ಕುಂದಾಪುರ

ಕನಕ ಜಗದೀಶ್ ಶೆಟ್ಟಿಗೆ ವಿದ್ಯಾ ಪೋಷಕ ರತ್ನ ಪ್ರಶಸ್ತಿ

Share

ಕುಂದಾಪುರ:ಬೈಂದೂರು ತಾಲೂಕಿನ ನಾವುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಕಿರಿಯ ಪ್ರಾಥಮಿಕ ಕೋಯಾನಗರ ಶಾಲೆಯನ್ನು ಕಳೆದ ಎಂಟು ವರ್ಷಗಳಿಂದ ದತ್ತು ತೆಗೆದು ಕೊಂಡು ಬಡ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹವನ್ನು ನೀಡುತ್ತಿರುವ ಕನಕ ಗ್ರೂಪ್ ಜಗದೀಶ್ ಶೆಟ್ಟಿ ಕುದ್ರುಕೋಡು ಅವರನ್ನು ಜ.13 ರಂದು ಶಾಲೆಯಲ್ಲಿ ನಡೆಯಲಿರುವ ಸುವರ್ಣ ಮಹೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಮತ್ತು ಶಾಲಾ ಮಕ್ಕಳ ಪೋಷಕ ವೃಂದದವರ ವತಿಯಿಂದ ವಿದ್ಯಾ ಪೋಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಿದ್ದಾರೆ.

ಸರಕಾರಿ ಶಾಲೆಯನ್ನು ದತ್ತು ಸ್ವೀಕಾರ ಮಾಡಿದ ಉದ್ಯಮಿ:ನಾವುಂದ 5.ಸೆಂಟ್ಸ್ ಕಾಲೋನಿಯಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಕೋಯಾನರ ಶಾಲೆಯಲ್ಲಿ 5ನೇ ತರಗತಿ ವರೆಗೆ ವಿದ್ಯಾಭ್ಯಾಸವನ್ನು ನೀಡಲಾಗುತ್ತಿದ್ದು ಪ್ರಸ್ತುತ 57 ವಿದ್ಯಾರ್ಥಿಗಳು ಓದುತ್ತಿದ್ದಾರೆ.ಕಾಲೋನಿಯ ಮಕ್ಕಳೆ ಹೆಚ್ಚಾಗಿ ಬರುವ ಕೋಯಾನಗರ ಶಾಲೆಯನ್ನು ಕನಕ ಗ್ರೂಪ್ ಉದ್ಯಮಿ ಜಗದೀಶ್ ಶೆಟ್ಟಿ ಕುದ್ರಕೋಡು ಅವರು ಕಳೆದ ಎಂಟು ವರ್ಷಗಳ ಹಿಂದೆಯೇ ದತ್ತು ಸ್ವೀಕಾರ ಮಾಡಿ ಶಾಲೆಗೆ ಮೂಲ ಭೂತ ಸೌಕರ್ಯಗಳನ್ನು ಒದಗಿಸುವುದರ ಮುಖೇನ ಅತಿಥಿ ಶಿಕ್ಷಕರ ಸಂಬಳ,ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಿಕ್ಷಾ ವ್ಯವಸ್ಥೆ ಸಹಿತ ತಿಂಗಳಿಗೆ 20,000.ರೂ ಅನ್ನು ವಿನಿಯೋಗ ಮಾಡುತ್ತಿದ್ದಾರೆ.ಪ್ರತಿ ವರ್ಷ ಮಕ್ಕಳಿಗೆ ಪುಸ್ತಕ ಮತ್ತು ಸಮವಸ್ತ್ರ ವಿತರಣೆ ಮಾಡುವುದರ ಜತೆಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಲೆಯಲ್ಲಿ ಸ್ಥಾಪನೆ ಮಾಡಿದ್ದಾರೆ.

ಶಾಲೆಯನ್ನು ದತ್ತು ಸ್ವೀಕಾರ ಮಾಡಿರುವ ಲಯನ್ಸ್ ಕ್ಲಬ್ ವಲಯಾಧ್ಯಕ್ಷ ಕನಕ ಗ್ರೂಪ್ ಜಗದೀಶ ಶೆಟ್ಟಿ ಕುದ್ರಕೋಡು ಮಾತನಾಡಿ,ಇಂಗ್ಲಿಷ್ ಶಿಕ್ಷಣದ ಮೇಲಿನ ವ್ಯಾಮೋಹ ಮತ್ತು ಆಧುನಿಕ ಜೀವನ ಶೈಲಿಗೆ ಮಾರು ಹೋಗಿದ್ದರಿಂದ ಇಂದು ಗ್ರಾಮೀಣ ಪ್ರದೇಶದಲ್ಲಿರುವ ಸರಕಾರಿ ಶಾಲೆಗಳು ಬಾಗಿಲು ಹಾಕುವ ಸ್ಥಿತಿಗೆ ಬಂದು ತಲುಪಿದೆ.ಆದರೆ ಯಾವುದೇ ವ್ಯವಸ್ಥೆಯನ್ನು ಅನುಭವಿಸಲು ಸಾಧ್ಯವಿಲ್ಲದ ಕುಟುಂಬದ ಮಕ್ಕಳಿಗೆ ವಿದ್ಯಾಭ್ಯಾಸ ಮಾಡಲು ಸರಕಾರಿ ಶಾಲೆಗಳ ಬಾಗಿಲು ಸದಾ ತೆರೆದಿರಬೇಕು ಎಂದು ಹೇಳಿದರು.
ನಾವುಂದ ಗ್ರಾಮ ಪಂಚಾಯತ್ ಅಧ್ಯಕ್ಷ ನರಸಿಂಹ ದೇವಾಡಿಗ ಮಾತನಾಡಿ,ಪ್ರತಿಯೊಬ್ಬ ಉದ್ಯಮಿ ಕೂಡ ತನ್ನ ಊರಿನಲ್ಲಿರುವ ಶಾಲೆಯನ್ನು ದತ್ತು ತೆಗೆದುಕೊಳ್ಳುವುದರ ಮೂಲಕ ಊರಿನ ಮಕ್ಕಳ ಶಿಕ್ಷಣೆಕ್ಕೆ ಪ್ರೋತ್ಸಾಹ ನೀಡಬೇಕು.ಸರಕಾರಿ ಶಾಲೆಗಳು ಉಳಿದರೆ ಮಾತ್ರ ಬಡ ಮಕ್ಕಳು ಶಿಕ್ಷಣವಂತರಾಗಲು ಸಾಧ್ಯ ಎಂದರು.

ವರದಿ: ಜಗದೀಶ ದೇವಾಡಿಗ ಮುಳ್ಳಿಕಟ್ಟೆ

[8:35 pm, 12/01/2024] At Work: ಪ್ರೋತ್ಸಾಹ
[8:35 pm, 12/01/2024] At Work: ಶಾಲೆಯನ್ನು ದತ್ತು ಸ್ವೀಕಾರ ಮಾಡಿರುವ,

Advertisement

Share
Team Kundapur Times

Recent Posts

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

7 days ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago