಖ ಮುಂಖಡರುಗಳು,ಕಾರ್ಯಕರ್ತರು ಭಾಗವಹಿಸಿದ್ದರು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

4 days ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 days ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 weeks ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

4 weeks ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago