ಕುಂದಾಪುರ

ಕನಕ ಜಗದೀಶ್ ಶೆಟ್ಟಿಗೆ ವಿದ್ಯಾ ಪೋಷಕ ರತ್ನ ಪ್ರಶಸ್ತಿ

Share

Advertisement
Advertisement

ಕುಂದಾಪುರ:ಬೈಂದೂರು ತಾಲೂಕಿನ ನಾವುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಕಿರಿಯ ಪ್ರಾಥಮಿಕ ಕೋಯಾನಗರ ಶಾಲೆಯನ್ನು ಕಳೆದ ಎಂಟು ವರ್ಷಗಳಿಂದ ದತ್ತು ತೆಗೆದು ಕೊಂಡು ಬಡ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹವನ್ನು ನೀಡುತ್ತಿರುವ ಕನಕ ಗ್ರೂಪ್ ಜಗದೀಶ್ ಶೆಟ್ಟಿ ಕುದ್ರುಕೋಡು ಅವರನ್ನು ಜ.13 ರಂದು ಶಾಲೆಯಲ್ಲಿ ನಡೆಯಲಿರುವ ಸುವರ್ಣ ಮಹೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಮತ್ತು ಶಾಲಾ ಮಕ್ಕಳ ಪೋಷಕ ವೃಂದದವರ ವತಿಯಿಂದ ವಿದ್ಯಾ ಪೋಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಿದ್ದಾರೆ.

Advertisement

ಸರಕಾರಿ ಶಾಲೆಯನ್ನು ದತ್ತು ಸ್ವೀಕಾರ ಮಾಡಿದ ಉದ್ಯಮಿ:ನಾವುಂದ 5.ಸೆಂಟ್ಸ್ ಕಾಲೋನಿಯಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಕೋಯಾನರ ಶಾಲೆಯಲ್ಲಿ 5ನೇ ತರಗತಿ ವರೆಗೆ ವಿದ್ಯಾಭ್ಯಾಸವನ್ನು ನೀಡಲಾಗುತ್ತಿದ್ದು ಪ್ರಸ್ತುತ 57 ವಿದ್ಯಾರ್ಥಿಗಳು ಓದುತ್ತಿದ್ದಾರೆ.ಕಾಲೋನಿಯ ಮಕ್ಕಳೆ ಹೆಚ್ಚಾಗಿ ಬರುವ ಕೋಯಾನಗರ ಶಾಲೆಯನ್ನು ಕನಕ ಗ್ರೂಪ್ ಉದ್ಯಮಿ ಜಗದೀಶ್ ಶೆಟ್ಟಿ ಕುದ್ರಕೋಡು ಅವರು ಕಳೆದ ಎಂಟು ವರ್ಷಗಳ ಹಿಂದೆಯೇ ದತ್ತು ಸ್ವೀಕಾರ ಮಾಡಿ ಶಾಲೆಗೆ ಮೂಲ ಭೂತ ಸೌಕರ್ಯಗಳನ್ನು ಒದಗಿಸುವುದರ ಮುಖೇನ ಅತಿಥಿ ಶಿಕ್ಷಕರ ಸಂಬಳ,ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಿಕ್ಷಾ ವ್ಯವಸ್ಥೆ ಸಹಿತ ತಿಂಗಳಿಗೆ 20,000.ರೂ ಅನ್ನು ವಿನಿಯೋಗ ಮಾಡುತ್ತಿದ್ದಾರೆ.ಪ್ರತಿ ವರ್ಷ ಮಕ್ಕಳಿಗೆ ಪುಸ್ತಕ ಮತ್ತು ಸಮವಸ್ತ್ರ ವಿತರಣೆ ಮಾಡುವುದರ ಜತೆಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಲೆಯಲ್ಲಿ ಸ್ಥಾಪನೆ ಮಾಡಿದ್ದಾರೆ.

