ಕುಂದಾಪುರ

ಹುಂತಗೋಳಿ ಅಮಾವಾಸ್ಯೆ ಜಾತ್ರಾ ಮಹೋತ್ಸವ

Share

Advertisement
Advertisement

ಕುಂದಾಪುರ:ಬೈಂದೂರು ತಾಲೂಕಿನ ಹೇರೂರು ಗ್ರಾಮದ ಹುಂತನಗೋಳಿ ಶ್ರೀದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಎಳ್ಳಮಾವಾಸ್ಯೆ ಜಾತ್ರಾ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸಂಪ್ರದಾಯ ಬದ್ಧವಾಗಿ ಗುರುವಾರ ವಿಜೃಂಭಣೆಯಿಂದ ನಡೆಯಿತು.
ಎಳ್ಳಮಾವಾಸ್ಯೆ ಜಾತ್ರಾ ಮಹೋತ್ಸವ ಅಂಗವಾಗಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರಿಗೆ ಮಂಗಳಾರತಿ ಸೇವೆ,ಹುತ್ತಕ್ಕೆ ಹೂ ಸುತ್ತುವ ಸೇವೆ,ತುಲಾಭಾರ ಸೇವೆ,ಮುತ್ತೈದೆಯರ ಆರಾಧನೆ,ಸುತ್ತಕ್ಕಿ ಸೇವೆ ಹಾಗೂ ಮಗುವಿನ ತೊಟ್ಟಿಲು ಸೇವೆ,ಸಾರ್ವಜನಿಕ ಅನ್ನ ಸಂತರ್ಪಣೆ ಸೇವೆ ಜರುಗಿತು.ಸಾವಿರಾರು ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಶ್ರೀದೇವಿಯ ಪ್ರಸಾದವನ್ನು ಸ್ವೀಕರಿಸಿದರು.

Advertisement

ದೇವಸ್ಥಾನದ ಪ್ರಧಾನ ಅರ್ಚಕರಾದ ಮಂಜುನಾಥ ಹೆಬ್ಬಾರ್ ಮಾತನಾಡಿ,ನೂರಾರು ವರ್ಷಗಳ ಇತಿಹಾಸವನ್ನು ಹೊಂದಿರುವ ಹುಂತಗೋಳಿ ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಕಾರಣಿಕ ಶಕ್ತಿ ಅಪಾರವಾದ್ದದು.ಚರ್ಮ ರೋಗ,ಸಂತಾನ ಇಲ್ಲದವರಿಗೆ ಸಂತಾನ ಭಾಗ್ಯವನ್ನು ಕರುಣಿಸುವ ಸಹೃದಯಿವುಳ್ಳವಳು.ಏಳ್ಳಮಾವಾಸ್ಯೆ ಜಾತ್ರೆಯನ್ನು ಅಮ್ಮನವರ ಸನ್ನಿಧಾನದಲ್ಲಿ ವಿಶೇಷವಾದ ರೀತಿಯಲ್ಲಿ ಆಚರಿಸಲಾಗುತ್ತಿದೆ.ಕಷ್ಟಕಾಲದಲ್ಲಿ ಹೇಳಿಕೊಂಡಿರುವ ಹರಕೆಯನ್ನು ಭಕ್ತರು ಜಾತ್ರೆ ಸಮಯದಲ್ಲಿ ಸಮರ್ಪಿಸಿ ಹೋಗುತ್ತಾರೆ ಎಂದು ಹೇಳಿದರು.ಭಕ್ತಿಯಿಂದ ಬೇಡಿದರೆ ಭಕ್ತರ ಬೇಡಿಕೆಯನ್ನು ತಾಯಿ ಈಡೇರಿಕೆ ಮಾಡುತ್ತಾಳೆ ಎಂದರು.

ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುರೇಶ್ ನಾಯ್ಕ್ ಮಾತನಾಡಿ,ಬಹಳಷ್ಟು ಹಳೆಯದಾದ ಕಟ್ಟಡವನ್ನು ಹೊಂದಿರುವ ದೇವಸ್ಥಾನವನ್ನು ಇತ್ತೀಚಿಗೆ ಸುಮಾರು 80 ಲಕ್ಷ.ರೂ ಅನುದಾನದಲ್ಲಿ ಅಭಿವೃದ್ಧಿಗೊಳಿಸಲಾಗಿದೆ.ಕಾಂಡಚಿನಲ್ಲಿರುವ ದೇವಾಲಯದ ಸಂಪರ್ಕ ರಸ್ತೆ ಮಣ್ಣಿನಿಂದ ಕೂಡಿದೆ,ಸೌಪರ್ಣಿಕಾ ನದಿ ತೀರ ದಡವೂ ಶಿಥಿಲಗೊಂಡಿದೆ,ಆವರಣದ ಗೋಡೆ ನಿರ್ಮಾಣ,ಸಭಾಭವನ ನಿರ್ಮಾಣ ಸೇರಿದಂತೆ ಹಲವಾರು ಕಾಮಗಾರಿಗಳು ಬಾಕಿ ಇದ್ದು ದೇವಸ್ಥಾನವನ್ನು ಅಭಿವೃದ್ಧಿಗೊಳಿಸಲು ಜನಪ್ರತಿನಿಧಿಗಳು,ದಾನಿಗಳು,ಭಕ್ತರು ಮುಂದೆ ಬರಬೇಕು ಎಂದು ವಿನಂತಿಸಿಕೊಂಡರು.

