ಕುಂದಾಪುರ:ಸಿಎ/ಸಿಎಸ್ ಪ್ರೊಫೆಷನಲ್ ಕೋರ್ಸ್ ಗಳಿಗೆ ಗುಣಮಟ್ಟದ ತರಬೇತಿ ನೀಡುವುದರಲ್ಲಿ ಮುಂಚೂಣಿಯಲ್ಲಿರುವ ಕುಂದಾಪುರದ ಕುಂದೇಶ್ವರ ದೇವಸ್ಥಾನ ರಸ್ತೆಯ ಸಿರಿ ಬಿಲ್ಡಿಂಗ್ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೆಸರಾಂತ ಸಂಸ್ಥೆ ಶಿಕ್ಷ ಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜ್ಯುಕೇಶನ್ (ಸ್ಪೇಸ್) ನ ವಿದ್ಯಾರ್ಥಿಗಳು ಇನ್ಸ್ಟಿಟೂಟ್ ಆಫ್ ಚಾರ್ಟಡ್ ಅಕೌಂಟೆಂಟ್ಸ್ ಆಫ್ ಇಂಡಿಯ ನವೆಂಬರ್ 2023ರಲ್ಲಿ ನೆಡೆಸಿದ ಸಿಎ ಫೈನಲ್ ಮತ್ತ ಸಿಎ ಇಂಟರ್ಮೀಡಿಯೆಟ್ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳೊಂದಿಗೆ ತೇರ್ಗಡೆ ಹೊಂದುವುದರ ಮೂಲಕ ಸಾಧನೆಗೈದಿದ್ದಾರೆ.
ಸಂಸ್ಥೆಯ ವಿದ್ಯಾರ್ಥಿಯಾದ ಷಣ್ಮುಖ ಕೆ. ಎಸ್.(256)ಸಿಎ ಅಂತಿಮ ಪರೀಕ್ಷೆಯನ್ನು ತೇರ್ಗಡೆ ಹೊಂದುವುದರ ಮೂಲಕ ಲೆಕ್ಕ ಪರಿಶೋಧಕರಾಗಿ ಹೊರ ಹೊಮ್ಮಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಯಾದ ಧನುಷ್ 518 ಅಂಕ ಗಳೊಂದಿಗೆ ಸಿಎ ಇಂಟರ್ಮೀಡಿಯಟ್ ಎರಡು ಹಂತದ ಪರೀಕ್ಷೆಯನ್ನು ಮೊದಲ ಪ್ರಯತ್ನದಲ್ಲೇ ತೇರ್ಗಡೆ ಹೊಂದುವುದರ ಮೂಲಕ ಸಂಸ್ಥೆಗೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ.
ಆಯೆಷಾ ತುಬಾ(260), ವೈಷ್ಣವಿ ಶೆಟ್ಟಿ (249), ಅಮೃತ (234),ಕೆ.ಆರ್.ದೀಕ್ಷಾ (228)ಅಂಕ ಗಳೊಂದಿಗೆ ಸಿಎ ಇಂಟರ್ಮೀಡಿಯೆಟ್ ದ್ವಿತೀಯ ಗ್ರೂಪ್ ಪರೀಕ್ಷೆಯನ್ನು ತೇರ್ಗಡೆ ಹೊಂದುದರ ಮೂಲಕ ಸಿಎ ಅಂತಿಮ ಹಂತಕ್ಕೆ ಪ್ರವೇಶಪಡೆದಿದ್ದಾರೆ.ಶೃದ್ಧಾ ಬಿ. ಸಾಲ್ಯಾನ್(270),ಪಂಚಮಿ ಕಿಣಿ (261),ರಕ್ಷಿತಾ (235), ಸುದೀಪ್ರಾಜ್(227),ಕಿಶನ್ ಅಡಿಗ (216), ವೈಷ್ಣವಿ ವಿ. ಮೊಪಗಾರ್ (216), ರೋಹಿತ್ ಆಚಾರ್ಯ(210), ಸುಶ್ಮಿತಾ ಉದಯ್ ಪೂಜಾರಿ (203), ಮತ್ತು ಶ್ರೀಜಿತ್(200) ಅಂಕಗಳೊಂದಿಗೆ ಸಿಎ ಇಂಟರ್ಮೀಡಿಯಟ್ ಮೋದಲ ಗ್ರೂಪ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಶಿಕ್ಷ ಪ್ರಭ ಅಕಾಡೆಮಿಯು ಕಳೆದ ಕೆಲವು ವರ್ಷಗಳಿಂದ ಸಿಎ ಮತ್ತು ಸಿಎ ಪ್ರೊಫೆಷನಲ್ ಕೋರ್ಸ್ ಗಳಿಗೆ
ಗುಣ ಮಟ್ಟದ ತರಬೇತಿ ನೀಡುತ್ತಾ ಬಂದಿದ್ದು ಅನೇಕ ವಿದ್ಯಾರ್ಥಿಗಳು ಸಿಎ/ಸಿಎಸ್ ಎಲ್ಲಾ ಹಂತದ ಪರೀಕ್ಷೆಯಲ್ಲೂ ಉತ್ತೀರ್ಣರಾಗಿ ದೇಶದ ನಾನಾ ಭಾಗಗಳಲ್ಲಿ ಉದ್ಯೋಗದಲ್ಲಿದ್ದಾರೆ.
ಸಂಸ್ಥೆಯಲ್ಲಿ ಬೋಧಕ ಸಿಬ್ಬಂದಿ ಗಳಾಗಿ ಆಗಮಿಸುವ ಅನುಭವಿ ಲೆಕ್ಕಪರಿಶೋಧಕರು,ತರಬೇತು ದಾರರು, ವಿದ್ಯಾರ್ಥಿಗಳಿಗೆ ಗುಣಮಟ್ಟದ ತರಬೇತಿ ನೀಡುವುದರ ಪರಿಣಾಮ ಪ್ರತಿಬ್ಯಾಚ್ನಲ್ಲಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಯಿತು. ಬೋಧಕ ಸಿಬ್ಬಂಧಿವರ್ಗದವರಿಗೂ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸ್ಥೆಯ ಮುಖ್ಯಸ್ಥರಾದ ಪ್ರತಾಪ್ಚಂದ್ರಶೆಟ್ಟಿ ಮತ್ತು ಭರತ್ ಶೆಟ್ಟಿಯವರು ಅಭಿನಂದಿಸಿದ್ದಾರೆ.
“ದೇವರ ಅನುಗ್ರಹ, ತಂದೆ ತಾಯಿಯ ನಿರಂತರ ಪ್ರೋತ್ಸಾಹ, ಕಠಿಣ ಪರಿಶ್ರಮದಿಂದ ಈ ಸಾಧನೆ ಮಾಡಲು ಸಾಧ್ಯವಾಗಿದೆ. ಜೀವನದಲ್ಲಿ ಗುರಿ ಹಾಗೂ ಅದನ್ನು ಸಾಧಿಸುವ ಛಲ ಇದ್ದರೆ ಯಶಸ್ಸು ತಾನಾಗಿಯೇ ಒಲಿಯುತ್ತದೆ.”
ಸಿಎಅಂತಿಮ ಪರೀಕ್ಷೆಉತ್ತೀರ್ಣವಿದ್ಯಾರ್ಥಿ
ಷಣ್ಮುಖ ಕೆ. ಎಸ್.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…