ಶಾಲೆಯನ್ನು ದತ್ತು ಸ್ವೀಕಾರ ಮಾಡಿರುವ ಲಯನ್ಸ್ ಕ್ಲಬ್ ವಲಯಾಧ್ಯಕ್ಷ ಕನಕ ಗ್ರೂಪ್ ಜಗದೀಶ ಶೆಟ್ಟಿ ಕುದ್ರಕೋಡು ಮಾತನಾಡಿ,ಇಂಗ್ಲಿಷ್ ಶಿಕ್ಷಣದ ಮೇಲಿನ ವ್ಯಾಮೋಹ ಮತ್ತು ಆಧುನಿಕ ಜೀವನ ಶೈಲಿಗೆ ಮಾರು ಹೋಗಿದ್ದರಿಂದ ಇಂದು ಗ್ರಾಮೀಣ ಪ್ರದೇಶದಲ್ಲಿರುವ ಸರಕಾರಿ ಶಾಲೆಗಳು ಬಾಗಿಲು ಹಾಕುವ ಸ್ಥಿತಿಗೆ ಬಂದು ತಲುಪಿದೆ.ಆದರೆ ಯಾವುದೇ ವ್ಯವಸ್ಥೆಯನ್ನು ಅನುಭವಿಸಲು ಸಾಧ್ಯವಿಲ್ಲದ ಕುಟುಂಬದ ಮಕ್ಕಳಿಗೆ ವಿದ್ಯಾಭ್ಯಾಸ ಮಾಡಲು ಸರಕಾರಿ ಶಾಲೆಗಳ ಬಾಗಿಲು ಸದಾ ತೆರೆದಿರಬೇಕು ಎಂದು ಹೇಳಿದರು.
ನಾವುಂದ ಗ್ರಾಮ ಪಂಚಾಯತ್ ಅಧ್ಯಕ್ಷ ನರಸಿಂಹ ದೇವಾಡಿಗ ಮಾತನಾಡಿ,ಪ್ರತಿಯೊಬ್ಬ ಉದ್ಯಮಿ ಕೂಡ ತನ್ನ ಊರಿನಲ್ಲಿರುವ ಶಾಲೆಯನ್ನು ದತ್ತು ತೆಗೆದುಕೊಳ್ಳುವುದರ ಮೂಲಕ ಊರಿನ ಮಕ್ಕಳ ಶಿಕ್ಷಣೆಕ್ಕೆ ಪ್ರೋತ್ಸಾಹ ನೀಡಬೇಕು.ಸರಕಾರಿ ಶಾಲೆಗಳು ಉಳಿದರೆ ಮಾತ್ರ ಬಡ ಮಕ್ಕಳು ಶಿಕ್ಷಣವಂತರಾಗಲು ಸಾಧ್ಯ ಎಂದರು.

ವರದಿ: ಜಗದೀಶ ದೇವಾಡಿಗ ಮುಳ್ಳಿಕಟ್ಟೆ

[8:35 pm, 12/01/2024] At Work: ಪ್ರೋತ್ಸಾಹ
[8:35 pm, 12/01/2024] At Work: ಶಾಲೆಯನ್ನು ದತ್ತು ಸ್ವೀಕಾರ ಮಾಡಿರುವ,

Advertisement
Advertisement

Share
Team Kundapur Times

Recent Posts

ಕಿರಿಮಂಜೇಶ್ವರ ಶ್ರೀ ಅಗಸ್ತೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಉತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…

16 hours ago

ಶ್ರೀ ಪ್ರಸನ್ನ ಗಣಪತಿ ದೇವಸ್ಥಾನ ಉಪ್ಕಲ್‍ಮಠ ನಾಡ:ಗಣೇಶೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…

16 hours ago

ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ:ಹಲವು ದ್ವಿಚಕ್ರ ವಾಹನಗಳು ಪಲ್ಟಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…

18 hours ago

ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ

ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…

21 hours ago

ತಿಮಿಂಗಿಲ ಮೀನಿನ ಕಳೆಬರ ಪತ್ತೆ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್‍ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…

3 days ago

ವಲಯ ಅರಣ್ಯಾಧಿಕಾರಿ ಸವಿತಾ ಆರ್ ದೇವಾಡಿಗಗೆ ಮುಖ್ಯಮಂತ್ರಿ ಪದಕ

ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…

4 days ago