ಕುಂದಾಪುರ:ಬೈಂದೂರು ತಾಲೂಕಿನ ನಾವುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಕಿರಿಯ ಪ್ರಾಥಮಿಕ ಕೋಯಾನಗರ ಶಾಲೆಯನ್ನು ಕಳೆದ ಎಂಟು ವರ್ಷಗಳಿಂದ ದತ್ತು ತೆಗೆದು ಕೊಂಡು ಬಡ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹವನ್ನು ನೀಡುತ್ತಿರುವ ಕನಕ ಗ್ರೂಪ್ ಜಗದೀಶ್ ಶೆಟ್ಟಿ ಕುದ್ರುಕೋಡು ಅವರನ್ನು ಜ.13 ರಂದು ಶಾಲೆಯಲ್ಲಿ ನಡೆಯಲಿರುವ ಸುವರ್ಣ ಮಹೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಮತ್ತು ಶಾಲಾ ಮಕ್ಕಳ ಪೋಷಕ ವೃಂದದವರ ವತಿಯಿಂದ ವಿದ್ಯಾ ಪೋಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಿದ್ದಾರೆ.
ಸರಕಾರಿ ಶಾಲೆಯನ್ನು ದತ್ತು ಸ್ವೀಕಾರ ಮಾಡಿದ ಉದ್ಯಮಿ:ನಾವುಂದ 5.ಸೆಂಟ್ಸ್ ಕಾಲೋನಿಯಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಕೋಯಾನರ ಶಾಲೆಯಲ್ಲಿ 5ನೇ ತರಗತಿ ವರೆಗೆ ವಿದ್ಯಾಭ್ಯಾಸವನ್ನು ನೀಡಲಾಗುತ್ತಿದ್ದು ಪ್ರಸ್ತುತ 57 ವಿದ್ಯಾರ್ಥಿಗಳು ಓದುತ್ತಿದ್ದಾರೆ.ಕಾಲೋನಿಯ ಮಕ್ಕಳೆ ಹೆಚ್ಚಾಗಿ ಬರುವ ಕೋಯಾನಗರ ಶಾಲೆಯನ್ನು ಕನಕ ಗ್ರೂಪ್ ಉದ್ಯಮಿ ಜಗದೀಶ್ ಶೆಟ್ಟಿ ಕುದ್ರಕೋಡು ಅವರು ಕಳೆದ ಎಂಟು ವರ್ಷಗಳ ಹಿಂದೆಯೇ ದತ್ತು ಸ್ವೀಕಾರ ಮಾಡಿ ಶಾಲೆಗೆ ಮೂಲ ಭೂತ ಸೌಕರ್ಯಗಳನ್ನು ಒದಗಿಸುವುದರ ಮುಖೇನ ಅತಿಥಿ ಶಿಕ್ಷಕರ ಸಂಬಳ,ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಿಕ್ಷಾ ವ್ಯವಸ್ಥೆ ಸಹಿತ ತಿಂಗಳಿಗೆ 20,000.ರೂ ಅನ್ನು ವಿನಿಯೋಗ ಮಾಡುತ್ತಿದ್ದಾರೆ.ಪ್ರತಿ ವರ್ಷ ಮಕ್ಕಳಿಗೆ ಪುಸ್ತಕ ಮತ್ತು ಸಮವಸ್ತ್ರ ವಿತರಣೆ ಮಾಡುವುದರ ಜತೆಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಲೆಯಲ್ಲಿ ಸ್ಥಾಪನೆ ಮಾಡಿದ್ದಾರೆ.
ಶಾಲೆಯನ್ನು ದತ್ತು ಸ್ವೀಕಾರ ಮಾಡಿರುವ ಲಯನ್ಸ್ ಕ್ಲಬ್ ವಲಯಾಧ್ಯಕ್ಷ ಕನಕ ಗ್ರೂಪ್ ಜಗದೀಶ ಶೆಟ್ಟಿ ಕುದ್ರಕೋಡು ಮಾತನಾಡಿ,ಇಂಗ್ಲಿಷ್ ಶಿಕ್ಷಣದ ಮೇಲಿನ ವ್ಯಾಮೋಹ ಮತ್ತು ಆಧುನಿಕ ಜೀವನ ಶೈಲಿಗೆ ಮಾರು ಹೋಗಿದ್ದರಿಂದ ಇಂದು ಗ್ರಾಮೀಣ ಪ್ರದೇಶದಲ್ಲಿರುವ ಸರಕಾರಿ ಶಾಲೆಗಳು ಬಾಗಿಲು ಹಾಕುವ ಸ್ಥಿತಿಗೆ ಬಂದು ತಲುಪಿದೆ.ಆದರೆ ಯಾವುದೇ ವ್ಯವಸ್ಥೆಯನ್ನು ಅನುಭವಿಸಲು ಸಾಧ್ಯವಿಲ್ಲದ ಕುಟುಂಬದ ಮಕ್ಕಳಿಗೆ ವಿದ್ಯಾಭ್ಯಾಸ ಮಾಡಲು ಸರಕಾರಿ ಶಾಲೆಗಳ ಬಾಗಿಲು ಸದಾ ತೆರೆದಿರಬೇಕು ಎಂದು ಹೇಳಿದರು.
ನಾವುಂದ ಗ್ರಾಮ ಪಂಚಾಯತ್ ಅಧ್ಯಕ್ಷ ನರಸಿಂಹ ದೇವಾಡಿಗ ಮಾತನಾಡಿ,ಪ್ರತಿಯೊಬ್ಬ ಉದ್ಯಮಿ ಕೂಡ ತನ್ನ ಊರಿನಲ್ಲಿರುವ ಶಾಲೆಯನ್ನು ದತ್ತು ತೆಗೆದುಕೊಳ್ಳುವುದರ ಮೂಲಕ ಊರಿನ ಮಕ್ಕಳ ಶಿಕ್ಷಣೆಕ್ಕೆ ಪ್ರೋತ್ಸಾಹ ನೀಡಬೇಕು.ಸರಕಾರಿ ಶಾಲೆಗಳು ಉಳಿದರೆ ಮಾತ್ರ ಬಡ ಮಕ್ಕಳು ಶಿಕ್ಷಣವಂತರಾಗಲು ಸಾಧ್ಯ ಎಂದರು.
ವರದಿ: ಜಗದೀಶ ದೇವಾಡಿಗ ಮುಳ್ಳಿಕಟ್ಟೆ
[8:35 pm, 12/01/2024] At Work: ಪ್ರೋತ್ಸಾಹ
[8:35 pm, 12/01/2024] At Work: ಶಾಲೆಯನ್ನು ದತ್ತು ಸ್ವೀಕಾರ ಮಾಡಿರುವ,
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…