ಕುಂದಾಪುರ

ಶಿಕ್ಷ ಪ್ರಭ ಅಕಾಡೆಮಿ ಕುಂದಾಪುರ:ಸಿಎ ಫಲಿತಾಂಶದಲ್ಲಿ ಶ್ರೇಷ್ಠಸಾಧನೆ

Share

ಕುಂದಾಪುರ:ಸಿಎ/ಸಿಎಸ್ ಪ್ರೊಫೆಷನಲ್ ಕೋರ್ಸ್ ಗಳಿಗೆ ಗುಣಮಟ್ಟದ ತರಬೇತಿ ನೀಡುವುದರಲ್ಲಿ ಮುಂಚೂಣಿಯಲ್ಲಿರುವ ಕುಂದಾಪುರದ ಕುಂದೇಶ್ವರ ದೇವಸ್ಥಾನ ರಸ್ತೆಯ ಸಿರಿ ಬಿಲ್ಡಿಂಗ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೆಸರಾಂತ ಸಂಸ್ಥೆ ಶಿಕ್ಷ ಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜ್ಯುಕೇಶನ್ (ಸ್ಪೇಸ್) ನ ವಿದ್ಯಾರ್ಥಿಗಳು ಇನ್ಸ್ಟಿಟೂಟ್ ಆಫ್ ಚಾರ್ಟಡ್ ಅಕೌಂಟೆಂಟ್ಸ್ ಆಫ್ ಇಂಡಿಯ ನವೆಂಬರ್ 2023ರಲ್ಲಿ ನೆಡೆಸಿದ ಸಿಎ ಫೈನಲ್ ಮತ್ತ ಸಿಎ ಇಂಟರ್ಮೀಡಿಯೆಟ್ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳೊಂದಿಗೆ ತೇರ್ಗಡೆ ಹೊಂದುವುದರ ಮೂಲಕ ಸಾಧನೆಗೈದಿದ್ದಾರೆ.