ಶಾಂತರಾಮ ಶೆಟ್ಟಿ ಮಾತನಾಡಿ,ಎಳ್ಳಮಾವಾಸ್ಯೆ ದಿನದಂದು ದೇವಾಲಯದಲ್ಲಿ ವಿಶೇಷವಾದ ಪೂಜೆ ಪುರಸ್ಕಾರಗಳು ನೆರವೇರುತ್ತದೆ.ಮಕರ ಸಂಕ್ರಮಣದಲ್ಲಿ ವಿಶೇಷ ಪೂಜೆ,ದೀಪದ ಅಮಾವಾಸ್ಯೆ ದಿನವು ಕೂಡ ಪೂಜೆ ನಡೆಯುತ್ತದೆ ಎಂದರು.ಕಷ್ಟ ಬಂದಾಗ ದೇವಿ ಬಳಿಯಲ್ಲಿ ಬೇಡಿದರೆ ಸುಖವನ್ನು ತಾಯಿ ನೀಡುತ್ತಾಳೆ.ದಿವ್ಯ ಶಕ್ತಿಯನ್ನು ಹೊಂದಿರುವ ಹುಂತನಗೋಳಿ ದುರ್ಗಾಪರಮೇಶ್ವರಿ ಅಮ್ಮನವರ ಕಾರಣಿಕ ಶಕ್ತಿಯನ್ನು ವರ್ಣಿಸಲು,ವಿವರಿಸಲು ಅಸಾಧ್ಯವಾದದು ಎಂದರು.

ಸ್ಥಳೀಯರಾದ ಶಂಕರ ಗೌಡ ಮಾತನಾಡಿ,ಎಳ್ಳಮಾವಾಸ್ಯೆ ದಿನ 10 ರಿಂದ 12 ಸಾವಿರ ಜನ ಸೇರುತ್ತಾರೆ,ಅನ್ನದಾನ ಸೇವೆ,ತುಲಾಭಾರ ಸೇವೆ,ಸುತ್ತಕ್ಕಿ ಸೇವೆ,ಮಂಗಳಾರತಿ ಸೇವೆ ಜರುತ್ತದೆ.ದೇವಾಲಯಕ್ಕೆ ಸರಿಯಾದ ಸಂಪರ್ಕ ರಸ್ತೆ ವ್ಯವಸ್ಥೆ ಕೂಡ.ಬಹಳಷ್ಟು ಇತಿಹಾಸ ಮತ್ತು ಹಿನ್ನೆಲೆಯನ್ನು ಹೊಂದಿರುವ ದೇವಾಲವನ್ನು ಅಭಿವೃದ್ಧಿಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.ಸಿಂಗಧೂರು,ಕೊಲ್ಲೂರು ದೇವಸ್ಥಾನದ ಮಾದರಿಯಲ್ಲಿ ದೇವಾಲಯವನ್ನು ಅಭಿವೃದ್ಧಿಗೊಳಿಸಿದರೆ ಭಕ್ತರ ಸಂಖ್ಯೆ ವೃದ್ಧಿ ಆಗವುದರ ಜತೆಗೆ ಊರಿನ ಅಭಿವೃದ್ಧಿ ಕೂಡ ಆಗುತ್ತದೆ ಎಂದರು.
ಈ ಸಂದರ್ಭದಲ್ಲಿ ಅರ್ಚಕರಾದ ಶ್ರೀಕಾಂತ ಹೆಬ್ಬಾರ್, ದೇವಯ್ಯ ನಾಯ್ಕ್,ಶಂಕರ ಗೌಡ,ಕುಪ್ಪಯ್ಯ ಪೂಜಾರಿ,ರಾಮ ನಾಯ್ಕ್,ಗ್ರಾಮಸ್ಥರು ಉಪಸ್ಥಿತರಿದ್ದರು.ಚಂಪ ಷಷ್ಠಿ ಮಹೋತ್ಸವ ದಿನದಂದು ಅಮ್ಮನವರ ಸನ್ನಿಧಾನದಲ್ಲಿ ಷಷ್ಠಿ ಸೇವೆ ನಡೆಯುವುದು ಇಲ್ಲಿನ ವಿಶೇಷವಾಗಿದೆ.

Advertisement
Advertisement

Share
Team Kundapur Times

Recent Posts

ಕಿರಿಮಂಜೇಶ್ವರ ಶ್ರೀ ಅಗಸ್ತೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಉತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…

14 hours ago

ಶ್ರೀ ಪ್ರಸನ್ನ ಗಣಪತಿ ದೇವಸ್ಥಾನ ಉಪ್ಕಲ್‍ಮಠ ನಾಡ:ಗಣೇಶೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…

14 hours ago

ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ:ಹಲವು ದ್ವಿಚಕ್ರ ವಾಹನಗಳು ಪಲ್ಟಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…

15 hours ago

ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ

ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…

19 hours ago

ತಿಮಿಂಗಿಲ ಮೀನಿನ ಕಳೆಬರ ಪತ್ತೆ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್‍ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…

3 days ago

ವಲಯ ಅರಣ್ಯಾಧಿಕಾರಿ ಸವಿತಾ ಆರ್ ದೇವಾಡಿಗಗೆ ಮುಖ್ಯಮಂತ್ರಿ ಪದಕ

ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…

4 days ago