ಸಂಸ್ಥೆಯ ವಿದ್ಯಾರ್ಥಿಯಾದ ಷಣ್ಮುಖ ಕೆ. ಎಸ್.(256)ಸಿಎ ಅಂತಿಮ ಪರೀಕ್ಷೆಯನ್ನು ತೇರ್ಗಡೆ ಹೊಂದುವುದರ ಮೂಲಕ ಲೆಕ್ಕ ಪರಿಶೋಧಕರಾಗಿ ಹೊರ ಹೊಮ್ಮಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಯಾದ ಧನುಷ್ 518 ಅಂಕ ಗಳೊಂದಿಗೆ ಸಿಎ ಇಂಟರ್ಮೀಡಿಯಟ್ ಎರಡು ಹಂತದ ಪರೀಕ್ಷೆಯನ್ನು ಮೊದಲ ಪ್ರಯತ್ನದಲ್ಲೇ ತೇರ್ಗಡೆ ಹೊಂದುವುದರ ಮೂಲಕ ಸಂಸ್ಥೆಗೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ.
ಆಯೆಷಾ ತುಬಾ(260), ವೈಷ್ಣವಿ ಶೆಟ್ಟಿ (249), ಅಮೃತ (234),ಕೆ.ಆರ್.‌ದೀಕ್ಷಾ (228)ಅಂಕ ಗಳೊಂದಿಗೆ ಸಿಎ ಇಂಟರ್ಮೀಡಿಯೆಟ್ ದ್ವಿತೀಯ ಗ್ರೂಪ್ ಪರೀಕ್ಷೆಯನ್ನು ತೇರ್ಗಡೆ ಹೊಂದುದರ ಮೂಲಕ ಸಿಎ ಅಂತಿಮ ಹಂತಕ್ಕೆ ಪ್ರವೇಶಪಡೆದಿದ್ದಾರೆ.ಶೃದ್ಧಾ ಬಿ. ಸಾಲ್ಯಾನ್(270)‌,ಪಂಚಮಿ ಕಿಣಿ (261),ರಕ್ಷಿತಾ (235), ಸುದೀಪ್‌ರಾಜ್(227)‌,ಕಿಶನ್‌ ಅಡಿಗ (216), ವೈಷ್ಣವಿ ವಿ. ಮೊಪಗಾರ್‌ (216), ರೋಹಿತ್‌ ಆಚಾರ್ಯ(210), ಸುಶ್ಮಿತಾ ಉದಯ್‌ ಪೂಜಾರಿ (203), ಮತ್ತು ಶ್ರೀಜಿತ್(200) ಅಂಕಗಳೊಂದಿಗೆ ಸಿಎ ಇಂಟರ್ಮೀಡಿಯಟ್ ಮೋದಲ ಗ್ರೂಪ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಶಿಕ್ಷ ಪ್ರಭ ಅಕಾಡೆಮಿಯು ಕಳೆದ ಕೆಲವು ವರ್ಷಗಳಿಂದ ಸಿಎ ಮತ್ತು ಸಿಎ ಪ್ರೊಫೆಷನಲ್ ಕೋರ್ಸ್ ಗಳಿಗೆ
ಗುಣ ಮಟ್ಟದ ತರಬೇತಿ ನೀಡುತ್ತಾ ಬಂದಿದ್ದು ಅನೇಕ ವಿದ್ಯಾರ್ಥಿಗಳು ಸಿಎ/ಸಿಎಸ್ ಎಲ್ಲಾ ಹಂತದ ಪರೀಕ್ಷೆಯಲ್ಲೂ ಉತ್ತೀರ್ಣರಾಗಿ ದೇಶದ ನಾನಾ ಭಾಗಗಳಲ್ಲಿ ಉದ್ಯೋಗದಲ್ಲಿದ್ದಾರೆ.
ಸಂಸ್ಥೆಯಲ್ಲಿ ಬೋಧಕ ಸಿಬ್ಬಂದಿ ಗಳಾಗಿ ಆಗಮಿಸುವ ಅನುಭವಿ ಲೆಕ್ಕಪರಿಶೋಧಕರು,ತರಬೇತು ದಾರರು, ವಿದ್ಯಾರ್ಥಿಗಳಿಗೆ ಗುಣಮಟ್ಟದ ತರಬೇತಿ ನೀಡುವುದರ ಪರಿಣಾಮ ಪ್ರತಿಬ್ಯಾಚ್‌ನಲ್ಲಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಯಿತು. ಬೋಧಕ ಸಿಬ್ಬಂಧಿವರ್ಗದವರಿಗೂ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸ್ಥೆಯ ಮುಖ್ಯಸ್ಥರಾದ ಪ್ರತಾಪ್‌ಚಂದ್ರಶೆಟ್ಟಿ ಮತ್ತು ಭರತ್ ಶೆಟ್ಟಿಯವರು ಅಭಿನಂದಿಸಿದ್ದಾರೆ.

“ದೇವರ ಅನುಗ್ರಹ, ತಂದೆ ತಾಯಿಯ ನಿರಂತರ ಪ್ರೋತ್ಸಾಹ, ಕಠಿಣ ಪರಿಶ್ರಮದಿಂದ ಈ ಸಾಧನೆ ಮಾಡಲು ಸಾಧ್ಯವಾಗಿದೆ. ಜೀವನದಲ್ಲಿ ಗುರಿ ಹಾಗೂ ಅದನ್ನು ಸಾಧಿಸುವ ಛಲ ಇದ್ದರೆ ಯಶಸ್ಸು ತಾನಾಗಿಯೇ ಒಲಿಯುತ್ತದೆ.”

                        ಸಿಎಅಂತಿಮ ಪರೀಕ್ಷೆಉತ್ತೀರ್ಣವಿದ್ಯಾರ್ಥಿ
                                    ಷಣ್ಮುಖ ಕೆ. ಎಸ್.
Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

4 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

4 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago